ಬ್ರಹ್ಮಚಾರಿಯ ಸುಖಕರ ಪಯಣ

ಸತೀಶನ ಗೆಲುವಿನ ಸಂಭ್ರಮ

Team Udayavani, Dec 13, 2019, 6:00 AM IST

sa-17

“ನಾನು ಇಲ್ಲಿಯವರೆಗೆ ಹೀರೋ ಆಗಿ ಅನೇಕ ಸಿನಿಮಾಗಳಲ್ಲಿ ಆ್ಯಕ್ಟಿಂಗ್‌ ಮಾಡಿದ್ದೀನಿ. ಆದ್ರೆ, ಇಲ್ಲಿಯವರೆಗೂ ಯಾವ ಸಿನಿಮಾಗಳಲ್ಲೂ, ರಿಲೀಸ್‌ ಆದ ನಂತರ ಸಿನಿಮಾ ಸಕ್ಸಸ್‌ ಆಗಿದೆ ಅಂಥ ಸಕ್ಸಸ್‌ ಮೀಟ್‌ ಮಾಡಿರಲಿಲ್ಲ. ಇದೇ ಮೊದಲ ಸಲ “ಬ್ರಹ್ಮಚಾರಿ’ ಸಿನಿಮಾ ಸಕ್ಸಸ್‌ ಆಗಿದೆ ಅಂಥ ಸಕ್ಸಸ್‌ ಮೀಟ್‌ ಮಾಡ್ತಿರೋದು. ಹಾಗಾಗಿ ನನಗೆ ತುಂಬ ಖುಷಿಯಾಗ್ತಿದೆ…’- ಹೀಗೆ ಹೇಳುತ್ತಾ ಮಾತಿಗಿಳಿದವರು ನಟ ನೀನಾಸಂ ಸತೀಶ್‌.

ಇತ್ತೀಚೆಗಷ್ಟೆ ನೀನಾಸಂ ಸತೀಶ್‌ ಮತ್ತು ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಬ್ರಹ್ಮಚಾರಿ’ ಚಿತ್ರ ತೆರೆಗೆ ಬಂದಿತ್ತು. ರೊಮ್ಯಾಂಟಿಕ್‌ ಕಾಮಿಡಿ ಕಥಾ ಹಂದರದ “ಬ್ರಹ್ಮಚಾರಿ’ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತ, ಬಾಕ್ಸಾಫೀಸ್‌ ಗಳಿಕೆಯಲ್ಲೂ ಏರಿಕೆ ಕಾಣುತ್ತಿದೆ. ಇದೇ ಖುಷಿಯನ್ನು ಹಂಚಿಕೊಳ್ಳಲು ಚಿತ್ರತಂಡ ಮಾಧ್ಯಮಗಳ ಮುಂದೆ ಬಂದಿತ್ತು. ಇದೇ ವೇಳೆ ಮಾತಿಗಿಳಿದ ನೀನಾಸಂ ಸತೀಶ್‌ “ಬ್ರಹ್ಮಚಾರಿ’ ಕೊಟ್ಟ ಗೆಲುವಿನ ಖುಷಿಯ ಬಗ್ಗೆ ಒಂದಷ್ಟು ಮಾತನಾಡಿದರು.

“ಇವತ್ತು ಒಂದು ಸಿನಿಮಾ ಜನಕ್ಕೆ ಆಗೋದು ತುಂಬ ಕಷ್ಟ.ಅಂಥದ್ರಲ್ಲಿ ನಾವು ಕಷ್ಟಪಟ್ಟು ಮಾಡಿದ ಸಿನಿಮಾ ಜನಕ್ಕೆ ಇಷ್ಟ ಆಗ್ತಿದೆ ಅಂದ್ರೆ ಅದಕ್ಕಿಂತ ಖುಷಿ ಬೇರೊಂದಿಲ್ಲ. ಎಲ್ಲ ಕಡೆ “ಬ್ರಹ್ಮಚಾರಿ’ ಸಿನಿಮಾ ನೋಡಿದ ಆಡಿಯನ್ಸ್‌ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಎಲ್ಲ ವರ್ಗದ ಆಡಿಯನ್ಸ್‌ಗೂ ಸಿನಿಮಾ ಇಷ್ಟವಾಗ್ತಿದೆ. ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿ ಒಳ್ಳೆಯ ಕಲೆಕ್ಷನ್ಸ್‌ ಬರುತ್ತಿದೆ. ಇಡೀ ಚಿತ್ರತಂಡ ಖುಷಿಯಾಗಿದೆ. ಎಲ್ಲರ ಸಹಕಾರದಿಂದ “ಬ್ರಹ್ಮಚಾರಿ’ ಗೆಲ್ಲೋದಕ್ಕೆ ಸಾಧ್ಯವಾಯ್ತು. ಚಿತ್ರದ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದಗಳು’ ಎಂದರು.

ಚಿತ್ರದ ಬಿಡುಗಡೆಯ ನಂತರದ ಬೆಳವಣಿಗೆಗಳ ಬಗ್ಗೆ ಮಾತನಾಡಿದ ನಿರ್ಮಾಪಕ ಉದಯ್‌ ಮೆಹ್ತಾ, “ಸಿನಿಮಾವನ್ನು ಸುಮಾರು 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ರಿಲೀಸ್‌ ಮಾಡಲಾಗಿತ್ತು. ರಿಲೀಸ್‌ ಆದ ಎಲ್ಲ ಕೇಂದ್ರಗಳಲ್ಲೂ, ಆಡಿಯನ್ಸ್‌ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್‌ ಬರುತ್ತಿದೆ. “ಬ್ರಹ್ಮಚಾರಿ’ಗೆ ಹಾಕಿದ ಬಂಡವಾಳ ವಾಪಾಸ್‌ ಬಂದಿದ್ದು, ಕಲೆಕ್ಷನ್‌ ಚೆನ್ನಾಗಿದೆ. ಇನ್ನಷ್ಟು ಕೇಂದ್ರಗಳಲ್ಲಿ ಸಿನಿಮಾ ರಿಲೀಸ್‌ ಮಾಡುವಂತೆ ಬೇಡಿಕೆ ಬರುತ್ತಿದೆ. ಒಟ್ಟಿನಲ್ಲಿ ಒಂದೊಳ್ಳೆ ಸಿನಿಮಾವನ್ನು ಆಡಿಯನ್ಸ್‌ ಒಳ್ಳೆಯ ರೀತಿ ಸ್ವೀಕರಿಸಿ, ನಮಗೆ ಸಕ್ಸಸ್‌ ತಂದು ಕೊಟ್ಟಿದ್ದಾರೆ’ ಎಂದರು.

ಇದೇ ವೇಳೆ ನಾಯಕ ನಟಿ ಅದಿತಿ ಪ್ರಭುದೇವ, “”ಬ್ರಹ್ಮಚಾರಿ’ಯನ್ನು ನೋಡಿದವರು ತುಂಬ ಎಂಜಾಯ್‌ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತುಗಳನ್ನಾಡುತ್ತಿರುವುದು ಖುಷಿ ತಂದಿದೆ. ಒಂದೊಳ್ಳೆ ಟೀಮ್‌ ಜೊತೆ ಒಳ್ಳೆಯ ಸಿನಿಮಾ ಮಾಡಿದಕ್ಕೆ ಖುಷಿಯಿದೆ’ ಎಂದು ತಮ್ಮ ಸಂತೋಷವನ್ನು ಹಂಚಿಕೊಂಡರು.

ವೇದಿಕೆ ಮೇಲೆ ಹಾಜರಿದ್ದ ನಿರ್ದೇಶಕ ಚಂದ್ರ ಮೋಹನ್‌, ಸಂಕಲನಕಾರ ಅರ್ಜುನ್‌ ಕಿಟ್ಟು ಸೇರಿದಂತೆ ಚಿತ್ರದ ಕಲಾವಿದರು, ತಂತ್ರಜ್ಞರು ಚಿತ್ರದ ಬಗ್ಗೆ ತಮ್ಮ ಖುಷಿಯನ್ನು ಹಂಚಿಕೊಂಡರು. “ಬ್ರಹ್ಮಚಾರಿ’ ಯಶಸ್ವಿ ಪ್ರದರ್ಶನದ ಪ್ರಯುಕ್ತ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ ಕೇಕ್‌ ಕತ್ತರಿಸಿದ ಚಿತ್ರತಂಡ, ಸಂಭ್ರಮಿಸಿತು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.