ಬಂದ್ರು ಎಂಜಿನಿಯರ್


Team Udayavani, Mar 31, 2017, 11:10 AM IST

31-SUCHITRA-7.jpg

ಗಾಂಧಿನಗರಕ್ಕೆ ಮೆಲ್ಲನೆ ಸಾಫ್ಟ್ವೇರ್‌ ಮಂದಿಯ ಆಗಮನವಾಗುತ್ತಿದೆ. ಈಗಾಗಲೇ ಎಂಜಿನಿಯರ್‌ಗಳೆಲ್ಲ ಸೇರಿಕೊಂಡು ಹೊಸ ಬಗೆಯ ಸಿನಿಮಾ ಕೊಟ್ಟು ತಕ್ಕಮಟ್ಟಿಗೆ ಸುದ್ದಿ ಆಗಿರೋದು ಗೊತ್ತೇ ಇದೆ. ಮೊನ್ನೆ ಮೊನ್ನೆಯಷ್ಟೇ ಎಂಜಿನಿಯರಿಂಗ್‌ ಹುಡುಗರ ಕುರಿತ “ಕಿರಿಕ್‌ ಪಾರ್ಟಿ’ ಚಿತ್ರ ಕೂಡ ಜೋರು ಸದ್ದು ಮಾಡಿದ್ದೂ ಗೊತ್ತು.

ಈಗ ಅಂಥದ್ದೇ ರಿಯಲ್‌ ಎಂಜಿನಿಯರ್ ತಂಡವೊಂದು ಸದ್ದಿಲ್ಲದೆಯೇ “ಎಂಜಿನಿಯರ್’ ಎಂಬ ಸಿನಿಮಾ ಮಾಡಿ ಮುಗಿಸಿದೆ. ಇಷ್ಟರಲ್ಲೇ ಅದನ್ನು ತೆರೆಗೆ ತರಲು ತಯಾರು ಮಾಡಿಕೊಳ್ಳುತ್ತಿದೆ. ಅಂದಹಾಗೆ, ಈ ಶೀರ್ಷಿಕೆಗೆ “ಬೈ ಕಾಮನ್‌ ಮ್ಯಾನ್‌’ ಎಂಬ ಅಡಿಬರಹವಿದೆ. ಟೆಕ್ಕಿಯಾಗಿರುವ ವಿನಯ್‌ ರತ್ನ ಸಿದ್ದಿ ಕಳೆದ ಏಳು ವರ್ಷಗಳಿಂದಲೂ ನೃತ್ಯ ಶಾಲೆ ನಡೆಸುತ್ತಿದ್ದಾರೆ. ಅವರಿಗೆ ಕಥೆ ಬರೆಯುವ ಆಸೆ ಹುಟ್ಟಿದ್ದೇ ತಡ, ಒಂದೇ ರಾತ್ರಿಯಲ್ಲಿ ಕಥೆಯೊಂದನ್ನು ಬರೆದರಂತೆ. ಅದನ್ನೇ ಇಟ್ಟುಕೊಂಡು ಯಾಕೆ ಸಿನಿಮಾ ಮಾಡಬಾರದು 
ಅಂತ ತೀರ್ಮಾನಿಸಿ, ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಜತೆಗೆ ನಿರ್ದೇಶನಕ್ಕೂ ಇಳಿಯುವ ಮೂಲಕ ಹೊಸ ಇನ್ನಿಂಗ್ಸ್‌ ಶುರುಮಾಡಿದ್ದಾರೆ ವಿನಯ್‌ ರತ್ನಸಿದ್ದಿ. ಅಂದಹಾಗೆ, ಈ ಸಿನಿಮಾಗೆ ಕೈ ಜೋಡಿಸಿರೋದು ಬಹುತೇಕ ಎಂಜಿನಿಯರ್ ಗೆಳೆಯರು.

ಯಾರೇ ಸಿನಿಮಾ ನೋಡಿದರೂ, ತಮ್ಮ ಬದುಕಿನಲ್ಲಿ ನಡೆದ ಘಟನೆಗಳಂತೆಯೇ ಭಾಸವಾಗುವಷ್ಟರಮಟ್ಟಿಗೆ ಕಥೆ ಮೂಡಿಬಂದಿದೆ
ಎಂಬುದು ನಿರ್ದೇಶಕರ ಮಾತು. ಇಲ್ಲಿ ಮನರಂಜನೆಯ ಜತೆಯಲ್ಲಿ ಸಂದೇಶವೂ ಇದೆ. ಇನ್ನು, ಒಬ್ಬರಲ್ಲ, ಇಬ್ಬರಲ್ಲ, ಮೂವರೂ ಅಲ್ಲ,
ಬರೋಬ್ಬರಿ ಎಂಟು ಮಂದಿ ನಾಯಕಿಯರು ಇಲ್ಲಿ ಕಾಣಿಸಿಕೊಂಡಿದ್ದಾರಂತೆ. ಚಿತ್ರದ ಇನ್ನೊಂದು ವಿಶೇಷವೆಂದರೆ, ರಾಜ್ಯದ ಎಲ್ಲಾ ಜಿಲ್ಲೆಗಳ ಭಾಷೆಯ ಶೈಲಿಯೂ ಇಲ್ಲಿ ಬಳಕೆ ಮಾಡಲಾಗಿದೆ ಎನ್ನುವ ನಿರ್ದೇಶಕರು, “ಒಬ್ಬ ಕಾಮನ್‌ ಮ್ಯಾನ್‌ ಎಷ್ಟೇ ಕಷ್ಟದಲ್ಲಿದ್ದರೂ
ಸಾಧನೆ ಮಾಡಬೇಕು ಎಂಬ ಹುಮ್ಮಸ್ಸಿನಲ್ಲೇ ಬದುಕು ಕಳೆಯುತ್ತಾನೆ. ಆ ಬದುಕಿನ ಪಯಣದಲ್ಲಿ ತೊಂದರೆಗಳು ಎದುರಾದಾಗ
ಆತ್ಮಹತ್ಯೆಗೆ ಶರಣಾಗುವುದು ಬೇಡ. ಬದುಕನ್ನ ಪ್ರೀತಿಸಿ, ಅನುಭವಿಸಬೇಕು ಎಂಬ ಅಂಶ ಚಿತ್ರದಲ್ಲಿದೆ’ ಎಂದು ವಿವರ ಕೊಡುತ್ತಾರೆ ವಿನಯ್‌ ರತ್ನ ಸಿದ್ದಿ. ನಿರ್ದೇಶಕ ವಿನಯ್‌ ಅವರಿಲ್ಲಿ ನಾಯಕರಾಗಿಯೂ ಕಾಣಿಸಿಕೊಂಡಿದ್ದಾರಂತೆ. ಬಳ್ಳಾರಿ ಮೂಲದ ಶಮಾತಾಜ್‌ ತುಂಟ ಹುಡುಗಿಯಾಗಿ ಹುಡುಗರನ್ನು ರೇಗಿಸುವ ಪಾತ್ರ ನಿರ್ವಹಿಸಿದ್ದಾರಂತೆ. ನೃತ್ಯ ಶಾಲೆ ವಿದ್ಯಾರ್ಥಿಗಳಾದ ರಾಜೇಶ್‌, ಸೂರ್ಯ, ಚಂದನ್‌ ಇತರರು ಮೊದಲ ಸಲ ನಟಿಸಿದ್ದಾರೆ. ಎರಡು ಹಾಡುಗಳಿಗೆ ರವಿದೇವ್‌ ಸಂಗೀತ ನೀಡಿದ್ದಾರೆ. ಬಹುತೇಕ ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗಿದೆ. ಚಂದನ, ಅಮರೇಂದ್ರವರ್ಮ, ಸುಮ, ಪ್ರಭು ಅವರ ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.