ತಾಳ್ಮೆ ಇರಲಿ…ಸಿನಿಪಥದಲ್ಲಿ ಹೊಸಬರು


Team Udayavani, Oct 4, 2019, 4:35 AM IST

c-29

ಮನುಷ್ಯ ಅಂದಮೇಲೆ ಆಸೆ, ಆಕಾಂಕ್ಷೆ ಮತ್ತು ಕನಸು ಸಹಜ. ಇವೆಲ್ಲವನ್ನು ಪಡೆಯಬೇಕಾದರೆ, ಬದುಕಲ್ಲಿ ತಾಳ್ಮೆ, ನಂಬಿಕೆ ಮುಖ್ಯ. ಈ ಅಂಶ ತುಂಬಿರುವ ಕಥೆ ಹೆಣೆದು, ಹೀಗೊಂದು ಹೊಸಬರ ತಂಡ “ರಾಜಪಥ’ ಹೆಸರಿನ ಚಿತ್ರ ಮಾಡಿದೆ. ಸೆನ್ಸಾರ್‌ ಕೂಡ “ಯು’ ಪ್ರಮಾಣ ಪತ್ರ ನೀಡಿದೆ. ಅಷ್ಟೇ ಅಲ್ಲ, ಮಲಯಾಳಂ ಮಂದಿ ಡಬ್ಬಿಂಗ್‌ ಹಕ್ಕು ಖರೀದಿಸಿದ್ದಾರೆ ಕೂಡ. ಇಂತಿಪ್ಪ, “ರಾಜಪಥ’ ಚಿತ್ರತಂಡದ ಖುಷಿಗೆ ಪಾರವೇ ಇಲ್ಲ.

ಈ ಚಿತ್ರವನ್ನು ಸಿದ್ದು ಮೂಗೂರು ನಿರ್ದೇಶನ ಮಾಡಿದ್ದಾರೆ. ಇವರಿಗಿದು ಮೊದಲ ಚಿತ್ರ. ಈ ಹಿಂದೆ ಕೆ.ಜಯರಾಂ, ರಾಮದಾಸ ನಾಯ್ಡು ಅವರ ಜೊತೆ ಅನುಭವ ಪಡೆದ ಸಿದ್ದು, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಲೈಫ‌ಲ್ಲಿ ಕೆಲವನ್ನು ಈಡೇರಿಸಿಕೊಳ್ಳಬೇಕಾದರೆ, ತಾಳ್ಮೆ ಬೇಕು, ಶ್ರದ್ಧೆ ಇರಬೇಕು, ಶ್ರಮವೂ ಅಗತ್ಯ. ಇವೆಲ್ಲದರ ಸಾರವೇ “ರಾಜಪಥ’ ಎಂಬುದು ಚಿತ್ರತಂಡದ ಮಾತು. ಚಿತ್ರದಲ್ಲಿ ಹಲವು ಪಾತ್ರಗಳು ಕಾಣಿಸಿಕೊಳ್ಳಲಿದ್ದು, ಆರು ಪಾತ್ರಗಳು ಸಿನಿಮಾದ ಜೀವಾಳ. ಬೆಂಗಳೂರು, ನೆಲಮಂಗಲ ಸೇರಿದಂತೆ ಇತರೆ ಸ್ಥಳಗಳಲ್ಲಿ ಸುಮಾರು ಇಪ್ಪತ್ತೆರಡು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ಸಂತೋಷ್‌.ಹೆಚ್‌.ರಾಯ್ಕರ್‌ ಚಿತ್ರದ ಹೀರೋ. ಈ ಹಿಂದೆ ಕಿರುತೆರೆಯಲ್ಲಿ ನಟನೆ ಮಾಡಿ, ಸಹಾಯಕ ನಿರ್ದೇಶನ ವಿಭಾಗದಲ್ಲೂ ತಕ್ಕಮಟ್ಟಿಗಿನ ಅನುಭವ ಪಡೆದು, ಈಗ ನಾಯಕನಾಗಿದ್ದಾರೆ. ನಿರ್ಮಾಣದ ಜವಾಬ್ದಾರಿಯೂ ಇವರದೇ. ನಿತ್ಯಾ ಅವರು ಸಂತೋಷ್‌ಗೆ ನಾಯಕಿಯಾಗಿ ನಟಿಸಿದ್ದಾರೆ. ಸಿಂಧು ಎರಡನೇ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಉಮೇಶ್‌, ಸುಧೀರ್‌, ಆನಂದ್‌.ಡಿ.ಕಳಸ, ಎಸ್‌.ಎ. ಮುತ್ತಗಿ, ಲಕ್ಷಣ್‌ ಪೂಜಾರಿ, ರಮಾಕಾಂತ್‌ ಆರ್ಯನ್‌, ಬೇಬಿ ಪರಿಣಿತ, ಬೇಬಿ ಐಶ್ವರ್ಯ ಇತರರು ನಟಿಸಿದ್ದಾರೆ.

ಚಂದ್ರು ಓಬಯ್ಯ ಸಂಗೀತ ನೀಡಿದ್ದಾರೆ. ಜೊತೆಗೆ ಐದು ಹಾಡುಗಳಿಗೆ ಸಾಹಿತ್ಯ ನೀಡಿದ್ದಲ್ಲದೆ, ಮೂರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ರಘು ಅವರ ಛಾಯಾಗ್ರಹಣವಿದೆ. ಸಂಜೀವ್‌ ರೆಡ್ಡಿ ಸಂಕಲನವಿದೆ. ಜೇಮ್ಸ್‌ ಪರಿಕಟ್ಟಿಲ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸದ್ಯಕ್ಕೆ ಚಿತ್ರದ ಹಾಡುಗಳು ಹೊರಬಂದಿವೆ. ಬ್ರಹ್ಮಾನಂದ ಗುರೂಜಿ ಲಿರಿಕಲ್‌ ವಿಡಿಯೋ ಬಿಡುಗಡೆ ಮಾಡಿ, ತಂಡಕ್ಕೆ ಶುಭಹಾರೈಸಿದ್ದಾರೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.