ಸೈಂಟಿಫಿಕ್ ಸಸ್ಪೆನ್ಸ್- ಥ್ರಿಲ್ಲರ್ ‘ಬೀಗ’ ಟ್ರೇಲರ್ ರಿಲೀಸ್
Team Udayavani, Feb 24, 2023, 2:47 PM IST
ಸೈಂಟಿಫಿಕ್ ಮಿಸ್ಟರಿ ಜೊತೆಗೆ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಬೀಗ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಈ ಹಿಂದೆ “ಅಗ್ರಜ’ ಮತ್ತು “ಲೀ’ ಸಿನಿಮಾಗಳನ್ನು ನಿರ್ದೇಶಿಸಿದ್ದ ಹೆಚ್. ಎಂ ಶ್ರೀನಂದನ್ ನಿರ್ದೇಶನದ ಮೂರನೇ ಸಿನಿಮಾ ಇದಾಗಿದ್ದು, “ವಿಎಂಆರ್ ಪೊ›ಡಕ್ಷನ್’ ಬ್ಯಾನರ್ ನಲ್ಲಿ ರಮೇಶ್ ಮುನಿಹನುಮಪ್ಪ, ಹೆಚ್. ಎಂ ಶ್ರೀನಂದನ್ ಹಾಗೂ ಕೃಷ್ಣ ಎಲ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
ಟ್ರೇಲರ್ ಬಿಡುಗಡೆ ಬಳಿಕ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಹೆಚ್. ಎಂ ಶ್ರೀನಂದನ್, “ಇದೊಂದು ವೈಜ್ಞಾನಿಕ ಹಿನ್ನೆಲೆ ಇಟ್ಟುಕೊಂಡು ಮಾಡಿರುವ ಸಿನಿಮಾ. ಯಾರೂ ವಾಸವಿರದ ಮನೆಯೊಂದರ “ಬೀಗ’ ತೆಗೆದ ನಂತರ ಅಲ್ಲಿ ಏನೇನು ನಡೆಯುತ್ತದೆ ಎಂಬುದು ಸಿನಿಮಾದ ಕಥೆಯ ಒಂದು ಎಳೆ. ಹೆಣ್ಣುಮಗುವೊಂದು ರಸ್ತೆಯಲ್ಲಿ ಬಂದಾಗ ಅದನ್ನು ಮಗು ಎಂದೂ ನೋಡದೆ ಕೆಲವರು ಹೇಗೆ ವರ್ತಿಸುತ್ತಾರೆ ಎನ್ನುವುದನ್ನೂ ಸಿನಿಮಾದಲ್ಲಿ ತೋರಿಸಿದ್ದೇವೆ. ಆ ಥರದ ಮನಸ್ಥಿತಿ ಇದ್ದವರು ಈ ಸಿನಿಮಾ ನೋಡಿ ಬದಲಾಗಬೇಕು ಎನ್ನುವುದು ನಮ್ಮ ಆಶಯ’ ಎಂದರು.
“ಬೀಗ’ ಸಿನಿಮಾದಲ್ಲಿ ನ ರವಿಶಂಕರ್ ಸಸ್ಪೆಂಡ್ ಆಗಿರುವ ಪೋಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ “ಮೊಗ್ಗಿನ ಮನಸು’ ಖ್ಯಾತಿಯ ಯುವನಟ ಜೆ. ಡಿ ಆಕಾಶ್, ಸೈಯದ್ ಇರ್ಫಾನ್, ಶ್ರೀನಂದನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಉತ್ತರ ಭಾರತ ಮೂಲದ ಸಹಾರ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಸುಮಿತಾ ಬಜಾಜ್, ಸುಚೇಂದ್ರ ಪ್ರಸಾದ್, ಕುಮಾರ್ ಅರಸೇಗೌಡ, ಮೈಸೂರು ರಮಾನಂದ, ಬೇಬಿ ಶರಣ್ಯ ಮೊದಲಾದವರು “ಬೀಗ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಬೆಂಗಳೂರು ಸುತ್ತಮುತ್ತ “ಬೀಗ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾದಲ್ಲಿ ನಾಲ್ಕು ಸಾಹಸ ದೃಶ್ಯಗಳು ಹಾಗೂ ಐದು ಹಾಡುಗಳಿವೆ. ಚಿತ್ರಕ್ಕೆ ಎಂ.ಬಿ ಹಳ್ಳಿಕಟ್ಟೆ, ವೀನಸ್ ನಾಗರಾಜಮೂರ್ತಿ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನ, ಶ್ರೀಗುರು ಸಂಗೀತ ಸಂಯೋಜನೆಯಿದೆ. ಅಂದಹಾಗೆ ಈ ಸಿನಿಮಾ ತೆಲುಗಿನಲ್ಲಿ “ಕರಾಳ’ ಹೆಸರಲ್ಲಿ ತೆರೆ ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ