ಭರತ-ಬಾಹುಬಲಿ ವೈಭವ
Team Udayavani, Jan 10, 2020, 5:28 AM IST
“ಶ್ರೀ ಭರತ-ಬಾಹುಬಲಿ’- ಹೀಗೊಂದು ಸಿನಿಮಾ ಬಗ್ಗೆ ನೀವು ಕೇಳಿರಬಹುದು. ಈ ಚಿತ್ರದ ಹೆಸರು ಅನೇಕ ದಿನಗಳಿಂದ ಓಡಾಡುತ್ತಿದ್ದರೂ, ಆ ಸಿನಿಮಾ ಯಾವಾಗ ಬಿಡುಗಡೆ ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಆದರೆ, ಈಗ ಚಿತ್ರತಂಡ ಎಲ್ಲಾ ಪಕ್ಕಾ ಮಾಡಿಕೊಂಡಿದೆ. ಮಂಜು ಮಾಂಡವ್ಯ ನಿರ್ದೇಶಿಸಿ, ನಾಯಕರಾಗಿ ನಟಿಸಿರುವ “ಶ್ರೀ ಭರತ-ಬಾಹುಬಲಿ’ ಚಿತ್ರ ಜನವರಿ 17 ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಹಾಡು ಹಾಗೂ ಟ್ರೇಲರ್ ಅನ್ನು ಮಾಧ್ಯಮದ ಮುಂದೆ ಪ್ರದರ್ಶಿಸಲಾಯಿತು. ನಟ ಯಶ್ ಟ್ರೇಲರ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಅಂದಹಾಗೆ, ಮಂಜು ಮಾಂಡವ್ಯ ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ. “ಮಾಸ್ಟರ್ ಪೀಸ್’ ಚಿತ್ರದ ನಂತರ ಅನೇಕ ನಿರ್ಮಾಪಕರು ಬಂದರೂ, ಯಾರೊಬ್ಬರಲ್ಲೂ ನಿಜವಾದ ಸಿನಿಮಾ ಪ್ರೀತಿ ಕಾಣದ ಕಾರಣ, ಸಿನಿಮಾದಿಂದ ದೂರ ಉಳಿದಿದ್ದ ಮಂಜು, ಆ ಗ್ಯಾಪ್ನಲ್ಲಿ ಈ ಕಥೆ ಮಾಡಿಕೊಂಡರಂತೆ. ಕಥೆಗೆ ತಾನೇ ಹೀರೋ ಆಗಲು ನಿರ್ಧರಿಸಿ, ಅದಕ್ಕೆ ಬೇಕಾದ ತಯಾರಿ ಕೂಡಾ ಮಾಡಿಕೊಂಡರಂತೆ. ಚಿತ್ರದಲ್ಲಿ ಚಿಕ್ಕಣ್ಣ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ. ಮಂಜು ಭರತನಾದರೆ, ಚಿಕ್ಕಣ್ಣ ಬಾಹುಬಲಿ! ಈ ಚಿತ್ರವನ್ನು ಐಶ್ವರ್ಯಾ ಫಿಲಂಸ್ ಬ್ಯಾನರ್ನಡಿ ಶಿವಪ್ರಕಾಶ್ ನಿರ್ಮಿಸಿದ್ದಾರೆ. ಆರು ಕೋಟಿ ರೂಪಾಯಿ ಖರ್ಚು ಮಾಡಿ ಈ ಸಿನಿಮಾ ನಿರ್ಮಿಸಿರುವ ಅವರು, ಈ ಸಿನಿಮಾ ಪ್ರಚಾರಕ್ಕಾಗಿ ಒಂದು ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಅಂದಹಾಗೆ, “ಶ್ರೀ ಭರತ ಬಾಹುಬಲಿ’ ಚಿತ್ರ ಔಟ್ ಅಂಡ್ ಔಟ್ ಕಮರ್ಷಿಯಲ್’ ಸಿನಿಮಾವಾಗಿದ್ದು, ಎಲ್ಲಾ ವರ್ಗದವರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡದ್ದು.
ಚಿತ್ರದಲ್ಲಿ ಸಾರಾ ಹರೀಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತನ್ನ ಮೂಲ ಹುಡುಕಿಕೊಂಡು ವಿದೇಶದಿಂದ ಬರುವ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಸಾರಾ ಮಾತನಾಡುವ ಇಂಗ್ಲೀಷ್ಗೆ ಫಿದಾ ಆಗಿ ಆಕೆಯನ್ನು ಆಯ್ಕೆ ಮಾಡಲಾಯಿತಂತೆ. ಉಳಿದಂತೆ ಶ್ರೇಯಾ ಶೆಟ್ಟಿ, ಅಮೃತಾ, ಶ್ರೀನಿವಾಸ ಮೂರ್ತಿ,ಕರಿಸುಬ್ಬು ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ