ಅಮರ್‌ ಪ್ರೇಮ: ಅಭಿ ಪಿಕ್ಚರ್‌ ಬಾಕಿ ಹೇ.


Team Udayavani, Jun 1, 2018, 7:54 PM IST

su-10.jpg

ಖುಷಿಯಿಂದ ಹೇಳಿಕೊಂಡರು ನಾಗಶೇಖರ್‌. ಅವರು ಅದೃಷ್ಟ ಅಂತ ಹೇಳುವುದಕ್ಕೂ ಕಾರಣವಿದೆ. ಪ್ರಮುಖವಾಗಿ ಅಂಬರೀಶ್‌ ಮಗ ಅಭಿಷೇಕ್‌ ಅಭಿನಯದ “ಅಮರ್‌’ ಚಿತ್ರವನ್ನು ನಿರ್ದೇಶಿಸುವ ಅವಕಾಶ ಅವರಿಗೆ ಬಂದಿತ್ತಂತೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುವಷ್ಟರಲ್ಲಿ, ಆ ಅವಕಾಶ ಬೇರೆಯವರ ಪಾಲಾಗಿದೆ. ಇನ್ನು ಅವಕಾಶ ಸಿಗುತ್ತದೋ ಇಲ್ಲವೋ ಎನ್ನುವ ಸಂದರ್ಭದಲ್ಲಿ ಮತ್ತೆ ಆ ಅವಕಾಶ ಅವರನ್ನೇ ಹುಡುಕಿಕೊಂಡು ಬಂದಿದೆ. ಅಭಿಷೇಕ್‌ ಅಭಿನಯದ ಮೊದಲ ಚಿತ್ರವನ್ನು ನಿರ್ದೇಶಿಸುವ ಅವಕಾಶ ಅವರಿಗೇ ಮತ್ತೆ ಸಿಕ್ಕಿದೆ. ಇತ್ತೀಚೆಗೆ ಆ ಚಿತ್ರದ ಮುಹೂರ್ತ ಸಹ ಸರಳವಾಗಿ ಆಗಿದೆ.

ಅಂದು ಜೆ.ಪಿ. ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಚಿತ್ರಕ್ಕೆ ಚಾಲನೆ ಕೊಟ್ಟು, ಚಿತ್ರತಂಡದವರೆಲ್ಲರೂ ಹೊರಗೆ ಬಂದರು. ಅಂಬರೀಶ್‌ ಅವರಂತೂ ಬೆವರಿನಲ್ಲಿ ತೊಯ್ದು ಹೋಗಿದ್ದರು. ಬೆವರೊರೆಸಿಕೊಳ್ಳುತ್ತಲೇ, “ಬೇಗ ಶುರು ಮಾಡ್ರಯ್ಯ’ ಅಂತ ಪತ್ರಿಕಾಗೋಷ್ಠಿ ಶುರು ಮಾಡಿಸಿದರು. ಅವರ ಪಕ್ಕ ಸುಮಲತಾ ಅಂಬರೀಶ್‌ ಇದ್ದರೆ, ಇನ್ನೊಂದು ಪಕ್ಕದಲ್ಲಿ ನಿರ್ಮಾಪಕ ಸಂದೇಶ್‌ ನಾಗರಾಜ್‌ ಇದ್ದರು. ಮಿಕ್ಕಂತೆ ಅಭಿಷೇಕ್‌, ಸಂದೇಶ್‌, ನಾಗಶೇಖರ್‌, ನಾಯಕಿ ತಾನ್ಯ ಹೋಪ್‌ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಮೊದಲು ಮಾತನಾಡಿದ್ದು ನಾಗಶೇಖರ್‌, “ಅಮರ್‌’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. “ಇದೊಂದು ಸುಂದರ ಲವ್‌ಸ್ಟೋರಿ. ಇದುವರೆಗೆ ನಾನು ಮಾಡಿದ ಚಿತ್ರಗಳಿಗಿಂತಲೂ ವಿಭಿನ್ನವಾಗಿರುವ ಕಥೆ ಇದು. 90ರ ದಶಕದಲ್ಲಿ ಹೀರೋಯಿನ್‌ ಒಬ್ಬರ ಜೀವನದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ. ಇಲ್ಲಿ ನಾಯಕ-ನಾಯಕಿ ಇಬ್ಬರೂ ಬೈಕ್‌ ರೇಸರ್‌ಗಳಾಗಿದ್ದು, ಚಿತ್ರದಲ್ಲಿ ಬೈಕ್‌ ರೇಸ್‌ ಸಹ ಇರಲಿದೆ. ಹಾಗಂತ ಇದು ಆ್ಯಕ್ಷನ್‌ ಚಿತ್ರವಲ್ಲ. ಇದೊಂದು ಲವ್‌ ಸ್ಟೋರಿ. ಕಥೆಗೆ ಸೂಕ್ತವಾಗಿ ಒಂದಿಷ್ಟು ಆ್ಯಕ್ಷನ್‌ ದೃಶ್ಯಗಳಿವೆ. ಕಥೆಗೆ ತಕ್ಕಂತಹ ಸೂಪರ್‌ ಸ್ಟಾರ್‌ ಹೀರೋ ಕೂಡ ಸಿಕ್ಕಾಗಿದೆ. ಅಭಿಷೇಕ್‌ ಪಕ್ಕಾ ತಯಾರಿಯೊಂದಿಗೇ ಬಂದಿದ್ದಾರೆ. ನಟನೆ ಕಲಿತಿದ್ದಾರೆ. ಡ್ಯಾನ್ಸ್‌ ಗೊತ್ತು, ವಿದ್ಯಾವಂತ ಹುಡುಗ ಕೂಡ, ಆ್ಯಕ್ಷನ್‌ನಲ್ಲೂ ಪಕ್ವಗೊಂಡಿದ್ದಾರೆ. ಇವತ್ತು ದಿನ ಚೆನ್ನಾಗಿತ್ತು ಅಂತ ಮುಹೂರ್ತ ಮಾಡಿದ್ದೇವೆ. ಮುಂದಿನ ತಿಂಗಳು ಚಿತ್ರೀಕರಣ ಪ್ರಾರಂಭವಾಗಲಿವೆ. ಅದಕ್ಕೂ ಮುನ್ನ ಒಂದು ದೊಡ್ಡ ಕಾರ್ಯಕ್ರಮ ಮಾಡಿ, ಅಭಿಷೇಕ್‌ ಅವರನ್ನು ಪರಿಚಯಿಸಲಾಗುತ್ತದೆ. ಆ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ದಿಗ್ಗಜರೆಲ್ಲಾ ಬರುವ ಸಾಧ್ಯತೆ ಇದೆ. ಇನ್ನು ಒಂದು ಹಾಡಿನಲ್ಲಿ ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರ ಜೊತೆಗೆ ಕನ್ನಡ ಚಿತ್ರರಂಗದ ಟಾಪ್‌ ಸ್ಟಾರ್‌ಗಳೂ ಸಹ ಕಾಣಿಸಿಕೊಳ್ಳುವ ಸಾಧ್ಯತೆ ಇದೆ’ ಎಂದರು.

ಅಂಬರೀಶ್‌ ಅಭಿನಯದ “ಮಣ್ಣಿನ ದೋಣಿ’ ಚಿತ್ರದ ಮೂಲಕ ನಿರ್ಮಾಪಕರಾದ ಸಂದೇಶ್‌ ನಾಗರಾಜ್‌, ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರೆಂದೇ ಹೆಸರಾದವರು. ಅಂಬರೀಷ್‌ ನಟನೆಯ ಸಾಕಷ್ಟು ಚಿತ್ರಗಳನ್ನು ನಿರ್ಮಿಸಿರುವ ಸಂದೇಶ್‌ ನಾಗರಾಜ್‌, ಈಗ ಅಂಬರೀಷ್‌ ಅವರ ಪುತ್ರ ಅಭಿಷೇಕ್‌ ಅವರನ್ನೂ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.  ಈ ಕುರಿತು ಮಾತನಾಡಿದ ಅವರು, “ಮಗನನ್ನು ಲಾಂಚ್‌ ಮಾಡುತ್ತೀನಿ ಎಂದೆ. ಅದಕ್ಕೆ ಅಂಬರೀಶ್‌ ಮತ್ತು ಸುಮಲತಾ ಇಬ್ಬರೂ ಒಪ್ಪಿದರು. 

ಅಭಿಷೇಕ್‌ ಒಳ್ಳೆಯ ಹುಡುಗ. ಅವನನ್ನು ನನ್ನ ಬ್ಯಾನರ್‌ ಮೂಲಕ ಪರಿಚಯಿಸುತ್ತಿರುವುದು ಖುಷಿಯ ವಿಷಯ’ ಎಂದರು ಸಂದೇಶ್‌ ನಾಗರಾಜ್‌.
ಅಂಬರೀಶ್‌ ಅವರು ತಮ್ಮ ಮಗನಿಗೆ ಏನು ಕಿವಿಮಾತು ಹೇಳಿದ್ದಾರೆ ಎಂಬ ಪ್ರಶ್ನೆಯನ್ನು ಅಂಬರೀಶ್‌ ಅವರ ಮುಂದಿಡಲಾಯಿತು. “ಸೆಟ್‌ಗೆ ಹೋದರೆ ನೀನೊಬ್ಬ ನಟ ಮಾತ್ರ. ಹೋಗಿ ಶ್ರದ್ಧೆಯಿಂದ ನಿನ್ನ ಕೆಲಸವನ್ನು ಮಾಡಿಕೊಂಡು ಬಾ ಅಂತ ಹೇಳುತ್ತೇನೆ. ನಾನು ಅಂಬರೀಶ್‌ ಅವರ ಮಗ, ನಿರ್ಮಾಪಕ ಸಂದೇಶ್‌ ನನ್ನ ಫ್ರೆಂಡ್‌ ಅಂತೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳದೆ, ಒಬ್ಬ ನಟನಾಗಿ ನಿರ್ದೇಶಕರು ಏನು ಹೇಳುತ್ತಾರೋ ಅದನ್ನು ಮಾಡು ಅಂತ ಹೇಳಿದ್ದೇನೆ’ ಎಂದು ಅಂಬರೀಶ್‌ ಹೇಳಿದರು.

ಇನ್ನು ಅಭಿಷೇಕ್‌ ಹೆಚ್ಚು ಮಾತನಾಡಲಿಲ್ಲ. ಎಲ್ಲರ ಸಹಕಾರ, ಪ್ರೋತ್ಸಾಹಗಳಿರಲಿ ಎಂದು ಹೇಳಿ ಮಾತು ಮುಗಿಸಿದರು.

ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.