ಅಮವಾಸೆಯಲ್ಲೊಂದು ಹಾಡು


Team Udayavani, Apr 14, 2017, 3:50 AM IST

14-SUCHI-3.jpg

“ಅಮವಾಸೆ …’ ಇದು ಕತ್ತಲ ಅಮವಾಸೆ ಅಲ್ಲ. ಬದಲಾಗಿ ನಾಲ್ವರ ಹುಡುಗರ ಮೊದಲ ಅಕ್ಷರ ಸೇರಿಸಿ ಇಟ್ಟಿರುವ ಶೀರ್ಷಿಕೆ..’

ಹೀಗೆ ಹೇಳುವ ಮೂಲಕ ಮೊದಲೇ ಸ್ಪಷ್ಟಪಡಿಸಿದರು ನಿರ್ದೇಶಕ ಪ್ರಶಾಂತ್‌. “ಅಮರ್‌, ಮಹೇಶ್‌, ವಾಸು ಮತ್ತು ಸೇಂದಿ’ ಈ ನಾಲ್ವರು ಹುಡುಗರು ಸಿನಿಮಾದ ಹೈಲೆಟ್‌. ಹಾಗಂತ ಇದು ಹಾರರ್‌ ಸಿನಿಮಾ ಅಲ್ಲ. ಎಲ್ಲೋ ಒಂದು ಕಡೆ ಆ ನಿಟ್ಟಿನಲ್ಲಿ ಜಾಡು ಹಿಡಿಯೋ ಕಥೆ. ಒಂದು ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ನಾಲ್ವರು ಹುಡುಗರ ಲೈಫ‌ಲ್ಲಿ ಏನೆಲ್ಲಾ ನಡೆಯುತ್ತೆ ಎಂಬುದೇ ಒನ್‌ಲೈನ್‌ ಅಂತ ಹೇಳುತ್ತಾ ಹೋದರು ಪ್ರಶಾಂತ್‌. ನಿರ್ದೇಶಕರಿಗೆ ಇದು ಮೊದಲ ಸಿನಿಮಾ. ಈ ಹಿಂದೆ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದರಂತೆ. ಆಗ ಹುಟ್ಟಿಕೊಂಡ ಒಂದು ಕಥೆಯನ್ನೇ ಹಿಡಿದು ಸಿನಿಮಾ ಮಾಡಿದ್ದಾರೆ ಪ್ರಶಾಂತ್‌. ಚಿತ್ರ ಮುಗಿಸಿದ ಖುಷಿಯಲ್ಲಿರುವ ಚಿತ್ರತಂಡ, ಆಡಿಯೋ ಸಿಡಿ ಬಿಡುಗಡೆ ಸಂಭ್ರಮಕ್ಕೆ ಅಂದು ಸಾಕ್ಷಿಯಾಯಿತು. 

ಅಂದಿನ ಹೈಲೆಟ್‌ ಅಣಜಿ ನಾಗರಾಜ್‌. ಅವರು “ವಿ ಆಡಿಯೋ ಆ್ಯಂಡ್‌ ವೀಡಿಯೋ’ ಎಂಬ ಹೊಸ ಸಂಸ್ಥೆ ಹುಟ್ಟುಹಾಕಿ, ಆ ಮೂಲಕ “ಅಮವಾಸೆ’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಿದರು. ಡಾ. ದೊಡ್ಡರಂಗೇಗೌಡರು ಇದಕ್ಕೆ ಕೈ ಜೋಡಿಸಿ “ಅಮವಾಸೆ’ ತಂಡಕ್ಕೆ ಶುಭಹಾರೈಸಿದರು.

ಇನ್ನು, ನಿರ್ಮಾಣಕ್ಕೆ ಕೈ ಹಾಕಿರೋದು ಡಾ.ಚಂದ್ರಶೇಖರ್‌. ಅವರಿಗೆ ಇದು ಮೊದಲ ಚಿತ್ರ. “ನನಗೆ ಸಿನಿಮಾ ಗೊತ್ತಿಲ್ಲ. ಗೆಳೆಯ ಜಗದೀಶ್‌ ಮತ್ತು ನಾನು ಸೇರಿ ಈ ಚಿತ್ರ ಮಾಡಿದ್ದೇವೆ. ಯುವ ಪ್ರತಿಭೆಗಳಲ್ಲಿ ಹೊಸತನ ಇದೆ ಎಂದು ತಿಳಿದು, ಅವರಿಗೆ ವೇದಿಕೆ ಕಲ್ಪಿಸಿದ್ದೇವೆ. ಚಿತ್ರದ ಕಥೆ, ಹಾಡು, ಎಲ್ಲವೂ ಚೆನ್ನಾಗಿದೆ. ನಮ್ಮ ಈ ಬ್ಯಾನರ್‌ನ ಉದ್ದೇಶ ಹೊಸಬರಿಗೆ ಅವಕಾಶ ಕಲ್ಪಿಸುವುದು. “ಅಮವಾಸೆ’ ಅಂದಾಕ್ಷಣ, ಎಲ್ಲರಿಗೂ ಇದು ದೆವ್ವ-ಭೂತ ಕುರಿತ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ, ಇದು ಯಾವ ಬಗೆಯ ಸಿನಿಮಾ ಎಂಬುದಕ್ಕೆ ಚಿತ್ರಮಂದಿರಕ್ಕೇ ಬರಬೇಕು. ಇದು ಈಗಿನ ಯೂತ್ಸ್ಗೆ ಇಷ್ಟವಾಗುವ ಸಿನಿಮಾವಂತೂ ಹೌದು’ ಎನ್ನುತ್ತಾರೆ ನಿರ್ಮಾಪಕರು.

ಚಿತ್ರಕ್ಕೆ ಮಂಜು ಕವಿ ನಾಲ್ಕು ಹಾಡುಗಳಿಗೆ ಗೀತೆಗಳನ್ನು ಬರೆದಿದ್ದಾರೆ. ಹರಿಬಾಬು ಅವರು ಸಂಗೀತ ನೀಡಿದ್ದಾರೆ. ಚಿತ್ರದ ನಾಯಕ ರಾಜೀವ್‌ ಬಂದಿರಲಿಲ್ಲ. ನಾಯಕಿಯೂ ಗೈರು ಹಾಜರಿಯಲ್ಲಿದ್ದರು. ವಿನಯ್‌, ವಾಸು, ಲೋಕಿ, ಅಭಯ್‌, ರಾಘು ಇವರೆಲ್ಲರಿಗೂ ಇದು ಮೊದಲ ಅನುಭವ. ಬಿಳಿಕೆರೆ ಮಂಜು ಎಂಬ ಮೈಸೂರು ಹುಡುಗನಿಗೆ ಇಲ್ಲಿ ಖಳನಟನ ಪಾತ್ರ ಸಿಕ್ಕಿದೆಯಂತೆ. ಇನ್ನು, ಮೈಸೂರು ರಾಜು ಸಿನಿಮಾದಲ್ಲಿರುವ ನಾಲ್ಕು ಹಾಡುಗಳಿಗೂ ನೃತ್ಯ ಸಂಯೋಜನೆ ಮಾಡಿದ್ದಾರೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.