ಎಟಿಎಂ ದರೋಡೆ ಸಿನಿಮಾವಾಯ್ತು


Team Udayavani, Apr 20, 2018, 6:00 AM IST

Ban20041804SSch.jpg

“ಅಟೆಂಪ್ಟ್ ಟು ಮರ್ಡರ್‌’ (ಎಟಿಎಂ) – ಹೀಗೊಂದು ಸಿನಿಮಾ ಕೆಲವು ದಿನಗಳಿಂದ ಸುದ್ದಿ ಮಾಡುತ್ತಲೇ ಇದೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇಂದು ತೆರೆ ಕಾಣುತ್ತಿದೆ. ಈ ಚಿತ್ರವನ್ನು ನಾರಾಯಣ್‌ ನಿರ್ಮಿಸಿದ್ದಾರೆ. ಈಗ ಚಿತ್ರ ಮೂಡಿಬಂದಿರುವ ರೀತಿಯಿಂದ ಥ್ರಿಲ್‌ ಆಗಿರುವ ಅವರು ಮುಂದೆ ವರ್ಷಕ್ಕೊಂದು ಸಿನಿಮಾ ಮಾಡಲು ನಿರ್ಧರಿಸಿದ್ದಾರಂತೆ. ಜೊತೆಗೆ ನಿರ್ದೇಶಕ ಅಮರ್‌ ಜೊತೆಯೂ ಮುಂದೆ ಸಿನಿಮಾ ಮಾಡುವುದಾಗಿ ಹೇಳಿಕೊಂಡರು. 

“ಈ ಹುಡುಗರು ಮಾಡಿದ ಕಿರುಚಿತ್ರವೊಂದನ್ನು ನೋಡಿದೆ. ತುಂಬಾ ಚೆನ್ನಾಗಿ ಮಾಡಿದ್ದರು. ಆಗಲೇ ನನಗೆ ಇವರಲ್ಲಿ ಪ್ರತಿಭೆ ಎಂದು ಗೊತ್ತಾಯಿತು. ಮುಂದೆ ಇವರ ಜೊತೆ ಸಿನಿಮಾ ಮಾಡಬೇಕೆಂದು ನಿರ್ಧರಿಸಿ, ಮಾತುಕತೆಯೂ ಆಯಿತು. ಸಿನಿಮಾ ಮಾಡಲು ನಿರ್ಧರಿಸಿದ ನಂತರ ನಾನು ನಿರ್ದೇಶಕರಿಗೆ ಸಂಪೂರ್ಣ ಸ್ವತಂತ್ರ ಕೊಟ್ಟಿದ್ದೆ. ಅದು ಕಲಾವಿದರ ಆಯ್ಕೆಯಿಂದ ಹಿಡಿದು ತಾಂತ್ರಿಕ ವರ್ಗದವರೆಗೂ. ಸಿನಿಮಾ ಎಂಬುದು ನಿರ್ದೇಶಕನ ಕಲ್ಪನೆ. ಅದರಂತೆ ನಿರ್ದೇಶಕ ಅಮರ್‌ ಕೂಡಾ ತುಂಬಾ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ನೋಡಿದವರು ಮೆಚ್ಚಿಕೊಳ್ಳುತ್ತಾರೆಂಬ ವಿಶ್ವಾಸವಿದೆ’ ಎಂದು ಹೇಳಿಕೊಂಡರು ನಿರ್ಮಾಪಕ ನಾರಾಯಣ್‌. 

ನಿರ್ದೇಶಕ ಅಮರ್‌ ಮೊದಲ ಸಿನಿಮಾಕ್ಕೆ ಬೆನ್ನೆಲುಬಾಗಿ ನಿಂತವರಿಗೆ ಥ್ಯಾಂಕ್ಸ್‌ ಹೇಳಲು ಸಾಕಷ್ಟು ಸಮಯ ತಗೊಂಡರು. ಜೊತೆಗೆ ಸಿನಿಮಾ ಬಗ್ಗೆಯೂ ಮಾತನಾಡಿದರು. “ಕೆಲವು ವರ್ಷಗಳ ಹಿಂದೆ ಬೆಂಗಳೂರಿನ ಎಟಿಎಂವೊಂದರಲ್ಲಿ ನಡೆದ ದರೋಡೆಯನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದೇನೆ. ದರೋಡೆಕೋರನನ್ನು ಒಬ್ಬ ಪೊಲೀಸ್‌ ಅಧಿಕಾರಿ ಹೇಗೆ ಹುಡುಕುತ್ತಾನೆ, ಆತನಿಗಿರುವ ಸವಾಲುಗಳೇನು ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ. ಜೊತೆಗೆ ಇಲ್ಲೊಂದು ಲವ್‌ಟ್ರ್ಯಾಕ್‌ ಕೂಡಾ ಬರುತ್ತದೆ’ ಎಂದರು ಅಮರ್‌. 

ಈ ಚಿತ್ರದಲ್ಲಿ ನಾಯಕನಿಗಿಂತ ಹೆಚ್ಚು ಸ್ಕೋಪ್‌ ಇರೋದು ವಿಲನ್‌ಗಂತೆ. ಅದನ್ನು ಸ್ವತಃ ನಿರ್ದೇಶಕರೇ ಹೇಳುತ್ತಾರೆ. “ಈ ಕಥೆ ಬರೆಯೋದಕ್ಕೆ ನನಗೆ ಸ್ಫೂತಿ ವಿಲನ್‌ ಪಾತ್ರ. ಆ ಪಾತ್ರವನ್ನು ಸೂರ್ಯ ಮಾಡಿದ್ದಾರೆ. ಈ ಪಾತ್ರಕ್ಕೆ ಉದ್ದ ಗಡ್ಗ ಬೇಕಿತ್ತು. ಅದೇ ಕಾರಣಕ್ಕೆ ಅವರಿಗೆ ಒಂದು ವರ್ಷ ದಾಡಿ ಬಿಡೋಕೆ ಹೇಳಿದೆ’ ಎಂದು ವಿಲನ್‌ ಪಾತ್ರದ ತಯಾರಿ ಬಗ್ಗೆ ಹೇಳುತ್ತಾರೆ ಅಮರ್‌. 

ಸಾಮಾನ್ಯವಾಗಿ ಸಿನಿಮಾಗಳಲ್ಲಿ ನಾಯಕನಿಗೆ ಇಂಟ್ರೊಡಕ್ಷನ್‌ ಸಾಂಗ್‌ ಇರುತ್ತದೆ. ಆದರೆ, “ಎಟಿಎಂ’ ಚಿತ್ರದಲ್ಲಿ ವಿಲನ್‌ಗೆಂದೇ ಒಂದು ಹಾಡೂ ಇದೆಯಂತೆ. ಆ ಹಾಡನ್ನು ತುಂಬಾ ವಿಶೇಷವಾಗಿ ಚಿತ್ರೀಕರಿಸಲಾಗಿದೆಯಂತೆ. ಸೂರ್ಯ ಇಲ್ಲಿ ವಿಲನ್‌ ಆಗಿ ನಟಿಸಿದ್ದಾರೆ.

ಚಿತ್ರದಲ್ಲಿ ಹೇಮಲತಾ ಪತ್ರಕರ್ತೆಯಾಗಿ ನಟಿಸಿದ್ದಾರೆ. ಒಳ್ಳೆಯ ತಂಡ ಸಿಕ್ಕ ಖುಷಿ ಹಂಚಿಕೊಂಡರು. ನಿರ್ದೇಶಕರು ವಿಶ್ವಾಸ ತುಂಬಿ ನಟನೆ ತೆಗೆಸಿದ ಬಗ್ಗೆಯೂ ಹೇಳಿಕೊಂಡರು. ಚಿತ್ರದಲ್ಲಿ ನಟಿಸಿದ ಚಂದು, ಶೋಭಿತಾ, ಛಾಯಾಗ್ರಾಹಕ ಎಸ್‌.ಕೆ. ರಾವ್‌ ಸೇರಿದಂತೆ ಚಿತ್ರತಂಡ ಪ್ರತಿಯೊಬ್ಬರು ಸಿನಿಮಾ ಬಿಡುಗಡೆಯ ಖುಷಿ ಹಂಚಿಕೊಂಡರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.