ವಿಶಾಲ ಮನಸ್ಸು! ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳಿಗೆ ಸಂಪೂರ್ಣ ಬೆಂಬಲ


Team Udayavani, Jul 7, 2017, 3:50 AM IST

Vishala-manassu.jpg

ಕೆಲವು ವರ್ಷಗಳ ಹಿಂದೆ “ಬಣ್ಣ ಬಣ್ಣದ ಲೋಕ’ ಎಂಬ ಚಿತ್ರದಲ್ಲಿ ಹರ್ಷ ಮತ್ತು ರಘು ಎಂಬ ಹುಡುಗರು ಒಟ್ಟಿಗೆ ನಟಿಸುತ್ತಿದ್ದರಂತೆ. ಚಿತ್ರ ಮುಗಿಯುವ ಹೊತ್ತಿಗೆ, ರಘು ಜೀವನದಲ್ಲೇನೇನೋ ಘಟನೆಗಳಾಗಿ, “ಬಣ್ಣ ಬಣ್ಣದ ಬದುಕ’ನ್ನು ನೋಡುವುದಕ್ಕೆ ಕಣ್ಣೇ ಇಲ್ಲದಂತಾಯಿತಂತೆ. ಆ ಸಂದರ್ಭದಲ್ಲಿ, ರಘು ಜೀವನ ಸಿನಿಮಾ ಆಗಬಹುದು ಮತ್ತು ಆ ಪಾತ್ರದಲ್ಲಿ ತಾನು ನಟಿಸಬಹುದು ಎಂದು ಹರ್ಷಗೆ ಗೊತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ಈಗ ಅದಾಗಿದೆ.

ಕೆಲವು ವರ್ಷಗಳ ಹಿಂದೆ ಪ್ರೀತಿಸಿದ ತಪ್ಪಿಗೆ, ಹುಡುಗಿಯ ಕಡೆಯವರು ಹುಡುಗನ ಕಣ್ಣು ಕಿತ್ತ ಘಟನೆ ನಡೆದಿತ್ತು. ಹಾಗೆ ಕಣ್ಣು ಕಿತ್ತು ಬೇರ್ಯಾರದ್ದೂ ಅಲ್ಲ, “ಬಣ್ಣ ಬಣ್ಣದ ಬದುಕು’ ಅಲಿಯಾಸ್‌ ಜಿಮ್‌ ರಘು ಅವರದ್ದು. ಈಗ ಅದೇ ರಘುವಿನ ಲವ್‌ಸ್ಟೋರಿ, “ರಘುವೀರ’ ಹೆಸರಿನಲ್ಲಿ ಚಿತ್ರವಾಗಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಇತ್ತೀಚೆಗೆ ಚಿತ್ರದ ಹಾಡುಗಳು ಸಹ ಬಿಡುಗಡೆಯಾಗಿದೆ. ಈ ಹಾಡುಗಳನ್ನು ಬಿಡುಗಡೆ ಮಾಡಿದು ತಮಿಳು ನಟ ವಿಶಾಲ್‌. ಟೌನ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಚೆನ್ನೈನಿಂದ ವಿಶಾಲ್‌ ಬಂದಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ. ಗೋವಿಂದು ಅವರ ಜೊತೆಗೆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಶಾಲ್‌, “ಕರ್ನಾಟಕದಲ್ಲಿ ತಮಿಳು ಚಿತ್ರಗಳಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ. ಅದೇ ರೀತಿ ತಮಿಳುನಾಡಿನಲ್ಲೂ ಕನ್ನಡ ಚಿತ್ರಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಕನ್ನಡ ಚಿತ್ರಗಳಿಗೆ ಪ್ರದರ್ಶನ ವ್ಯವಸ್ಥೆ ಮಾಡುವುದು ನಮ್ಮ ಜವಾಬ್ದಾರಿ. ಇದನ್ನು ತಮಿಳು ಚಿತ್ರಗಳ ನಿರ್ಮಾಪಕರ ಸಂಘದ ಅಧ್ಯಕ್ಷನಾಗಿ ಹೇಳುತ್ತಿಲ್ಲ, ಕನ್ನಡ ಚಿತ್ರಗಳ ಅಭಿಮಾನಿಯಾಗಿ ಹೇಳುತ್ತಿದ್ದೇನೆ’ ಎಂದು ವಿಶಾಲ್‌ ಹೇಳಿದರು.

“ರಘುವೀರ’ ಚಿತ್ರವನ್ನು ದೇನು ಅಚ್ಚಪ್ಪ ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಕೆಂಪ’ ಮುಂತಾದ ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ದೇನು, ಈ ಚಿತ್ರವನ್ನು ನಿರ್ಮಿಸುತ್ತಿರುವುದಷ್ಟೇ, ಚಿತ್ರದಲ್ಲಿ ನಾಯಕಿಯಾಗಿಯೂ ನಟಿಸುತ್ತಿದ್ದಾರೆ. ಹರ್ಷ ನಾಯಕನಾಗಿ ನಟಿಸಿದರೆ, ಸ್ವಾಮಿನಾಥನ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನೈಜ ಘಟನೆಗೆ ಚಿತ್ರಕಥೆ ಬರೆಯುವುದರ ಜೊತೆಗೆ ಸೂರ್ಯ ಸತೀಶ್‌ ನಿರ್ದೇಶನವನ್ನೂ ಮಾಡಿದ್ದಾರೆ. ಇನ್ನು ಲಯ ಕೋಕಿಲ ಚಿತ್ರಕ್ಕೆ ಸಂಗೀತವನ್ನು ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.