![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಹಗ್ಗ ಜಗ್ಗಾಟ ಶುರು
ನಿಗೂಢ ಸಾವಿನ ಬೆನ್ನಟ್ಟಿ...
Team Udayavani, Jan 10, 2020, 4:33 AM IST
![25](https://www.udayavani.com/wp-content/uploads/2020/01/25-6-596x465.jpg)
ಕನ್ನಡ ಚಿತ್ರರಂಗದಲ್ಲಿ ಈಗ ಚಿತ್ರ-ವಿಚಿತ್ರ ಶೀರ್ಷಿಕೆಗಳ ಸರದಿ. ಅದರಲ್ಲೂ ಚಿತ್ರರಂಗಕ್ಕೆ ಬರುವ ಹೊಸಬರಂತೂ ಹೊಸ ಬಗೆಯ ಟೈಟಲ್ಗಳ ಮೂಲಕ ಗಮನ ಸೆಳೆಯಲು ಮುಂದಾಗಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ “ಹಗ್ಗ’. ಹೀಗೊಂದು ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಈ ಹಿಂದೆ “ಜ್ಞಾನಂ’ ಸಿನಿಮಾ ನಿರ್ಮಾಣ ಮಾಡಿದ್ದ ವಸಂತ ಸಿನಿಕ್ರಿಯೇಶನ್ಸ್ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಹಿಂದೆ ಕಿರುಚಿತ್ರ ಮಾಡಿ, ಮೆಚ್ಚುಗೆ ಪಡೆದಿದ್ದ ಅವಿನಾಶ್ “ಹಗ್ಗ’ ಮೂಲಕ ನಿರ್ದೇಶಕರಾಗಿದ್ದಾರೆ. ನಿರ್ಮಾಪಕರಲ್ಲೊಬ್ಬರಾದ ವೇಣು ಭಾರಧ್ವಾಜ್ ಈ ಚಿತ್ರದ ಹೀರೋ.
ಕಾಲ್ಪನಿಕ ಹಳ್ಳಿಯೊಂದರಲ್ಲಿ ನಡೆಯುವ ಸಮಸ್ಯೆಯ ಸುತ್ತ ಈ ಸಿನಿಮಾ ಸಾಗುತ್ತದೆಯಂತೆ. ನಿಗೂಢವಾಗಿ ಸಾವಿಗೀಡಾಗುವ ಹಾಗೂ ಅನೇಕ ಸಮಸ್ಯೆಗಳಿರುವ ಊರಿಗೆ ನಾಯಕನ ಎಂಟ್ರಿಕೊಡುತ್ತಾನೆ. ಈ ನಡುವೆಯೇ ಒಂದು ಲವ್ಸ್ಟೋರಿ. ಜೊತೆಗೆ ಆ ಊರಿನ ಸಮಸ್ಯೆಯನ್ನು ನಾಯಕ ಹೇಗೆ ಬಗೆಹರಿಸುತ್ತಾನೆ. ಈ ವೇಳೆ ಆತ ಏನೇನೂ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂಬ ಅಂಶದೊಂದಿಗೆ “ಹಗ್ಗ’ ಚಿತ್ರ ಸಾಗುತ್ತದೆ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್, ಕಾಮಿಡಿ ಚಿತ್ರವಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ನಿರ್ದೇಶಕರದು. ಚಿತ್ರದಲ್ಲಿ ನಾಯಕ ವೇಣು ಗೌಡರ ಮಗನಾಗಿ ಕಾಣಿಸಿಕೊಂಡರೆ ನಾಯಕಿ ಪ್ರಿಯಾಂಕಾ ಅರೋರ ವರದಿಗಾರ್ತಿಯಾಗಿ ನಟಿಸಿದ್ದಾರೆ. ತಬಲ ನಾಣಿ ನಾಯಕನ ಮಾವನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿಕ್ಕಮಗಳೂರು ದಟ್ಟ ಕಾಡುಗಳು, ತೀರ್ಥಹಳ್ಳಿ, ಮೈಸೂರು ಮತ್ತು ಬೆಂಗಳೂರು ಸುತ್ತಮುತ್ತ 45 ದಿನಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂಬುದು ಚಿತ್ರತಂಡದ ಮಾತು. ಉಳಿದಂತೆ ಸಿಂಬ, ನಿಶಾಂತ್, ವಂದನಾ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಪ್ರಸನ್ನ ಅವರ ಸಂಗೀತ, ಅವಿನಾಶ್ ಛಾಯಾಗ್ರಹಣ, ಬಾಲ ಸಂಕಲನ, ಮನೋಹರ್ ಸಂಭಾಷಣೆ, ಅಲ್ಟಿಮೇಟ್ ಶಿವು ಸಾಹಸವಿದೆ. ಚಿತ್ರವನ್ನು ವಸಂತ್ ಸಿನಿಕ್ರಿಯೇಶನ್ಸ್ ನಡಿ ರಾಜ್ ಭಾರಧ್ವಾಜ್ ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.