![modi (4)](https://www.udayavani.com/wp-content/uploads/2024/07/modi-4-4-415x256.jpg)
ಭರತ-ಬಾಹುಬಲಿ ವೈಭವ
Team Udayavani, Jan 10, 2020, 5:28 AM IST
![17](https://www.udayavani.com/wp-content/uploads/2020/01/17-6-620x450.jpg)
“ಶ್ರೀ ಭರತ-ಬಾಹುಬಲಿ’- ಹೀಗೊಂದು ಸಿನಿಮಾ ಬಗ್ಗೆ ನೀವು ಕೇಳಿರಬಹುದು. ಈ ಚಿತ್ರದ ಹೆಸರು ಅನೇಕ ದಿನಗಳಿಂದ ಓಡಾಡುತ್ತಿದ್ದರೂ, ಆ ಸಿನಿಮಾ ಯಾವಾಗ ಬಿಡುಗಡೆ ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಆದರೆ, ಈಗ ಚಿತ್ರತಂಡ ಎಲ್ಲಾ ಪಕ್ಕಾ ಮಾಡಿಕೊಂಡಿದೆ. ಮಂಜು ಮಾಂಡವ್ಯ ನಿರ್ದೇಶಿಸಿ, ನಾಯಕರಾಗಿ ನಟಿಸಿರುವ “ಶ್ರೀ ಭರತ-ಬಾಹುಬಲಿ’ ಚಿತ್ರ ಜನವರಿ 17 ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಹಾಡು ಹಾಗೂ ಟ್ರೇಲರ್ ಅನ್ನು ಮಾಧ್ಯಮದ ಮುಂದೆ ಪ್ರದರ್ಶಿಸಲಾಯಿತು. ನಟ ಯಶ್ ಟ್ರೇಲರ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಅಂದಹಾಗೆ, ಮಂಜು ಮಾಂಡವ್ಯ ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ. “ಮಾಸ್ಟರ್ ಪೀಸ್’ ಚಿತ್ರದ ನಂತರ ಅನೇಕ ನಿರ್ಮಾಪಕರು ಬಂದರೂ, ಯಾರೊಬ್ಬರಲ್ಲೂ ನಿಜವಾದ ಸಿನಿಮಾ ಪ್ರೀತಿ ಕಾಣದ ಕಾರಣ, ಸಿನಿಮಾದಿಂದ ದೂರ ಉಳಿದಿದ್ದ ಮಂಜು, ಆ ಗ್ಯಾಪ್ನಲ್ಲಿ ಈ ಕಥೆ ಮಾಡಿಕೊಂಡರಂತೆ. ಕಥೆಗೆ ತಾನೇ ಹೀರೋ ಆಗಲು ನಿರ್ಧರಿಸಿ, ಅದಕ್ಕೆ ಬೇಕಾದ ತಯಾರಿ ಕೂಡಾ ಮಾಡಿಕೊಂಡರಂತೆ. ಚಿತ್ರದಲ್ಲಿ ಚಿಕ್ಕಣ್ಣ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ. ಮಂಜು ಭರತನಾದರೆ, ಚಿಕ್ಕಣ್ಣ ಬಾಹುಬಲಿ! ಈ ಚಿತ್ರವನ್ನು ಐಶ್ವರ್ಯಾ ಫಿಲಂಸ್ ಬ್ಯಾನರ್ನಡಿ ಶಿವಪ್ರಕಾಶ್ ನಿರ್ಮಿಸಿದ್ದಾರೆ. ಆರು ಕೋಟಿ ರೂಪಾಯಿ ಖರ್ಚು ಮಾಡಿ ಈ ಸಿನಿಮಾ ನಿರ್ಮಿಸಿರುವ ಅವರು, ಈ ಸಿನಿಮಾ ಪ್ರಚಾರಕ್ಕಾಗಿ ಒಂದು ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಅಂದಹಾಗೆ, “ಶ್ರೀ ಭರತ ಬಾಹುಬಲಿ’ ಚಿತ್ರ ಔಟ್ ಅಂಡ್ ಔಟ್ ಕಮರ್ಷಿಯಲ್’ ಸಿನಿಮಾವಾಗಿದ್ದು, ಎಲ್ಲಾ ವರ್ಗದವರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡದ್ದು.
ಚಿತ್ರದಲ್ಲಿ ಸಾರಾ ಹರೀಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತನ್ನ ಮೂಲ ಹುಡುಕಿಕೊಂಡು ವಿದೇಶದಿಂದ ಬರುವ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಸಾರಾ ಮಾತನಾಡುವ ಇಂಗ್ಲೀಷ್ಗೆ ಫಿದಾ ಆಗಿ ಆಕೆಯನ್ನು ಆಯ್ಕೆ ಮಾಡಲಾಯಿತಂತೆ. ಉಳಿದಂತೆ ಶ್ರೇಯಾ ಶೆಟ್ಟಿ, ಅಮೃತಾ, ಶ್ರೀನಿವಾಸ ಮೂರ್ತಿ,ಕರಿಸುಬ್ಬು ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.