ಬ್ರೇಕ್‌ ಕೆ ಬಾದ್‌! ಎರಡು ವರ್ಷಗಳ ಪ್ರೀತಿ-ಪ್ರೇಮ, ನೋವು-ನಲಿವು


Team Udayavani, Jul 7, 2017, 3:50 AM IST

break-ke-bad.jpg

ಕಿರುತೆರೆಯ ಮಂದಿ ಬೆಳ್ಳಿತೆರೆಗೆ ಕಾಲಿಡುತ್ತಿರುವುದು ಹೊಸ ಬೆಳವಣಿಗೆಯೇನಲ್ಲ. ಆ ಸಾಲಿಗೆ ಈಗ “ಆ ಎರಡು ವರ್ಷಗಳು’ ಚಿತ್ರತಂಡವೂ ಸೇರಿದೆ. ಯಶಸ್ವಿ ಧಾರಾವಾಹಿಗಳನ್ನು ನಿರ್ದೇಶಿಸಿದ್ದ ಮಧುಸೂದನ್‌ಗೆ ಇದು ಮೊದಲ ಪ್ರಯತ್ನ. ಈಗಾಗಲೇ ಚಿತ್ರವನ್ನು ಸದ್ದಿಲ್ಲದೆಯೇ ಮುಗಿಸಿರುವ ಮಧುಸೂದನ್‌, ರಿಲೀಸ್‌ಗೆ ತಯಾರು ಮಾಡಿಕೊಳ್ಳುತ್ತಿದ್ದಾರೆ. ಅದಕ್ಕೂ ಮುನ್ನ ಅವರು ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

“ಪಲ್ಲವಿ ಅನುಪಲ್ಲವಿ’, “ಅನುರೂಪ’ ಎಂಬ ಯಶಸ್ವಿ ಧಾರಾವಾಹಿಗಳನ್ನು ನಿರ್ದೇಶಿಸಿದ್ದ ಮಧುಸೂದನ್‌ಗೆ ಈ ಚಿತ್ರವೂ ಸಕ್ಸಸ್‌ ಕೊಡುತ್ತೆ ಎಂಬ ವಿಶ್ವಾಸವಿದೆಯಂತೆ. “ಇದು ಎರಡು ವರ್ಷಗಳಲ್ಲಿ ನಡೆಯೋ ಪ್ರೇಮಕಥೆ. ಹುಡುಗ -ಹುಡುಗಿ ನಡುವೆ ಪ್ರೀತಿ ಬೆಸೆದು, ಬ್ರೇಕ್‌ ಆದಾಗ ಏನೆಲ್ಲಾ ಆಗುತ್ತೆ ಅನ್ನೋದೇ ಕಥೆ. ನಾಯಕಿಗೆ ಇಲ್ಲಿ ಎರಡು ಶೇಡ್‌ ಪಾತ್ರವಿದೆ. ಅವಳ ವರ್ತನೆಯಿಂದ ನಾಯಕನ ಮೇಲೆ ಹೇಗೆಲ್ಲಾ ಪರಿಣಾಮ ಬೀರುತ್ತೆ ಎನ್ನುವುದನಿಲ್ಲಿ ಸೂಕ್ಷ್ಮವಾಗಿ ಹೇಳಿದ್ದೇನೆ. ಇಲ್ಲಿ ನೈಜತೆಗೆ, ವಾಸ್ತವಕ್ಕೆ ಹತ್ತಿರ ಇರುವಂತಹ ಅಂಶಗಳಿವೆ. ಇನ್ನುಳಿದಂತೆ ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿವೆ. ಮೊದಲ ಪ್ರಯತ್ನಕ್ಕೆ ನಿಮ್ಮ ಸಹಕಾರ ಇರಲಿ’ ಅಂದರು ಮಧುಸೂದನ್‌.

ನಾಯಕ ರೇಣುಕ್‌ ಅವರಿಗೆ ಇದು ಮೊದಲ ಚಿತ್ರ. “”ಅನುರೂಪ’ ಧಾರಾವಾಹಿಯಲ್ಲಿ ನಟಿಸುವಾಗಲೇ ನಿರ್ದೇಶಕರು, ಸಿನಿಮಾ ಪ್ಲಾನ್‌ ಮಾಡಿದ್ದರು. ಧಾರಾವಾಹಿ ಯಶಸ್ಸು ತಂದುಕೊಟ್ಟಿತ್ತು. ಹಾಗಾಗಿ, ಮತ್ತೆ ಇಬ್ಬರ ಕಾಂಬಿನೇಷನ್‌ನಲ್ಲಿ ಚಿತ್ರ ಮಾಡಿದ್ದೇವೆ. ನಾನಿಲ್ಲಿ ಮಿಡ್ಲ್ಕ್ಲಾಸ್‌ ಹುಡುಗನಾಗಿ ನಟಿಸಿದ್ದೇನೆ. ಮಿಡ್ಲ್ಕ್ಲಾಸ್‌ ಹುಡುಗನ ಲೈಫ‌ಲ್ಲಿ ಹುಡುಗಿಯೊಬ್ಬಳು ಎಂಟ್ರಿಯಾಗಿ, ಲವ್‌ ಮಾಡಿ, ಅರ್ಧಕ್ಕೆ ಲವ್‌ ಬ್ರೇಕ್‌ಅಪ್‌ ಆದಾಗ, ಅವನ ಲೈಫ್ಗೆ ಎಷ್ಟು ಪೆಟ್ಟಾಗುತ್ತೆ ಎಂಬುದೇ ಸಿನಿಮಾ’ ಅಂದರು ರೇಣುಕ್‌.

ನಾಯಕಿ ಅಮಿತಾ ಕುಲಾಲ್‌ಗ‌ೂ ಇದು ಮೊದಲ ಚಿತ್ರವಂತೆ. ಅವರಿಗೆ ಇದು ಮೊದಲ ಚಿತ್ರ. ಇಲ್ಲಿ ಹತ್ತು ಸಿನಿಮಾಗಳಿಗಾಗುವಷ್ಟು ಅನುಭವ ಆಗಿದೆ. ನನ್ನ ಸಿನಿಮಾ ಕೆರಿಯರ್‌ಗೆ ಇದೊಂದು ಅತ್ಯುತ್ತಮ ಸಿನಿಮಾ ಆಗಲಿದೆ’ ಅಂದರು ಅಮಿತಾ ಕುಲಾಲ್‌.

ಆಡಿಯೋ ಸಿಡಿ ಬಿಡುಗಡೆ ಮಾಡಿದ ಹಂಸಲೇಖ, “ಮುಂದಿನ ಆ ಕೆಲವು ಸಕ್ಸಸ್‌ ಸಿನಿಮಾಗಳಲ್ಲಿ “ಆ ಎರಡು ವರ್ಷಗಳು’ ಚಿತ್ರವೂ ಇರಲಿ. ಈಗ ಚಂದನವನ ಸಮೃದ್ಧಿಯಾಗಿದೆ. ಒಳ್ಳೆಯ ಚಿತ್ರಗಳು ಬರುತ್ತಿವೆ. ಹೊಸಬರ ಜಾಣತನ ಇಲ್ಲಿ ವಕೌìಟ್‌ ಆಗುತ್ತಿದೆ. ಕೆಲಸ ಮಾಡಿದ ಎಲ್ಲರಿಗೂ ಈ ಚಿತ್ರ ಯಶಸ್ಸು ಕೊಡಲಿ’ ಎಂದು ಶುಭ ಹಾರೈಸಿದರು ಹಂಸಲೇಖ.
“ನನ್ನ ಆ 40 ವರ್ಷಗಳ ಸಿನಿಮಾ ಜರ್ನಿಯಲ್ಲಿ “ಈ ಎರಡು ವರ್ಷಗಳು’ ಬಹಳ ಮುಖ್ಯ ಎಂದು ಮಾತಿಗಿಳಿದರು ಹಿರಿಯ ನಟ ರಾಮಕೃಷ್ಣ. “ನನಗಿಲ್ಲಿ ಮಜವಾದ ಪಾತ್ರವಿದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ಒಳ್ಳೆಯ ತಂಡದ ಜತೆ ಕೆಲಸ ಮಾಡಿದ್ದು ಖುಷಿಕೊಟ್ಟಿದೆ ಅಂದರು ಅವರು.

ಅನೂಪ್‌ ಸೀಳಿನ್‌ ಇಲ್ಲಿ ಐದು ಹಾಡುಗಳನ್ನು ಕೊಟ್ಟಿದ್ದಾರಂತೆ. ಸಾಕಷ್ಟು ಕೋಪ ಮಾಡಿಕೊಂಡರೂ, ನಿರ್ದೇಶಕರು ತಾಳ್ಮೆಯಿಂದಲೇ ಒಳ್ಳೇ ಹಾಡುಗಳನ್ನು ತೆಗೆಸಿದ್ದಾರೆ. ಗೆಳೆಯ ಅರಸು ಅಂತಾರೆ ಅವರ ಸಾಹಿತ್ಯ ಕಥೆಗೆ ಪೂರಕವಾಗಿದೆ ಅನ್ನುತ್ತಾರೆ ಅನೂಪ್‌.

ಗೀತರಚನೆಕಾರ ಅರಸು ಅಂತಾರೆ, ಕ್ಯಾಮೆರಾಮೆನ್‌ ರವಿಕಿಶೋರ್‌, ಸಂಕಲನಕಾರ ಅಕ್ಷಯ್‌ ಇತರರು ಮಾತಾಡುವ ಹೊತ್ತಿಗೆ ಆಡಿಯೋ ಸಿಡಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೂ ತೆರೆಬಿತ್ತು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.