ಬಾಬು ನೆನಪಲ್ಲಿ; ಕುಚ್ಚಿಕುಗಳ ಜೊತೆಯಲ್ಲಿ


Team Udayavani, Jun 29, 2018, 6:00 AM IST

x-29.jpg

ಸುಮಾರು ಆರು ವರ್ಷಗಳ ಹಿಂದೆ ಆರಂಭವಾದ “ಕುಚ್ಚಿಕೂ ಕುಚ್ಚಿಕು’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರ ಜುಲೈ 6ರಂದು ತೆರೆಕಾಣುತ್ತಿದೆ. ಹಿರಿಯ ನಿರ್ದೇಶಕ ಡಿ.ರಾಜೇಂದ್ರ ಬಾಬು ಅವರ ಕನಸಿನ ಕೂಸಾಗಿದ್ದ ಈ ಸಿನಿಮಾದ ಬಿಡುಗಡೆಯನ್ನು, ಜನರ ಪ್ರತಿಕ್ರಿಯೆ ಹೇಗಿರುತ್ತದೆಂಬುದನ್ನು ನೋಡಬೇಕು ಎಂದು ಕಾದಿದ್ದ ಬಾಬು ಅವರ ಆಸೆ ಈಡೇರಲಿಲ್ಲ. ಸಿನಿಮಾ ಬಿಡುಗಡೆಗೆ ಮುನ್ನವೇ ಇಹಲೋಕ ತ್ಯಜಿಸಿದರು. ಈಗ ಬಾಬು ಅವರ ಡ್ರೀಮ್‌ ಪ್ರಾಜೆಕ್ಟ್ ಆಗಿದ್ದ “ಕುಚ್ಚಿಕೂ ಕುಚ್ಚಿಕು’ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ನಿರ್ಮಾಪಕ ಕೃಷ್ಣಮೂರ್ತಿ ಸಿನಿಮಾ ಬಿಡುಗಡೆ ಮಾಡಲು ಮುಂದಾದಾಗ ಅವರಿಗೆ ನಿರ್ಮಾಪಕ ಸುರೇಶ್‌ ಗೌಡ್ರು ಸಾಥ್‌ ನೀಡಿದ್ದಾರೆ. ಈ ವಿಷಯವನ್ನು ಹಂಚಿಕೊಳ್ಳಲು ಚಿತ್ರತಂಡ ಇತ್ತೀಚೆಗೆ ಮಾಧ್ಯಮ ಮುಂದೆ ಬಂದಿತ್ತು. ವೇದಿಕೆ ಮೇಲೆ ನಿರ್ದೇಶಕರಿಲ್ಲ ಎಂಬ ಕೊರತೆ ಕಾಡಬಾರದೆಂಬ ಕಾರಣಕ್ಕೆ ಕುರ್ಚಿಯೊಂದರ ಮೇಲೆ ಡಿ.ಬಾಬು ಅವರ ಫೋಟೋವನ್ನಿಟ್ಟೇ ಪತ್ರಿಕಾಗೋಷ್ಠಿ ನಡೆಸಲಾಯಿತು.

ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಕೃಷ್ಣಮೂರ್ತಿ, “ಸಿನಿಮಾ ಕಾರಣಾಂತರಗಳಿಂದ ತಡವಾಗಿದೆ. ಈಗ ಬಿಡುಗಡೆ ಮಾಡುತ್ತಿದ್ದೇವೆ. ಒಳ್ಳೆಯ ಕಂಟೆಂಟ್‌ನೊಂದಿಗೆ ಈ ಸಿನಿಮಾ ಮಾಡಿದ್ದಾರೆ ಬಾಬು ಅವರು. ಸಿನಿಮಾದ ಬಿಡುಗಡೆಗೆ ನಿರ್ಮಾಪಕ ಸುರೇಶ್‌ ಗೌಡ್ರು ಸಹಕಾರ ನೀಡುತ್ತಿದ್ದಾರೆ’ ಎಂದರು. ಈ ಚಿತ್ರದಲ್ಲಿ ಜೆಕೆ ಹಾಗೂ ಪ್ರವೀಣ್‌ ನಾಯಕರಾಗಿ ನಟಿಸಿದ್ದಾರೆ. ಆರು ವರ್ಷಗಳ ಹಿಂದೆ ಇಬ್ಬರಿಗೂ ಇದು ಹೊಸ ಸಿನಿಮಾ. ನಾಯಕರಾದ ಪ್ರವೀಣ್‌ ಈ ಸಿನಿಮಾಕ್ಕೆ ಆಯ್ಕೆಯಾಗಿದ್ದು, ಬಾಬು ಅವರು ತಮ್ಮನ್ನು ಪಾತ್ರಕ್ಕೆ ತಯಾರು ಮಾಡಿದ ರೀತಿ, ಸಿನಿಮಾ ಮುಗಿದ ನಂತರವೂ ಫೋನ್‌ ಮಾಡುತ್ತಾ ಹಲವು ವಿಚಾರಗಳನ್ನು ಮಾತನಾಡುತ್ತಿದ್ದ ಬಾಬು ಅವರನ್ನು ನೆನಪಿಸಿಕೊಂಡರು. ಮತ್ತೂಬ್ಬ ನಟ ಜೆಕೆಗೆ ಆರಂಭದ ದಿನಗಳಲ್ಲೇ ದೊಡ್ಡ ನಿರ್ದೇಶಕರ ಚಿತ್ರದಲ್ಲಿ ಅವಕಾಶ ಸಿಕ್ಕ ಖುಷಿ ಇದೆಯಂತೆ. “ಬಾಬು ಅವರು ಆಡಿದ ಮಾತುಗಳು ಇವತ್ತಿಗೂ ಮನದಲ್ಲಿದೆ. ದೊಡ್ಡ ನಿರ್ದೇಶಕ ಚಿತ್ರದಲ್ಲಿ ನಟಿಸಿದ ಖುಷಿ ಇದೆ. ಅವರಿಂದ ಸಾಕಷ್ಟು ಕಲಿತಿದ್ದೇವೆ’ ಎಂದರು. 

“ಕುಚ್ಚಿಕೂ ಕುಚ್ಚಿಕು’ ಚಿತ್ರದಲ್ಲಿ ಡಿ.ರಾಜೇಂದ್ರ ಬಾಬು ಅವರ ಮಗಳು ನಕ್ಷತ್ರ (ದೀಪ್ತಿ) ನಾಯಕಿಯಾಗಿ ನಟಿಸಿದ್ದಾರೆ. ಮೊದಲ ಬಾರಿಗೆ ತಂದೆಯ ಚಿತ್ರದಲ್ಲಿ ನಟಿಸಿದ ಖುಷಿ ಅವರಿಗಿದೆಯಂತೆ. ಮೊದಲ ದಿನ ಚಿತ್ರೀಕರಣ ನಂತರ ನಕ್ಷತ್ರ, “ಹೇಗಿತ್ತಪ್ಪ ನನ್ನ ಪರ್‌ಫಾರ್ಮೆನ್ಸ್‌’ ಎಂದು ಕೇಳಿದರಂತೆ. ಆಗ ಬಾಬು ಅವರು, “ಚೆನ್ನಾಗಿ ಮಾಡಿದ್ದೀಯ ಮಗಳೇ, ನಿನಗೆ ಒಳ್ಳೆಯ ಭವಿಷ್ಯವಿದೆ’ ಎಂದಿದ್ದರು ಎನ್ನುತ್ತಾ ಫ್ಲ್ಯಾಶ್‌ಬ್ಯಾಕ್‌ಗೆ 

ಜಾರಿದರು. ಚಿತ್ರದಲ್ಲಿ ಬಾಬು ಅವರ ಪತ್ನಿ ಸುಮಿತ್ರ ಅವರು ಕೂಡಾ ನಟಿಸಿದ್ದಾರೆ. ರಮೇಶ್‌ ಭಟ್‌ ಅವರಿಗೂ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ಚಿತ್ರಕ್ಕೆ ಸಂಗೀತ ನೀಡಿರುವ ಹಂಸಲೇಖ ಅವರು ಬಾಬು ಅವರ ಜೊತೆಗಿನ ತಮ್ಮ ಆತ್ಮೀಯತೆಯನ್ನು ನೆನಪಿಸಿಕೊಂಡರು. ಚಿತ್ರಕ್ಕೆ ನಂದಕುಮಾರ್‌ ಛಾಯಾಗ್ರಹಣವಿದ್ದು, ತಮ್ಮ ಗುರುಗಳ ಚಿತ್ರ ಬಿಡುಗಡೆಯಾಗುತ್ತಿರುವ ಖುಷಿ ಅವರಿಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.