ವರ್ಷಾರಂಭದಲ್ಲಿ ನಮ್ದೇನಿಲ್ವಾ ಗುರು

ಆರಂಭ ಸ್ವಲ್ಪ ಡಲ್ಲು- ಟ್ರೇಲರ್‌, ಟೀಸರ್‌, ಫ‌ಸ್ಟ್‌ಲುಕ್‌ನಲ್ಲೇ ಫ‌ುಲ್ಲು

Team Udayavani, Jan 10, 2020, 5:58 AM IST

28

“ನಮ್‌ ಸ್ಟಾರ್ ಎಲ್ಲಾ ಎಲ್ಲಿದ್ದಾರೆ, ಯಾವಾಗ ನಮ್ಗೆ ದರ್ಶನ ಕೊಡ್ತಾರೆ …’
– ಹೊಸ ವರ್ಷ ಆರಂಭವಾಗಿದೆ. ಮತ್ತೆ ಕನಸುಗಳು ಶುರುವಾಗಿವೆ. ಸಿನಿಮಾ ಪ್ರೇಮಿ, ಒಂದೊಂದೇ ಸಿನಿಮಾವನ್ನು ಎಣಿಸುತ್ತಿದ್ದಾನೆ. ಅದರಲ್ಲೂ ಸ್ಟಾರ್‌ಗಳ ಸಿನಿಮಾ ಮೇಲೆ ನಿರೀಕ್ಷೆ ಈ ಬಾರಿ ಹೆಚ್ಚೇ ಇದೆ. ಆದರೆ, ಸ್ಟಾರ್ ಸಿನಿಮಾಗಳು ಯಾವಾಗ ತೆರೆಕಾಣುತ್ತವೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಈ ಪ್ರಶ್ನೆ ಕಾಡಲು ಕಾರಣ ವರ್ಷಾರಂಭದಲ್ಲಿನ ಪರಭಾಷಾ ಸ್ಟಾರ್‌ಗಳ ಅಬ್ಬರ. ನೀವು ಸುಮ್ಮನೆ ಒಮ್ಮೆ ಪಕ್ಕದ ರಾಜ್ಯಗಳ ಚಿತ್ರರಂಗದತ್ತ ಕಣ್ಣು ಹಾಯಿಸಿದರೆ ಅಲ್ಲಿ ವರ್ಷಾರಂಭದ ಸಡಗರ ಜೋರಾಗಿ ಕಾಣುತ್ತಿವೆ. ಬಿಗ್‌ಸ್ಟಾರ್ ಸಿನಿಮಾಗಳು ಅದ್ಧೂರಿಯಾಗಿ ತೆರೆಗೆ ಬರಲು ಅಣಿಯಾಗಿವೆ. ಆದರೆ, ಕನ್ನಡ ಚಿತ್ರರಂಗದ ಮಟ್ಟಿಗೆ ಹೊಸ ವರ್ಷದ ಮೊದಲ ತಿಂಗಳು ತುಂಬಾ ನೀರಸವಾಗಿದೆ ಎಂದರೆ ತಪ್ಪಲ್ಲ. ಏಕೆಂದರೆ ಜನವರಿಯ ಕೊನೆಯವರೆಗೂ ಯಾವುದೇ ಸ್ಟಾರ್‌ ಅಥವಾ ಹೊಸಬರ ನಿರೀಕ್ಷಿತ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿಲ್ಲ. ಒಂದೆರಡು ಸಿನಿಮಾಗಳು ಬಂದರೂ ಆ ಸಿನಿಮಾಗಳ ಭವಿಷ್ಯ ತೆರೆಕಂಡ ಮೇಲಷ್ಟೇ ಗೊತ್ತಾಗಲಿದೆ. ಇತ್ತೀಚಿನ ವರ್ಷಗಳನ್ನು ಗಮನಿಸಿಕೊಂಡು ಬಂದರೆ ವರ್ಷದ ಕೊನೆ ಚಿತ್ರರಂಗದ ಮಟ್ಟಿಗೆ ಅದ್ಧೂರಿಯಾಗಿದ್ದರೆ, ವರ್ಷಾರಂಭ ಸ್ವಲ್ಪ ನಿಧಾನಗತಿಯಲ್ಲೇ ಸಾಗುತ್ತದೆ ಎಂದರೆ ತಪ್ಪಲ್ಲ.

ಈ ವರ್ಷದ ಜನವರಿ ಮೊದಲ ವಾರವನ್ನೇ ತೆಗೆದುಕೊಳ್ಳಿ. ಕೇವಲ ಎರಡು ಸಿನಿಮಾಗಳಷ್ಟೇ ಬಿಡುಗಡೆಯಾಗಿವೆ. ಹಾಗಂತ ಆ ಸಿನಿಮಾಗಳೇನು ಸದ್ದು ಮಾಡುತ್ತಿಲ್ಲ. ಆದರೆ, ಈ ವಾರ ಕನ್ನಡ ಚಿತ್ರರಂಗ ಸಂಪೂರ್ಣ ನೀರಸವಾಗಿದೆ. ಅದಕ್ಕೆ ಕಾರಣ ಯಾವುದೇ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಚಿತ್ರರಂಗ ಎಂದ ಮೇಲೆ ಅಲ್ಲಿ ಸೋಲು-ಗೆಲುವು, ಸಮಸ್ಯೆ ಸಹಜ. ಇವೆಲ್ಲದರ ನಡುವೆ ಶುಕ್ರವಾರ ಬಂತೆಂದರೆ ಸಿನಿಮಂದಿಗೊಂದು ಸಿನಿಮಾ ಬಿಡುಗಡೆಯ ಸಂಭ್ರಮ. ಆದರೆ, ಈ ವಾರ ಯಾವುದೇ ಕನ್ನಡ ಚಿತ್ರ ಬಿಡುಗಡೆಯಾಗುತ್ತಿಲ್ಲ. ಇದಕ್ಕೆ ಕಾರಣ ಪರಭಾಷಾ ಅಬ್ಬರ. ಪರಭಾಷೆಯ ದೊಡ್ಡ ಸಿನಿಮಾಗಳು ಬಿಡುಗಡೆಯಾಗುತ್ತಿರುವುದರಿಂದ ತಮ್ಮ ಸಿನಿಮಾ ಬಿಡುಗಡೆಗೆ ರೆಡಿ ಇದ್ದರೂ ನಿರ್ಮಾಪಕ, ನಿರ್ದೇಶಕರು ಯಾವುದೇ ರಿಸ್ಕ್ ತೆಗೆದುಕೊಂಡಿಲ್ಲ. ಪರಿಣಾಮವಾಗಿ ಈ ವಾರ ಖಾಲಿ ಖಾಲಿ, ಕನ್ನಡ ಸಿನಿಮಾ ಬಿಡುಗಡೆಯ ಸಂಭ್ರಮವಿಲ್ಲ. ರಜನಿಕಾಂತ್‌ ಅಭಿನಯದ “ದರ್ಬಾರ್‌’ ಸಿನಿಮಾ ಮೂಲಕ ಪರಭಾಷೆ ಅಬ್ಬರ ಶುರುವಾಗಿದೆ. ಅದರ ಬೆನ್ನಿಗೆ ಅಂದರೆ, ಜನವರಿ 10ಕ್ಕೆ ಮಹೇಶ್‌ ನಟನೆಯ “ಸರಿಲೇರು ನೀಕೆವರು’, ಜನವರಿ 12ಕ್ಕೆ ಅಲ್ಲು ಅರ್ಜುನ್‌ ನಟನೆಯ “ಅಲಾ ವೈಕುಂಠಪುರಂಲೋ’ ಹಾಗೂ ಜನವರಿ 16ಕ್ಕೆ ಧನುಶ್‌ ಅಭಿನಯದ “ಪಟ್ಟಾಸ್‌’ ಚಿತ್ರಗಳು ಮುಖ್ಯವಾಗಿ ಬಿಡುಗಡೆಯಾಗುತ್ತಿವೆ. ಈ ಎಲ್ಲಾ ಚಿತ್ರಗಳು ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟಿಸಿರುವುದರಿಂದ ಬಹುತೇಕ ಚಿತ್ರಮಂದಿರಗಳನ್ನು ಈ ಎಲ್ಲಾ ಚಿತ್ರಗಳು ಆವರಿಸಿಕೊಳ್ಳಲಿದೆ. ಹಾಗಾದರೆ ಕನ್ನಡದಿಂದ ಸ್ಟಾರ್‌ ನಟರ ಚಿತ್ರಗಳು ಯಾವಾಗಿನಿಂದ ಬಿಡುಗಡೆಯಾಗಲಿವೆ ಎಂದರೆ ಫೆಬ್ರವರಿಯಿಂದ ಎನ್ನಬಹುದು.

ಶಿವರಾಜಕುಮಾರ್‌ ಅವರ “ದ್ರೋಣ’ ಫೆಬ್ರವರಿಯಲ್ಲಿ ಬರುವ ಸಾಧ್ಯತೆ ಇದೆ. ಧ್ರುವ “ಪೊಗರು’ ಮಾರ್ಚ್‌, ಪುನೀತ್‌ “ಯುವರತ್ನ’ ಹಾಗೂ ಜಗ್ಗೇಶ್‌ “ತೋತಾಪುರಿ’ ಏಪ್ರಿಲ್‌ನಲ್ಲಿ ಬರುವ ಸಾಧ್ಯತೆ ಇದೆ. ಈ ಮೂಲಕ ಅಭಿಮಾನಿಗಳಿಗೆ ಸಿನಿಹಬ್ಬವಾಗಲಿದೆ. ಸದ್ಯ ಕನ್ನಡದಲ್ಲಿ ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸದ್ಯ ಕನ್ನಡ ಪ್ರೇಕ್ಷಕ ನಿರೀಕ್ಷಿತ ಸಿನಿಮಾಗಳ ಟ್ರೇಲರ್‌, ಟೀಸರ್‌ ಹಾಡುಗಳನ್ನು ಎಂಜಾಯ್‌ ಮಾಡುತ್ತಿದ್ದಾನೆ. ಈಗಾಗಲೇ ದುನಿಯಾ ವಿಜಯ್‌ ನಿರ್ದೇಶನದ “ಸಲಗ’ ಚಿತ್ರದ “ಸೂರಿಯಣ್ಣ…’ ಹಾಡು ದೊಡ್ಡ ಹಿಟ್‌ ಆಗಿದೆ. ಈ ನಡುವೆಯೇ ಪ್ರಜ್ವಲ್‌ ದೇವರಾಜ್‌ ಅವರ “ಜಂಟಲ್‌ವುನ್‌’ ಟ್ರೇಲರ್‌, “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರದ ಟೀಸರ್‌, “ಕೆಜಿಎಫ್’, “ಯುವರತ್ನ’ ಹೊಸ ಸ್ಟಿಲ್ಸ್‌ … ಹೀಗೆ ಒಂದಷ್ಟು ಸಿನಿಮಾಗಳು ತಮ್ಮ ಸಿನಿಮಾದ ತುಣುಕನ್ನು ರಿಲೀಸ್‌ ಮಾಡಿ, ಸಿನಿಪ್ರೇಮಿಗಳ ಕುತೂಹಲ ಹೆಚ್ಚಿಸಿವೆ. ಹಾಗೆ ನೋಡಿದರೆ ಏಪ್ರಿಲ್‌ನಿಂದ ಒಂದೊಂದೇ ಸ್ಟಾರ್‌ ಸಿನಿಮಾಗಳು ಬಿಡುಗಡೆಯಾಗಲಿವೆ. ಈ ಮೂಲಕ ಕನ್ನಡ ಚಿತ್ರರಂಗ ವರ್ಷದ ಕೊನೆಯವರೆಗೂ ರಂಗೇರುತ್ತಲೇ ಸಾಗಲಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.