ಅಣ್ಣಯ್ಯ ಅವರ ಪರಿಸರ ಕಾಳಜಿ


Team Udayavani, Jun 15, 2018, 6:00 AM IST

bb-29.jpg

ಸಾಮಾನ್ಯವಾಗಿ ತಮ್ಮ ಮಕ್ಕಳನ್ನು ಸಿನಿಮಾದಲ್ಲಿ ಹೀರೋ ಆಗಿ ಲಾಂಚ್‌ ಮಾಡುವಾಗ ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಕಥೆ ಬೇಕು, ಹೀರೋ ಇಂಟ್ರೋಡಕ್ಷನ್‌ ಜೋರಾಗಿರಬೇಕು, ಬಿಲ್ಡಪ್‌ಗ್ಳಿರಬೇಕು ಎಂದು ಬಯಸುವವರೇ ಹೆಚ್ಚು. ಆದರೆ, ಇಲ್ಲೊಂದು ದಂಪತಿ ತಮ್ಮ ಮಗನನ್ನು ಲಾಂಚ್‌ ಪರಿಸರದ ಕಾಳಜಿಯ ಕಥೆಯ ಮೂಲಕ ಲಾಂಚ್‌ ಮಾಡಲು ಮುಂದಾಗಿದೆ. ಆ ಸಿನಿಮಾಕ್ಕೆ ಅವರಿಟ್ಟ ಶೀರ್ಷಿಕೆ “ಸೂರ್ಯ ಇವ ವೃಕ್ಷ ಮಿತ್ರ’. ಈ ಸಿನಿಮಾ ಮೂಲಕ ಸಲ್ಮಾನ್‌ ಎಂಬ ನವನಟ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ಸಿನಿಮಾವನ್ನು ಅವರ ತಾಯಿ ಫಾತಿಮಾ ನಿರ್ಮಿಸಿದ್ದಾರೆ. ಈ ಹಿಂದೆ “ಅಕ್ಟೋಪಸ್‌’ ಸಿನಿಮಾ ಮಾಡಿದ್ದ ಅಣ್ಣಯ್ಯ ಈ ಚಿತ್ರದ ನಿರ್ದೇಶಕರು. 

ಅಂದಹಾಗೆ, “ಸೂರ್ಯ ಇವ ವೃಕ್ಷಮಿತ್ರ’ ಹೆಸರಿಗೆ ತಕ್ಕಂತೆ ಪರಿಸರದ ಕುರಿತ ಕಾಳಜಿಯಳ್ಳ ಸಿನಿಮಾ. ಮುಖ್ಯವಾಗಿ ಜೈವಿಕ ಇಂಧನಗಳನ್ನು ಬಳಸಿ ಪರಿಸರ ಮಾಲಿನ್ಯ ತಪ್ಪಿಸಿ ಎಂಬ ಸಂದೇಶದೊಂದಿಗೆ ಈ ಸಿನಿಮಾ ಸಾಗುತ್ತದೆ. ಅಂದಹಾಗೆ, ಇದು ಪರಿಸರ ಹೋರಾಟಗಾರ ಡಾ.ಯಲ್ಲಪ್ಪ ರೆಡ್ಡಿಯವರ “ಲೈಫ್ ಬಿಯಾಂಡ್‌ ಸೈನ್ಸ್‌’ ಎಂಬ ಕಾದಂಬರಿಯನ್ನಾಧರಿಸಿದೆ. ಎಲ್ಲಾ ಓಕೆ, ಈ ಕಥೆಯನ್ನು ಸಿನಿಮಾ ಮಾಡಲು ಕಾರಣವೇನು ಎಂದು ನೀವು ಕೇಳಬಹುದು. ಅದಕ್ಕೆ ನಿರ್ದೇಶಕ ಅಣ್ಣಯ್ಯ ಉತ್ತರಿಸುತ್ತಾರೆ. “ಮೊದಲು ನಿರ್ಮಾಪಕಿ ಫಾತಿಮಾ ಅವರಿಗೆ ಬೇರೊಂದು ಕಥೆ ಹೇಳಿದೆ. ಅದು ಅವರಿಗೆ ಇಷ್ಟವಾಗಲಿಲ್ಲ. ಪರಿಸರ ಕುರಿತಾದ ಹೊಸ ಬಗೆಯ ಸಿನಿಮಾ ಮಾಡೋಣ ಎಂದರು. ಆಗ ಪರಿಸರ ಹೋರಾಟಗಾರ ಡಾ. ಯಲ್ಲಪ್ಪ ರೆಡ್ಡಿ “ಲೈಫ್ ಬಿಯಾಂಡ್‌ ಸೈನ್ಸ್‌’ ಕಾದಂಬರಿಯನ್ನು ಸಿನಿಮಾ ಮಾಡಲು ಮುಂದಾದೆವು. ಈ ಸಮಯದಲ್ಲಿ ಹಿರಿಯ ಪತ್ರಕರ್ತ ನಾಗೇಶ್‌ ಹೆಗಡೆ, ಜೆ.ಎಂ.ಪ್ರಹ್ಲಾದ್‌ ಕೂಡಾ ಸ್ಕ್ರಿಪ್ಟ್ನಲ್ಲಿ ಸಹಕರಿಸಿದರು’ ಎಂದು ಚಿತ್ರದ ಬಗ್ಗೆ ಹೇಳಿಕೊಂಡರು ಅಣ್ಣಯ್ಯ. 

ಚಿತ್ರದ ಕಥೆಯ ಬಗ್ಗೆ ಮಾತನಾಡುವ ಅಣ್ಣಯ್ಯ,  ನಾಯಕ ತನ್ನ ಸಂಶೋಧನೆಯಿಂದ ಮರವೊಂದರ ಬೀಜದಿಂದ ಪೆಟ್ರೋಲ್‌, ಡಿಸೇಲ್‌ ಅನ್ನು ಉತ್ಪಾದಿಸಬಹುದು ಹಾಗೂ ಈ ಮೂಲಕ ಪರಿಸರ ಹಾನಿಯನ್ನು ಕಡಿಮೆ ಮಾಡಬಹುದೆಂಬುದನ್ನು ಕಂಡು ಹಿಡಿಯುತ್ತಾನೆ. ಈ ವೇಳೆ ನಾಯಕನಿಗೆ ಅಡ್ಡಬರುವ ಪೆಟ್ರೋಲಿಯಂ ಕಂಪೆನಿಗಳು ಮತ್ತು ಅದು ಕೊಡುವ ತೊಂದರೆಗಳ ಸುತ್ತ ಈ ಸಿನಿಮಾ ಸಾಗುತ್ತದೆ. ಅಂತಿಮವಾಗಿ ಈ ಚಿತ್ರದಲ್ಲಿ ಮುಂದಿನ ದಿನಗಳಲ್ಲಿ ಪರಿಸರ ಉಳಿಸಬೇಕಾದರೆ ಜೈವಿಕ ಇಂಧನಗಳನ್ನು ಬಳಸಬೇಕು ಎಂಬುದನ್ನು ಇಲ್ಲಿ ಹೇಳಲಾಗಿದೆ.  ನಿರ್ಮಾಪಕಿ ಫಾತಿಮಾ ಅವರಿಗೆ ಪರಿಸರದ ಕಾಳಜಿ ಇರುವ ಸಿನಿಮಾ ಮೂಲಕ ಮಗನನ್ನು ಲಾಂಚ್‌ ಮಾಡುತ್ತಿರುವ ಖುಷಿ ಇದೆಯಂತೆ. ಇನ್ನು ಚಿತ್ರದಲ್ಲಿ ರಾಧಾ ನಾಯಕಿಯಾಗಿ ನಟಿಸಿದ್ದಾರೆ. ಯತಿರಾಜ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಕಥೆ, ಚಿತ್ರಕಥೆಯಲ್ಲಿ ತೊಡಗಿಸಿಕೊಂಡ ಜೆ.ಎಂ.ಪ್ರಹ್ಲಾದ್‌ ಅವರಿಗೆ ಈ ಚಿತ್ರ ಇಂದಿನ ಸಮಾಜಕ್ಕೆ, ಪ್ರಸ್ತುತ ಪರಿಸ್ಥಿತಿಗೆ ಹೆಚ್ಚು ಸೂಕ್ತ ಎನಿಸಿದೆ. ನಾಯಕ ಸಲ್ಮಾನ್‌ ಕೂಡಾ ತಮ್ಮ ಸಿನಿಮಾ ಅನುಭವ ಹಂಚಿಕೊಂಡರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.