ಡಿಯರ್‌ ಸತ್ಯ ಟೀಸರ್‌ ಸುತ್ತ…


Team Udayavani, Aug 7, 2020, 2:41 PM IST

ಡಿಯರ್‌ ಸತ್ಯ ಟೀಸರ್‌ ಸುತ್ತ…

ಸದಾ ತನ್ನದೇಯಾದ ಕೆಲಸ – ಕಾರ್ಯಗಳಿಂದ ಗಿಜಿಗುಡುವ ಊರು ಬೆಂಗಳೂರು. ಇಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಒತ್ತಡಗಳು, ಜಂಜಾಟಗಳಿರುತ್ತವೆ. ಇವೆಲ್ಲದರ ನಡುವೆ ಸಾಮಾನ್ಯ ಹುಡುಗನೊಬ್ಬ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಹೇಗೆಲ್ಲ ಹೆಣಗಾಡುತ್ತಾನೆ. ತನ್ನ ಕನಸುಗಳನ್ನು ಈಡೇರಿಸಿಕೊಳ್ಳಲು ಏನೇನು ಕಸರತ್ತು ಮಾಡುತ್ತಾನೆ. ಇಂಥ ಪ್ರಯತ್ನದಲ್ಲಿ ಅವನಿಗೆ ಏನೇನು ಸವಾಲುಗಳು ಎದುರಾಗುತ್ತವೆ. ಇಂಥದ್ದೇ ಕೆಲವು ಸಂಗತಿಗಳನ್ನು ಇಟ್ಟುಕೊಂಡು, ಈಗ “ಡಿಯರ್‌ ಸತ್ಯ’ ಎನ್ನುವ ಚಿತ್ರ ತೆರೆಗೆ ಬರುತ್ತಿದೆ.

ಈ ಹಿಂದೆ ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ “ನೂರು ಜನ್ಮಕು’ ಚಿತ್ರದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಆರ್ಯನ್‌ ಸಂತೋಷ್‌, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲಕಾಲ “ಪ್ಯಾಟೆ ಹುಡ್ಗಿರ್‌ ಹಳ್ಳಿ ಲೈಫ‌ು’, “ಹಳ್ಳಿ ಹೈದ ಪ್ಯಾಟೇಗ್‌ ಬಂದ’ ಮೊದಲಾದ ರಿಯಾಲಿಟಿ ಶೋಗಳ ನಿರೂಪಕರಾಗಿ, ಬಳಿಕ “ಬಿಗ್‌ಬಾಸ್‌ ಸೀಸನ್‌-2′ ನ ಸ್ಪರ್ಧಿಯಾಗಿದ್ದ ಆರ್ಯನ್‌ ಸಂತೋಷ್‌, ಈಗ “ಡಿಯರ್‌ ಸತ್ಯ’ನಾಗಿ ಮತ್ತೆ ಬಿಗ್‌ ಸ್ಕ್ರೀನ್‌ಗೆ ರೀ-ಎಂಟ್ರಿ ಆಗುತ್ತಿದ್ದಾರೆ.

“ಡಿಯರ್‌ ಸತ್ಯ’ನಿಗೆ ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ಜೋಡಿಯಾಗಿದ್ದಾರೆ. ಒಂದಷ್ಟು ನೈಜ ಘಟನೆಗಳ ಪ್ರೇರಣೆಯಿಂದ ತಯಾರಾಗಿರುವ “ಡಿಯರ್‌ ಸತ್ಯ’ ಚಿತ್ರದಲ್ಲಿ ಅರುಣಾ ಬಾಲರಾಜ್‌, ಅಶ್ವಿ‌ನ್‌ ರಾವ್‌ ಪಲ್ಲಕ್ಕಿ, ಅರವಿಂದ್‌ ರಾವ್‌, ಅಪ್ಪಣ್ಣ, ಗುರುರಾಜ ಹೊಸಕೋಟೆ, ಆದರ್ಶ್‌ ಚಂದ್ರಕರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ “ಜಿಗರ್‌ ಥಂಡ’ ಚಿತ್ರವನ್ನು ನಿರ್ದೇಶಿಸಿದ್ದ ಶಿವ ಗಣೇಶ್‌ “ಡಿಯರ್‌ ಸತ್ಯ’ ಚಿತ್ರವನ್ನು ನಿರ್ದೇಶಿಸಿದ್ದಾರೆ. “ಆ ದೃಶ್ಯ’, “ತ್ರಾಟಕ’ ಮುಂತಾದ ಚಿತ್ರಗಳಿಗೆ ಕ್ಯಾಮರ ಹಿಡಿದಿದ್ದ, ವಿನೋದ್‌ ಭಾರತಿ “ಡಿಯರ್‌ ಸತ್ಯ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

ಚಿತ್ರದ ಹಾಡುಗಳಿಗೆ ಶ್ರೀಧರ್‌ ವಿ. ಸಂಭ್ರಮ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಸುರೇಶ್‌ ಆರ್ಮುಗಂ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಭಜರಂಗಿ ಮೋಹನ್‌, ಕಲೈ ಮತ್ತು ಗೀತಾ ನೃತ್ಯ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಕುಂಗ್‌ಫ‌ು ಚಂದ್ರು ಸಾಹಸ, ಭಾರ್ಗವಿ ವಿಖ್ಯಾತಿ ವಸ್ತ್ರ ವಿನ್ಯಾಸವಿದೆ. “ಪರ್ಪಲ್‌ ರಾಕ್‌ ಎಂಟರ್‌ಟೈನರ್’ ಮತ್ತು “ವಿಂಟರ್‌ ಬ್ರಿಡ್ಜ್ ಸ್ಟುಡಿಯೋಸ್‌’ ಜಂಟಿಯಾಗಿ ನಿರ್ಮಿಸುತ್ತಿರುವ “ಡಿಯರ್‌ ಸತ್ಯ’ ಚಿತ್ರದ ಚಿತ್ರೀಕರಣ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಶುರುವಾಗಿ ಈ ವರ್ಷ ಮಾರ್ಚ್‌ ವೇಳೆಗೆ ಪೂರ್ಣಗೊಂಡಿತ್ತು. ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದ್ದು, ಇದೇ ಆಗಸ್ಟ್‌ 15ರಂದು “ಡಿಯರ್‌ ಸತ್ಯ’ ಚಿತ್ರದ ಬಹು ನಿರೀಕ್ಷಿತ ಟೀಸರ್‌ ಬಿಡುಗಡೆ ಯಾಗುತ್ತಿದೆ.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.