ತುಳುನಾಡ ಸುತ್ತ ಅನುಕ್ತ


Team Udayavani, Nov 23, 2018, 6:00 AM IST

28.jpg

“ಕನ್ನಡದಲ್ಲೂ ಹೊಸ ರೀತಿಯ ಚಿತ್ರಗಳು, ಹೊಸತನವಿರುವ ತಂತ್ರಜ್ಞರು ಆಗಮಿಸುತ್ತಿರುವುದು ಒಳ್ಳೆಯ ಬೆಳವಣಿಗೆ…’
– ಹೀಗೆ ಹೇಳಿದ್ದು ನಟ ದರ್ಶನ್‌. ಸಂದರ್ಭ. “ಅನುಕ್ತ’ ಚಿತ್ರದ ಆಡಿಯೋ ಸಿಡಿ ಬಿಡುಗಡೆ. ದರ್ಶನ್‌ ಈಗಲ್ಲ, ಮೊದಲಿನಿಂದಲೂ ಹೊಸಬರ ಚಿತ್ರಗಳನ್ನು ಪ್ರೋತ್ಸಾಹಿಸಿಕೊಂಡು ಬಂದವರು. ಅಷ್ಟೇ ಅಲ್ಲ, ಒಳ್ಳೆಯ ತಂಡಕ್ಕೆ ಬೆನ್ನುತಟ್ಟಿದವರು. “ಅನುಕ್ತ’ ಚಿತ್ರತಂಡಕ್ಕೆ ಶುಭಹಾರೈಸುವ ಸಲುವಾಗಿ, ದರ್ಶನ್‌ ಆಗಮಿಸಿ, ಪಿಆರ್‌ಕೆ ಸಂಸ್ಥೆ ಹೊರತಂದ ಹಾಡುಗಳನ್ನು ಬಿಡುಗಡೆ ಮಾಡಿದರು. ದರ್ಶನ್‌ ವೇದಿಕೆಗೆ ಆಗಮಿಸುತ್ತಿದ್ದಂತೆ, ಮಂಗಳೂರಿನ ಹುಲಿ ನೃತ್ಯ ತಂಡ, ಹುಲಿ ಡ್ಯಾನ್ಸ್‌ ಮಾಡುವ ಮೂಲಕ ದರ್ಶನ್‌ ಅವರನ್ನು ಸ್ವಾಗತಿಸಿತು. ನಂತರ ಮೈಕ್‌ ಹಿಡಿದು ಮಾತಿಗಿಳಿದ ದರ್ಶನ್‌, “ಅನುಕ್ತ’ ಒಂದೊಳ್ಳೆಯ ಶೀರ್ಷಿಕೆ. ಚಿತ್ರದ ಪ್ರೋಮೋ ನೋಡಿದರೆ, ಚಿತ್ರ ವಿಭಿನ್ನವಾಗಿದೆ ಎನಿಸುತ್ತದೆ. ಚಿತ್ರದ ತುಣುಕು ನೋಡಿದರೆ ಸಾಕು ಇಡೀ ಚಿತ್ರ ಹೇಗೆ ಮೂಡಿಬಂದಿದೆ ಅನ್ನೋದು ಗೊತ್ತಾಗುತ್ತೆ. ನಮ್ಮಲ್ಲೂ ಹೊಸ ತಂತ್ರಜ್ಞರು ಬರುತ್ತಿದ್ದಾರೆ ಎಂಬುದು ಉತ್ತಮ ಬೆಳವಣಿಗೆ. ಉತ್ತಮ ಕಥೆ ಬಯಸುವವರು ತಮಿಳು ಸಿನಿಮಾ ನೋಡ್ತಾರೆ, ಹಾಡು ಮತ್ತು ಫೈಟ್‌ ಇಷ್ಟಪಡೋರು ತೆಲುಗು ಚಿತ್ರ ನೋಡ್ತಾರೆ. ವಿದೇಶ ತಾಣ ನೋಡ ಬಯಸೋರು ಹಿಂದಿ ಸಿನಿಮಾಗೆ ಹೋಗುತ್ತಾರೆ. ಆದರೆ, ಈಗಿನ ಟ್ರೆಂಡ್‌ಗೆ ತಕ್ಕಂತೆ ಕನ್ನಡ ಚಿತ್ರ ಇದೆ ಅಂತ ನೋಡಲು ಹೋಗುತ್ತಾರೆ. ಆದರೆ, ಈಗಂತೂ, ಪರಭಾಷಿಗರೂ ಸಹ ನಮ್ಮ ಕಡೆ ತಿರುಗಿ ನೋಡುವಂತಹ ಚಿತ್ರಗಳು ಇಲ್ಲಿ ತಯಾರಾಗುತ್ತಿವೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ, ನಿರ್ಮಾಪಕರಿಗೆ ಗೆಲುವು ಸಿಗಲಿ ಅಂದರು’ ದರ್ಶನ್‌.

ಅನುಪ್ರಭಾಕರ್‌ ಈ ಚಿತ್ರದ ಹೈಲೈಟ್‌. ಅವರಿಗೆ ಸಿನಿಮಾ ಮೇಲೆ ಇನ್ನಿಲ್ಲದ ನಿರೀಕ್ಷೆ ಇದೆ. ಅವರಿಗೆ ಒಳ್ಳೆಯ ಕಥೆ, ಪಾತ್ರವಷ್ಟೇ ಅಲ್ಲ, ಒಳ್ಳೆಯ ತಂಡ ಸಿಕ್ಕಿದ್ದು ಖುಷಿಯಂತೆ. ಈ ಚಿತ್ರ ಎಲ್ಲರಿಗೂ ಗೆಲುವು ಕೊಡಲಿದೆ ಎಂಬುದು ಅನುಪ್ರಭಾಕರ್‌ ಮಾತು.

ಚಿತ್ರದ ನಾಯಕ ಕಾರ್ತಿಕ್‌ ಅತ್ತಾವರ್‌ ಕಥೆ ಬರೆದಿದ್ದಾರೆ. ಆ ಕಥೆ ಕೇಳಿದ ಸಂಪತ್‌ರಾಜ್‌ಗೆ ತುಂಬಾನೇ ವಿಶೇಷವಿದೆ ಎನಿಸಿತಂತೆ. ಕಥೆಯಲ್ಲಿ ಸಾಕಷ್ಟು ವಿಭಿನ್ನತೆ ಇದೆ. ಎಲ್ಲವನ್ನೂ ತೆರೆಯ ಮೇಲೆ ಹೇಗೆ ತರುತ್ತಾರೆ ಎಂಬ ಪ್ರಶ್ನೆ ಇತ್ತು. ನಿರ್ದೇಶಕರು ಅದ್ಭುತವಾಗಿ ಎಲ್ಲವನ್ನೂ ತಂದಿದ್ದಾರೆ. ತುಂಬಾನೇ ಒಳ್ಳೆಯ ತಂಡ ಆಗಿದ್ದರಿಂದ ಒಳ್ಳೇ ಚಿತ್ರ ಮೂಡಿಬಂದಿದೆ ಎಂದರು ಸಂಪತ್‌ರಾಜ್‌. ನಿರ್ಮಾಪಕ ಹರೀಶ್‌ಬಂಗೇರ ಅವರಿಗೆ ಒಳ್ಳೆಯ ಚಿತ್ರ ಮಾಡಿರುವ ತೃಪ್ತಿ ಇದೆಯಂತೆ. ನಿರ್ದೇಶಕ ಅಶ್ವತ್ಥ್ ಸ್ಯಾಮ್ಯುಯೆಲ್‌ ಅವರಿಗೆ ಎಲ್ಲರ ಸಹಕಾರದಿಂದ ಮೆಚ್ಚುವಂತಹ ಸಿನಿಮಾ ಮಾಡಿರುವ ಖುಷಿ ಇದೆಯಂತೆ. ನೊಬಿನ್‌ಪಾಲ್‌ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.