ಬಾಹುಬಲಿ ಕನ್‌ಫ್ಯೂಶನ್‌: ಮಗಳು ಹೀರೋಯಿನ್‌ ಆದಾಗ 


Team Udayavani, Aug 4, 2017, 8:21 AM IST

04-SUCHI-2.jpg

“ನಿಜ ಹೇಳಬೇಕೆಂದರೆ ಇದು ನನ್ನ ಜಾನರ್‌ನ ಸಿನಿಮಾ ಅಲ್ಲ …’
ಹೀಗೆಂದರು ನಟ ಸಂಚಾರಿ ವಿಜಯ್‌. ಅವರು ಹೀಗೆ ಹೇಳಲು ಕಾರಣ “ನನ್‌ ಮಗಳೇ ಹೀರೋಯಿನ್‌’ ಚಿತ್ರ. “ನನ್‌ ಮಗಳೇ ಹೀರೋಯಿನ್‌’ ಚಿತ್ರ ಕಾಮಿಡಿ ಜಾನರ್‌ಗೆ ಸೇರಿದ ಚಿತ್ರ. ಸಂಚಾರಿ ವಿಜಯ್‌ ಸೀರಿಯಸ್‌ ನಟ. ಈವರೆಗೆ ಇಂತಹ ಪಾತ್ರ ಮಾಡಿಲ್ಲ. ಹೀಗಿರುವಾಗ ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ ಮಾಡಿದ್ದಾರೆ. ಹಾಗಾಗಿಯೇ ಸಂಚಾರಿ ವಿಜಯ್‌ ಇದು ನನ್ನ ಜಾನರ್‌ನ ಸಿನಿಮಾವಲ್ಲ ಅಂದಿದ್ದು. “ನನಗೆ ಈ ತರಹದ ಪಾತ್ರ ತುಂಬಾ ಹೊಸದು. ನನ್ನನ್ನು ನಂಬಿ ನಿರ್ದೇಶಕರು ಈ ಪಾತ್ರ ಕೊಟ್ಟರು. ಈಗ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಅನ್ನು ಅನೇಕ ನಟ-ನಟಿಯರಿಗೆ ತೋರಿಸಿದೆವು. ನೋಡಿದವರೆಲ್ಲರೂ ಹೊಸ ತರಹದ ಕಾಮಿಡಿ ಇದೆ, ವಿಭಿನ್ನವಾಗಿದೆ ಎಂದು ಪ್ರೋತ್ಸಾಹಿಸಿದರು. ಆ ಮಟ್ಟಿಗೆ ಒಂದಷ್ಟು ಹೊಸತನ್ನು ಇಲ್ಲಿ ಪ್ರಯತ್ನಿಸಿದ್ದೇವೆ. ಕನ್ನಡದ ಬಹುತೇಕ ಹಾಸ್ಯ ನಟರೆಲ್ಲ ಇಲ್ಲಿ ನಟಿಸಿದ್ದಾರೆ’ ಎಂದು ಹೇಳಿಕೊಂಡರು ಸಂಚಾರಿ ವಿಜಯ್‌. 

ಈ ಚಿತ್ರವನ್ನು ಬಾಹುಬಲಿ ಎನ್ನುವವರು ನಿರ್ದೇಶಕರು. ಇವರ ಹೆಸರೇ ಬಾಹುಬಲಿ. ಚಿತ್ರದ ಟ್ರೇಲರ್‌ನಲ್ಲಿ ತಮ್ಮ ಹೆಸರನ್ನೇ ಫ‌ನ್‌ ಮಾಡುತ್ತಾ ಟ್ರೇಲರ್‌ ಕಟ್‌ ಮಾಡಿದ್ದಾರೆ. “ಬಾಹುಬಲಿ ಕನ್‌ಫ್ಯೂಶನ್‌’ ಎಂದೇ ಆರಂಭವಾಗುತ್ತದೆ ಟ್ರೇಲರ್‌. ತಮ್ಮ ಚೊಚ್ಚಲ ಪ್ರಯತ್ನವಾದ ಕಾಮಿಡಿ ಸಿನಿಮಾ ಬಗ್ಗೆ ಮಾತನಾಡುವಾಗ ನಿರ್ದೇಶಕ ಬಾಹುಬಲಿ ಭಾವುಕರಾದರು. ಅದಕ್ಕೆ ಕಾರಣ ಅವರ ಕನಸು ಇಂದು ತೆರೆಮೇಲೆ ಬರಲು ಸಿದ್ಧವಾಗಿರೋದು. “ನನ್ನ ಕನಸು ಇಂದು ತೆರೆಮೇಲೆ ಬರಲು ಸಿದ್ಧವಾಗಿದೆ. ಆದಕ್ಕೆ ನಾನೊಬ್ಬ ಕಾರಣನಲ್ಲ. ನನ್ನನ್ನು ನಂಬಿ ಸಿನಿಮಾ ನಿರ್ಮಾಣ ಮಾಡಿದ ನಿರ್ಮಾಪಕರು, ಪಾತ್ರಕ್ಕೆ ಜೀವ ತುಂಬಿದ ತಾಂತ್ರಿಕ ವರ್ಗ ಎಲ್ಲರೂ ಕಾರಣ. ನಮ್ಮ ಚಿತ್ರದ ಟ್ರೇಲರ್‌ ನೋಡಿ ಚಿತ್ರರಂಗದ ನಟ-ನಟಿಯರು ಖುಷಿಪಟ್ಟಿದ್ದಾರೆ. ಸದ್ಯ ಚಿತ್ರ ಡಿಟಿಎಸ್‌ ಹಂತದಲ್ಲಿದ್ದು, ಶೀಘ್ರದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇಡೀ ಫ್ಯಾಮಿಲಿ ನೋಡುವಂತಹ ಒಂದು ಮಜಾವಾದ ಸಿನಿಮಾ ಇದು’ ಎಂಬುದು ಅವರ ಮಾತು. 

ನಿರ್ಮಾಪಕರಾದ ಅನ್ನದಾನಪ್ಪ ಹಾಗೂ ಮೋಹನ್‌ ಕುಮಾರ್‌ ಕೂಡಾ ಸಿನಿಮಾ ನಿರ್ಮಾಣ ಮಾಡಿದ ಖುಷಿ ಹಂಚಿಕೊಂಡರು. 

ನಟಿ ಅಮೃತಾ ನಿರ್ದೇಶಕರ, ಕಥೆಯ ಮೇಲೆ ನಂಬಿಕೆ ಇಟ್ಟು ಈ ಸಿನಿಮಾ ಒಪ್ಪಿಕೊಂಡರಂತೆ. ಒಂದು ವೇಳೆ ಆ ಸಿನಿಮಾವನ್ನು ಮಿಸ್‌ ಮಾಡಿಕೊಳ್ಳುತಿದ್ದರೆ ಅದು ಅವರು ಮಾಡಿದ ದೊಡ್ಡ ತಪ್ಪಾಗುತ್ತಿತ್ತಂತೆ. ಇನ್ನು, ದೀಪಿಕಾ ಕೂಡಾ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರಿಗೆ ನಗಿಸುವ ಅವಕಾಶ ಸಿಕ್ಕಿದೆಯಂತೆ. ಚಿತ್ರದಲ್ಲಿ ನಟಿಸಿದ ವಿಜಯ್‌ ಚೆಂಡೂರ್‌ ಸೇರಿದಂತೆ ಇತರ ಕಲಾವಿದರು ಕೂಡಾ ತಮ್ಮ ಅನಿಸಿಕೆ ಹಂಚಿಕೊಂಡರು. ಚಿತ್ರಕ್ಕೆ ಗುಂಡ್ಲುಪೇಟೆ ಸುರೇಶ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.