Kannada cinema; ಇನ್ಫ್ಲುಯೆನ್ಸರ್ ಬದುಕಿನ ಚಿತ್ರಣ; ‘ಬೆಂಬಿಡದ ನಾವಿಕ’ ಇಂದು ತೆರೆಗೆ
Team Udayavani, Nov 17, 2023, 11:44 AM IST
ಬಹುತೇಕ ಯುವ ಪ್ರತಿಭೆಗಳೇ ಸೇರಿಕೊಂಡು ನಿರ್ಮಿಸಿರುವ “ಬೆಂಬಿಡದ ನಾವಿಕ’ ಸಿನಿಮಾ ಇಂದು ತೆರೆಕಾಣುತ್ತಿದೆ. “ಶ್ರೀಅಂಬಲವಾಡಿ ಮಹಾಕಾಳಿ ಕಂಬೈನ್ಸ್’ ಬ್ಯಾನರ್ ಅಡಿಯಲ್ಲಿ ಜಿ. ಮಹೇಶ್ ಬಂಡವಾಳ ಹೂಡಿ ನಿರ್ಮಿಸಿರುವ “ಬೆಂಬಿಡದ ನಾವಿಕ’ ಸಿನಿಮಾವನ್ನು ಶ್ರೀಯಾನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವುದರ ಜೊತೆಗೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ.
“ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಇದರಿಂದ ಸಾಕಷ್ಟು ಮಂದಿ “ಇನ್ಫ್ಲುಯೆನ್ಸರ್’ ಕೂಡ ಹುಟ್ಟಿಕೊಳ್ಳುತ್ತಿದ್ದಾರೆ. ಮಹತ್ವಕಾಂಕ್ಷಿಯುಳ್ಳ ಇಂಥ “ಇನ್ಫ್ಲುಯೆನ್ಸರ್’ ಯುವಕನಿಗೆ ಇಂಟರ್ನೆಟ್ ಮೂಲಕ ಬರುವ ಒಂದಷ್ಟು ಸಂಕಷ್ಟಗಳು ಎದುರಾಗುತ್ತವೆ. ನೋಡುತ್ತಿದ್ದಂತೆ ಅದರಿಂದ ಆತನ ಜೀವನ ಬದಲಾಗುತ್ತದೆ. ಎಲ್ಲರಿಗೂ ಗುರಿ ಇರುವಂತೆ ಈತನಿಗೂ ಒಂದಷ್ಟು ಚಾಲೆಂಜ್ಗಳು ಇರುತ್ತದೆ. ಪ್ರತಿ ಕ್ಷಣ ತುಂಬ ಮುಖ್ಯವಾಗಿರುತ್ತದೆ. ಅದು ನಮ್ಮನ್ನು ಯಾವ ರೀತಿಯಾದರೂ ಬದಲಾಯಿಸಬಹುದು ಎಂಬುದನ್ನು ಈ ಸಿನಿಮಾದ ಮೂಲಕ ಹೇಳಿದ್ದೇವೆ’ ಎಂಬುದು “ಬೆಂಬಿಡದ ನಾವಿಕ’ ಸಿನಿಮಾದ ಕಥಾಹಂದರದ ಬಗ್ಗೆ ಚಿತ್ರತಂಡ ನೀಡುವ ವಿವರಣೆ.
“ಬೆಂಬಿಡದ ನಾವಿಕ’ ಸಿನಿಮಾದ ಬಹುತೇಕ ಚಿತ್ರೀಕರಣವನ್ನು ಮಂಗಳೂರು, ಉಡುಪಿ, ಕಾಪು, ಮೈಸೂರು ಸುತ್ತಮುತ್ತ ನಡೆಸಲಾಗಿದೆ. ಸಿನಿಮಾದಲ್ಲಿ ನಾಯಕ ಶ್ರೀಯಾನ್ ಅವರಿಗೆ ಪ್ರಿಯದರ್ಶಿನಿ, ಐಶ್ವರ್ಯಾ ನಾಯಕಿಯರಾಗಿ ಜೋಡಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ