ಇತ್ಯರ್ಥದ ಜೀವಾಳ ಬಿ. ಜಯಶ್ರೀ

ಗ್ಯಾಪ್‌ ಬಳಿಕ ಬಂದ ಹಿರಿಯ ಕಲಾವಿದೆ

Team Udayavani, Mar 20, 2020, 10:43 AM IST

ಇತ್ಯರ್ಥದ ಜೀವಾಳ ಬಿ. ಜಯಶ್ರೀ

ಬಿ.ಜಯಶ್ರೀ…
ರಂಗಭೂಮಿಯಲ್ಲಷ್ಟೇ ಅಲ್ಲ, ಚಿತ್ರರಂಗದಲ್ಲೂ ಬಹುದೊಡ್ಡ ಹೆಸರಿದು. ಈ ಎರಡು ರಂಗದಲ್ಲೂ ತಮ್ಮದೇ ಛಾಪು ಮೂಡಿಸಿರುವ ಹಿರಿಯ ಕಲಾವಿದೆ ಬಿ.ಜಯಶ್ರೀ ಬಹಳ ಗ್ಯಾಪ್‌ ಬಳಿಕ ಹೀಗೊಂದು ಚಿತ್ರದಲ್ಲಿ ನಟಿಸಿದ್ದಾರೆ. ಅದು ಚಿತ್ರದ ಪ್ರಮುಖ ಪಾತ್ರ ಅನ್ನೋದು ವಿಶೇಷ. ಕೇವಲ ನಟನೆ ಮಾತ್ರವಲ್ಲ, ಅವರು ಚಿತ್ರದಲ್ಲಿ ಎರಡು ಹಾಡುಗಳಿಗೂ ಧ್ವನಿಯಾಗಿದ್ದಾರೆ. ಹೌದು, ಬಿ.ಜಯಶ್ರೀ ಸಿನಿಮಾಗಳಲ್ಲಿ ಕಾಣಿಸಿಕೊಳ್ಳೋದು ಅಪರೂಪ. ಹಾಗೆ ಕಾಣಿಸಿಕೊಳ್ಳಬೇಕಾದರೆ, ಅವರಿಗೆ ಮೊದಲು ಕಥೆ, ಪಾತ್ರ ಮತ್ತು ಚಿತ್ರತಂಡ ಇಷ್ಟವಾಗಬೇಕು. ಆ ಎಲ್ಲಾ ಗುಣಗಳು ಇದ್ದ ಕಾರಣ, ಅವರೀಗ “ಇತ್ಯರ್ಥ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಅಂದಹಾಗೆ, ಈ ಚಿತ್ರಕ್ಕೆ ಎ.ಜಿ.ಶೇಷಾದ್ರಿ ನಿರ್ದೇಶಕರು. ಈಗಾಗಲೇ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿದ ಅನುಭವ ಎ.ಜಿ ಶೇಷಾದ್ರಿ ಅವರಿಗಿದೆ. ಇನ್ನು, ಹಲವಾರು ವರ್ಷಗಳಿಂದ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಸಿನಿಮಾ ಪ್ಯಾಷನ್‌ ಇಟ್ಟುಕೊಂಡಿರುವ ಎನ್‌.ಎಲ್ ಎನ್‌ ಮೂರ್ತಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಬಿ.ಜಯಶ್ರೀ ಅವರದು ಇಡೀ ಕಥೆಯನ್ನು ಕುತೂಹಲ ಘಟ್ಟಕ್ಕೆ ಕೊಂಡೊಯ್ಯುವ ಪಾತ್ರ ಮಾಡಿದ್ದಾರೆ ಎಂಬುದು ನಿರ್ದೇಶಕ ಎ.ಜಿ.ಶೇಷಾದ್ರಿ ಅವರ ಮಾತು. ಹಾಗೆ ಹೇಳುವುದಾದರೆ, ಚಿತ್ರದ ಕಥೆಗೆ ಮುಖ್ಯ ತಿರುವು ಸೃಷ್ಟಿಸುವ ಪಾತ್ರವಂತೆ. ಅವರಿಲ್ಲಿ ತಾಯಿಯಾಗಿಯೂ, ಆತಿಥ್ಯ ಕೊಡುವ ವೃದ್ಧೆಯಾಗಿಯೂ, ಯಾರೇ ಕಾಲು, ಕೈ ಮುರಿದುಕೊಂಡರೂ ಆ ಊರಲ್ಲಿ ನಾಟಿ ಔಷಧಿ ಕೊಡುವ ಮೂಲಕ ಗುಣಪಡಿಸುವ ಗುಣವಂತೆಯಾಗಿಯೂ ಕಾಣಿಸಿಕೊಂಡಿದ್ದಾರಂತೆ. ಚಿತ್ರದ ಕಥೆ ಸಾಗುತ್ತಲೇ ಗಾಢವಾಗಿ ಆವರಿಸಿಕೊಳ್ಳುವ ಪಾತ್ರವಾಗಿರುವುದರಿಂದ, ಅವರು ಸಾಕಷ್ಟು ಸಮಯ ಪಡೆದೇ ಚಿತ್ರದಲ್ಲಿ ತೊಡಗಿಸಿಕೊಂಡಿದ್ದರು ಎಂಬುದು ನಿರ್ದೇಶಕರ ಮಾತು.

ಇನ್ನು, ಬಿ.ಜಯಶ್ರೀ ಅವರು ಅದ್ಭುತ ಹಾಡುಗಾತಿ. “ಇತ್ಯರ್ಥ’ ಚಿತ್ರದಲ್ಲಿ ಅಭಿನಯದ ಜೊತೆ ಎರಡು ಹಾಡುಗಳಿಗೂ ಧ್ವನಿಯಾಗಿದ್ದಾರೆ. ಅವರ ಅದ್ಭುತ ನಟನೆಯಷ್ಟೇ, ಹಾಡನ್ನೂ ತಲೆದೂಗುವಂತೆ ಹಾಡಿದ್ದಾರೆ. ಅವರು ಹಾಡಿರುವ ಎರಡು ಹಾಡುಗಳು ಸಹ ಹೊಸ ರೀತಿಯಲ್ಲಿ ಮೂಡಿಬಂದಿವೆ. ಕ್ಲೈಮ್ಯಾಕ್ಸ್‌ ಹಂತದಲ್ಲಿ ಬರುವ “ಶಂಭೋ ಹರ ಶಿವ ಶಿವ… ಶಂಭೋ ಹರ…’ ಎಂಬ ಹಾಡು ಹಾಡಿರುವುದಲ್ಲದೆ, ಆ ಹಾಡಲ್ಲಿ ಅವರೇ ಕಾಣಿಸಿಕೊಂಡಿದ್ದಾರೆ ಎಂದು ಹೇಳುವ ನಿರ್ದೇಶಕರು, ಆ ಹಾಡು ಬಹಳ ವರ್ಷಗಳ ಕಾಲ ಗುನುಗುವಂತಹ ಹಾಡಷ್ಟೇ ಅಲ್ಲ, ಹಲವು ರಿಯಾಲಿಟಿ ಶೋ, ಡ್ಯಾನ್ಸ್‌ ಸ್ಪರ್ಧೆಗಳಲ್ಲೂ ಫೇವರೇಟ್‌ ಚಾಯ್ಸ ಆಗಿ ಉಳಿದುಕೊಳ್ಳುವಂತಹ ಹಾಡು ಎನ್ನುತ್ತಾರೆ.

ಬಿ.ಜಯಶ್ರೀ ಅವರು “ಇತ್ಯರ್ಥ’ ಚಿತ್ರ ಒಪ್ಪಿಕೊಂಡಾಗ ಅವರು ರಾಜ್ಯ ಸಭೆ ಸದಸ್ಯೆಯಾಗಿದ್ದರಂತೆ. ಬಿಝಿ ನಡುವೆಯೂ, ಕಥೆ, ಪಾತ್ರ ಇಷ್ಟವಾಗಿದ್ದರಿಂದಲೇ ಅವರು ಡೇಟ್‌ ಕೊಟ್ಟು ಕೆಲಸ ಮಾಡಿದ್ದಾರೆ. ಅವರ ಭಾಗದ ಚಿತ್ರೀಕರಣ ಸುಮಾರು 10 ದಿನಗಳ ಕಾಲ ನಡೆದಿದ್ದು, ಚಿತ್ರದ ದ್ವಿತಿಯಾರ್ಧ ಅವರೇ ಜೀವನಾಡಿ ಎನ್ನುವ ನಿರ್ದೇಶಕರು, ಸದ್ಯಕ್ಕೆ “ಇತ್ಯರ್ಥ’ ಚಿತ್ರ ಈಗ ಸೆನ್ಸಾರ್‌ಗೆ ಹೋಗಲು ಸಜ್ಜಾಗುತ್ತಿದೆ. ಆ ಬಳಿಕ ಬಿಡುಗಡೆಯಾಗಲಿದೆ. ಇದೊಂದು ರೊಮ್ಯಾನ್ಸ್‌, ಥ್ರಿಲ್ಲರ್‌, ಹಾರರ್‌, ಸಸ್ಪೆನ್ಸ್‌, ಕಾಮಿಡಿ, ಸೆಂಟಿಮೆಂಟ್‌, ಎಮೋಷನಲ್‌ ಹೊಂದಿರುವ ಚಿತ್ರ. ಚಿತ್ರದಲ್ಲಿ ಮೋಹನ್‌ ಮತ್ತು ನವೀನ್‌ ಕೃಷ್ಣ ನಾಯಕರಾದರೆ, ಮುಂಬೈ ಮೂಲದ ಖುಷಿ ಮುಖರ್ಜಿ ನಾಯಕಿಯಾಗಿದ್ದಾರೆ. ಉಳಿದಂತೆ ಚಿತ್ರದಲ್ಲಿ ರಮೇಶ್‌ ಪಂಡಿತ್‌, ಶ್ರೀನಿವಾಸ ಪ್ರಭು, ಅರವಿಂದ ರಾವ್‌, “ಬೆನಕ’ ಪವನ್‌ ಇತರರು ನಟಿಸಿದ್ದಾರೆ. ಮೋಹನ್‌ ಇಲ್ಲಿ ನಟನೆ ಜೊತೆ ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಹಿರಿಯ ಛಾಯಾಗ್ರಾಹಕ ಡಿ.ಪ್ರಸಾದ್‌ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಗೌತಮ್‌ ಶ್ರೀವತ್ಸ ಆರು ಹಾಡುಗಳಿಗೆ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.