ಉದ್ಭವ ಗಣೇಶ!

ಕೋಡ್ಲು ಹೊಸ ಕನಸು

Team Udayavani, Jun 14, 2019, 5:00 AM IST

u-22

“ಉದ್ಭವ’ ಸಿನಿಮಾದ ಬಗ್ಗೆ ನಿಮಗೆ ಗೊತ್ತಿರಬಹುದು. ಅನಂತ್‌ನಾಗ್‌ ಮುಖ್ಯಭೂಮಿಕೆಯಲ್ಲಿದ್ದ ಈ ಚಿತ್ರವನ್ನು ಕೋಡ್ಲು ರಾಮಕೃಷ್ಣ ನಿರ್ದೇಶಿಸಿದ್ದರು. ಹೊಸ ಕಲ್ಪನೆಯೊಂದಿಗೆ ಬಂದ ಈ ಚಿತ್ರ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು. ಈಗ ಕೋಡ್ಲು ಮತ್ತೆ ಬಂದಿದ್ದಾರೆ. ಅದು ಉದ್ಭವದ ಜೊತೆಗೆ.

ಹೌದು, ಕೋಡ್ಲು ರಾಮಕೃಷ್ಣ “ಮತ್ತೆ ಉದ್ಭವ’ ಎಂಬ ಹೊಸ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆಯಿತು. ಹಾಗಂತ ಆ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಹೊಸ ಕಥೆಯೊಂದಿಗೆ “ಮತ್ತೆ ಉದ್ಭವ’ ಕಟ್ಟಿಕೊಡುವ ಉತ್ಸಾಹ­ದಲ್ಲಿದ್ದಾರೆ ಕೋಡ್ಲು. ಈ ಚಿತ್ರದಲ್ಲಿ ಅನಂತ್‌ನಾಗ್‌ ನಟಿಸುತ್ತಿಲ್ಲ. ಬದಲಾಗಿ ರಂಗಾಯಣ ರಘು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. “ಉದ್ಭವ’ದ ಅನಂತ್‌ ನಾಗ್‌ ಪಾತ್ರದ ಮುಂದುವರಿದ ಪಾತ್ರದಂತೆ ರಂಗಾಯಣ ಪಾತ್ರ ಸಾಗುತ್ತದೆಯಂತೆ. ಉಳಿದಂತೆ ಚಿತ್ರದಲ್ಲಿ ಪ್ರಮೋದ್‌, ಮಿಲನ ನಾಗರಾಜ್‌, ಅವಿನಾಶ್‌, ಮೋಹನ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಕೋಡ್ಲು ರಾಮಕೃಷ್ಣ, “ಸುಮಾರು ಒಂದು ವರ್ಷದಿಂದ ಈ ಕಥೆಯಲ್ಲಿ ತೊಡಗಿದ್ದೇನೆ. ಚಿತ್ರದಲ್ಲಿ ರಾಜಕೀಯ, ಲವ್‌, ಕಾಮಿಡಿ ಎಲ್ಲವೂ ಇದೆ. “ಉದ್ಭವ’ ಚಿತ್ರಕ್ಕಿಂತ 10 ಪಟ್ಟು ಹೆಚ್ಚು ಚೆನ್ನಾಗಿ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ’ ಎಂದರು ಕೋಡ್ಲು ರಾಮಕೃಷ್ಣ. ಚಿತ್ರವನ್ನು ನಿತ್ಯಾನಂದ ಭಟ್‌, ಸತ್ಯ, ಮಹೇಶ್‌, ರೋಶನ್‌, ರಾಜೇಶ್‌ ಸೇರಿಕೊಂಡು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವ ರಂಗಾಯಣ ರಘು ಹಾಗೂ ಅವಿನಾಶ್‌ ಅವರಿಗೆ ಇದೊಂದು ಹೊಸ ಬಗೆಯ ರಾಜಕೀಯ ಹಿನ್ನೆಲೆಯ ಸಿನಿಮಾವಾಗುತ್ತದೆ ಎಂಬ ವಿಶ್ವಾಸವಿದೆ. ಇನ್ನು ಚಿತ್ರ ಭಕ್ತಿ ಹಾಗೂ ಭಯದ ಸುತ್ತ ಚಿತ್ರ ಸಾಗಲಿದೆಯಂತೆ. ಚಿತ್ರದಲ್ಲಿ ಮಿಲನ ನಾಗರಾಜ್‌ ಪ್ರಕೃತಿ ಪ್ರೇಮಿಯಾಗಿ ನಟಿಸುತ್ತಿದ್ದಾರಂತೆ. ಈ ಹಿಂದೆ “ಪ್ರೀಮಿಯರ್‌ ಪದ್ಮಿನಿ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಪ್ರಮೋದ್‌ ಕೂಡಾ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಚಿತ್ರದಲ್ಲಿ ಮೋಹನ್‌ ಸಂಭಾಷಣೆಯ ಜೊತೆಗೆ ಸ್ವಾಮೀಜಿಯಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅಪೇಕ್ಷಾ ಪುರೋಹಿತ್‌ ಕಾಸ್ಟೂéಮ್‌ ಡಿಸೈನರ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ. “ಮತ್ತೆ ಉದ್ಭವ’ ಚಿತ್ರಕ್ಕೆ ವಿ.ಮನೋಹರ್‌ ಸಂಗೀತ, ಮೋಹನ್‌ ಛಾಯಾಗ್ರಹಣ, ಕೆಂಪರಾಜು ಸಂಕಲನವಿದೆ.

ಟಾಪ್ ನ್ಯೂಸ್

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.