ರಮಣ-ರಮಣಿ ಜೊತೆಗೆ ವೆಸ್ಲೆ ಚಿತ್ರ


Team Udayavani, Mar 16, 2018, 8:15 AM IST

a-23.jpg

ಒಂದು ಕಾಲಕ್ಕೆ ಒಂದೇ ಚಿತ್ರಕ್ಕೆ ಹಲವು ಜವಾಬ್ದಾರಿಗಳನ್ನು ಹೊರುತ್ತಿದ್ದ ವೆಸ್ಲೆ ಬ್ರೌನ್‌, ಸದ್ದಿಲ್ಲದೆ ಒಂದು ಹೊಸ ಚಿತ್ರವನ್ನು
ಪ್ರಾರಂಭಿಸಿದ್ದಾರೆ. ವಿಶೇಷವೆಂದರೆ, ಅವರ ಹೊಸ ಚಿತ್ರ “ರಮಣ-ರಮಣಿ’ಗೆ ಅವರು ಹೆಚ್ಚು ಜವಾಬ್ದಾರಿ ಬೇಡ ಅಂತ 
ತೀರ್ಮಾನಿಸಿಬಿಟ್ಟಿದ್ದಾರೆ. ಕಥೆ, ಚಿತ್ರಕಥೆ, ಛಾಯಾಗ್ರಹಣ ಮತ್ತು ನಿರ್ದೇಶನ ಮಾತ್ರ ತಮ್ಮ ಬಳಿ ಇಟ್ಟುಕೊಂಡು, ಮಿಕ್ಕಿದ್ದೆಲ್ಲವನ್ನೂ ಬೇರೆಯವರಿಗೆ ಹಂಚಿದ್ದಾರೆ. ಅಂದಹಾಗೆ, “ರಮಣ-ರಮಣಿ’ ಬಗ್ಗೆ ಮಾತನಾಡುವುದಕ್ಕೆ ಅವರು ತಮ್ಮ ತಂಡದ ಜೊತೆಗೆ
ಇತ್ತೀಚೆಗೆ ಬಂದಿದ್ದರು. ಈ ಚಿತ್ರದಲ್ಲಿ ಎಮೋಷನ್‌ಗೆ ಸಾಕಷ್ಟು ಒತ್ತು ನೀಡಿದ್ದಾರಂತೆ. “ಕಳೆದ ಒಂದೂವರೆ ವರ್ಷಗಳ ಕಾಲು ಕೂತು ಕಥೆ ಮಾಡಿದ್ದೇನೆ. ಚಿತ್ರದಲ್ಲಿ ಎಮೋಷನ್‌ಗಳಿಗೆ ಸಾಕಷ್ಟು ಒತ್ತು ಕೊಟ್ಟಿದ್ದೇನೆ. ಚಿತ್ರ ನೋಡಿದವರಿಗೆ ನಿಜವಾದ ಬದುಕು ಅರ್ಥವಾಗುತ್ತದೆ. ಈಗಾಗಲೇ ಶಿವಮೊಗ್ಗ ಮುಂತಾದ ಕಡೆ 20 ಪರ್ಸೆಂಟ್‌ ಚಿತ್ರೀಕರಣ ಮುಗಿದಿದೆ’ ಎಂದು ಹೇಳುತ್ತಾರೆ
ಅವರು.

ಇನ್ನು ಈ ಚಿತ್ರವನ್ನು ಜಯರಾಜ್‌ ಎನ್ನುವವರು ನಿರ್ಮಿಸುತ್ತಿದ್ದಾರೆ. ಸಾಕಷ್ಟು ಸಿನಿಮಾಗಳನ್ನು ನೋಡಿರುವ ಅವರಿಗೆ ಒಂದು ಚಿತ್ರ ನಿರ್ಮಿಸಬೇಕು ಎಂಬ ಆಸೆ ಇತ್ತಂತೆ. ಅದು ಈ ಚಿತ್ರದ ಮೂಲಕ ಈಡೇರಿದೆ. ನಿರ್ಮಾಪಕರ ಸಿನಿಮಾ ಪ್ರೀತಿ
ಎಷ್ಟಿದೆ ಎಂದು ವಿವರಿಸಿದ ವೆಸ್ಲೆ, “ಒಮ್ಮೆ ನಾವು ಮಾಲ್‌ವೊಂದರಲ್ಲಿ “ಊರ್ವಿ’ ಸಿನಿಮಾ ನೋಡೋಕೆ ಹೋಗಿದ್ದೆವು. ಆದರೆ, ಜನ ಕಡಿಮೆ ಇದ್ದುದರಿಂದ ಪ್ರದರ್ಶನ ಕ್ಯಾನ್ಸೆಲ್‌ ಮಾಡುವುದಕ್ಕೆ ಚಿತ್ರಮಂದಿರದವರು ಯೋಚಿಸಿದ್ದರು. ಆದರೆ, ಚಿತ್ರ
ನೋಡಲೇಬೇಕೆಂದು ನಿರ್ಮಾಪಕರು, ಅಷ್ಟೂ ಟಿಕೆಟುಗಳನ್ನು ಕೊಂಡು ಚಿತ್ರ ತೋರಿಸಿದರು. ಇದು ಅವರ ಸಿನಿಮಾ ಪ್ರೀತಿ. ಆ ಪ್ರೀತಿ ಇರುವುದರಿಂದಲೇ, ಚಿತ್ರಕ್ಕೆ ಯಾವ ಸಮಸ್ಯೆಯೂ ಆಗಿಲ್ಲ’ ಎಂದು ವೆಸ್ಲೆ ಹೇಳಿದರು. ಈ ಚಿತ್ರದ ನಿರ್ಮಾಣದಲ್ಲಿ ದಯಾನಂದ ಮಠಪತಿ, ಎಚ್‌. ರವಿಕುಮಾರ್‌ ಮತ್ತು ಮುನಿರಾಜ್‌ ಸಹ ತೊಡಗಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಅಭಿರಾಮ್‌ ಮತ್ತು ರಜತ್‌ ಲಕ್ಷ್ಮೀ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಅಭಿರಾಮ್‌ ಈ ಹಿಂದೆ ವೆಸ್ಲೆ ಅವರ “ಮೊದಲ ಮಿಂಚು’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು. ಈಗ ಮತ್ತೆ ವೆಸ್ಲೆ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ ಎನ್ನುತ್ತಾರೆ ಅಭಿರಾಮ್‌. ಮಾಡಲಿಂಗ್‌ ಕ್ಷೇತ್ರದಲ್ಲಿದ್ದ ರಜತ್‌ ಲಕ್ಷ್ಮೀ ಈ ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕಿಯಾಗಿ ಚಿತ್ರರಂಗಕ್ಕೆ ಬಂದಿದ್ದಾರೆ. ಇನ್ನು ಅಭಿಲಾಶ್‌ ಮತ್ತು ಜೋಯೆಲ್‌ ಸಂಗೀತ ಸಂಯೋಜಿಸಿದರೆ, ಸುರೇಶ್‌ ಅರಸ್‌ ಅವರು ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.