ತಂದೆಗೆ ತಕ್ಕ ಮಗ

ಆಧುನಿಕ ಭಾರ್ಗವನ ಕಥೆಯಿದು

Team Udayavani, Dec 13, 2019, 6:00 AM IST

sa-18

ಸಾಮಾನ್ಯವಾಗಿ ನಮ್ಮಲ್ಲಿ ರಾಜಕಾರಣಿಯ ಮಕ್ಕಳು ರಾಜಕಾರಣಿ, ಕಲಾವಿದರ ಮಕ್ಕಳು ಕಲಾವಿದರು, ಉದ್ಯಮಿಗಳ ಮಕ್ಕಳು ಉದ್ಯಮಿಗಳಾಗುತ್ತಾರೆ. ತಂದೆಯ ಹೆಸರಿನಲ್ಲಿ, ತಮ್ಮ ಕುಟುಂಬದ ನೆರಳಿನಲ್ಲಿ ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳುತ್ತಾರೆ. ಇದನ್ನು ನಮ್ಮ ಸಮಾಜ ಕೂಡ ಒಪ್ಪುತ್ತದೆ. ಆದರೆ ಅದೇ ರೌಡಿಸಂ ಮಾಡುತ್ತಿರುವ ತಂದೆಯ ಹೆಸರಿನಲ್ಲಿ ಮಗ ಕೂಡ ರೌಡಿಸಂಗೆ ಇಳಿದರೆ ಏನಾಗಬಹುದು? ಒಳ್ಳೆಯ ಮಾರ್ಗಗಳಲ್ಲಿ ಸಿಕ್ಕಂತೆ ತಂದೆಯ ಹೆಸರು, ಕುಟುಂಬದ ನೆರಳು ಕೆಟ್ಟ ಕೆಲಸ ಮಾಡುವ ಮಕ್ಕಳಿಗೂ ಸಿಗುತ್ತದೆಯಾ? ಹಾಗೇನಾದರೂ ಸಿಕ್ಕರೆ ಅವರ ಭವಿಷ್ಯ ಏನಾಗುತ್ತದೆ? ಈಗ ಇದೇ ವಿಷಯವನ್ನು ಕಥೆಯಾಗಿ ಇಟ್ಟುಕೊಂಡು ಬಹುತೇಕ ಹೊಸಬರು “ಭಾರ್ಗವ’ ಎನ್ನುವ ಹೆಸರಿನಲ್ಲಿ ಚಿತ್ರವನ್ನು ತೆರೆಮೇಲೆ ಹೇಳಲು ಹೊರಟಿದ್ದಾರೆ.

ಇನ್ನು ಈ ಚಿತ್ರಕ್ಕೆ “ಭಾರ್ಗವ’ ಎಂದು ಹೆಸರಿಡಲು ಕೂಡ ಸಕಾರಣವಿದೆಯಂತೆ. ಪರುಶುರಾಮನಿಗೆ ಮತ್ತೂಂದು ಹೆಸರು “ಭಾರ್ಗವ’. ಅವನು ತಂದೆ ಮಾತಿನಂತೆ ನಡೆದುಕೊಳ್ಳುತ್ತಾನೆ. ಈ ಚಿತ್ರದಲ್ಲೂ ಕೂಡ ನಾಯಕ ತನ್ನ ತಂದೆಯ ಮಾತಿನಂತೆ ನಡೆದುಕೊಂಡು, ತಂದೆಯ ಪರವಾಗಿ ಹೋರಾಡುತ್ತಾನಂತೆ. ಹಾಗಾಗಿ ಚಿತ್ರಕ್ಕೆ “ಭಾರ್ಗವ’ ಎಂದು ಹೆಸರಿಟ್ಟಿದ್ದೇವೆ ಎನ್ನುವ ವಿವರಣೆ ನೀಡುತ್ತದೆ ಚಿತ್ರತಂಡ.

ಆಂಧ್ರ ಮೂಲದ ವೆಂಕಟ್‌ “ಭಾರ್ಗವ’ ಚಿತ್ರದಲ್ಲಿ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಕೋಲ್ಕತ್ತಾ ಮೂಲದ ದೀಪಿಕಾ ರಾಯ್‌ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಶೋಭರಾಜ್‌, ಸಾಧು ಕೋಕಿಲ, ಮಳವಳ್ಳಿ ಸಾಯಿಕೃಷ್ಣ, ಜಮಿನಿಕಾಂತ್‌, ರಾಜು, ನಜೀರ್‌ ಮುಂತಾದವರು ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ “ಹುಲಿದುರ್ಗ’ ಎಂಬ ಚಿತ್ರವನ್ನು ನಿರ್ದೇಶಿಸಿರುವ ವಿಕ್ರಂ ಯಶೋಧರ, “ಭಾರ್ಗವ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

“ತಂದೆಯಾದವನು ಮಗನನ್ನು ಯಾವ ರೀತಿ ಸಾಕಬೇಕು ಎಂದು ಹೇಳುವುದೇ ಕತೆಯ ತಿರುಳಾಗಿದೆ. ಅದು ಹೇಗೆ ನಡೆಯುತ್ತದೆ ಎಂಬುದನ್ನು ಸನ್ನಿವೇಶಗಳ ಮೂಲಕ ಹೇಳುತ್ತಿದ್ದೇವೆ. ಚಿತ್ರವು ಬೆಂಗಳೂರಿನಲ್ಲಿ ಪ್ರಾರಂಭವಾಗಿ, ಬೆಂಗಳೂರಿನಲ್ಲೇ ಮುಕ್ತಾಯವಾಗಲಿದೆ. ಉಳಿದಂತೆ ದುಬೈ, ಮುಂಬೈ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ಮಾಡಲು ಪ್ಲಾನ್‌ ಮಾಡಿಕೊಳ್ಳಲಾಗಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಮುಂದಿನ ವರ್ಷದ ಮಧ್ಯದಲ್ಲಿ ಚಿತ್ರ ತೆರೆಗೆ ತರುವ ಯೋಜನೆ ಇದೆ’ ಎನ್ನುವ ಮಾಹಿತಿ ನೀಡುತ್ತಾರೆ ನಿರ್ದೇಶಕ ವಿಕ್ರಂ ಯಶೋಧರ. “ಹೆಚ್‌.ಎಸ್‌. ಕ್ರಿಯೇಶನ್ಸ್‌’ ಬ್ಯಾನರ್‌ನಲ್ಲಿ ಪರಿಟಾಲ ಸುನೀಲ್‌ ಕುಮಾರ್‌ ಮತ್ತು ಅಮ್ಮಿನೇನಿ ಹರೀಶ್‌ ಜಂಟಿಯಾಗಿ ನಿರ್ಮಿಸುತ್ತಿರುವ “ಭಾರ್ಗವ’ ಚಿತ್ರ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಸುಭಾಶ್‌ ಆನಂದ್‌ ಸಂಗೀತ ಸಂಯೋಜಿಸುತ್ತಿದ್ದು, ಡಾ. ವಿ ನಾಗೇಂದ್ರ ಪ್ರಸಾದ್‌ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಶ್ಯಾಂ ಸಿಂಧನೂರ್‌ ಛಾಯಾಗ್ರಹಣ, ಕುಂಗು-ಫ‌ು ಚಂದ್ರು ಸಾಹಸ ಸಂಯೋಜನೆ ಇದೆ. ಇತ್ತೀಚೆಗಷ್ಟೆ ಅದ್ಧೂರಿಯಾಗಿ ಮುಹೂರ್ತವನ್ನು ಆಚರಿಸಿಕೊಂಡಿರುವ “ಭಾರ್ಗವ’ ಸದ್ಯ ಚಿತ್ರೀಕರಣದತ್ತ ಮುಖ ಮಾಡಿದ್ದು, ತೆರೆಮೇಲೆ “ಭಾರ್ಗವ’ನ ಅಬ್ಬರ ಹೇಗಿರುತ್ತದೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೆ ಗೊತ್ತಾಗಲಿದೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.