ಚೀಟಿಂಗ್‌ ಸ್ಟೋರಿ


Team Udayavani, Jun 1, 2018, 7:11 PM IST

su-4.jpg

ಒಂದೊಂದು ಭಾಗದವರು ಸೇರಿಕೊಂಡು ಸಿನಿಮಾ ಮಾಡುವ ಮೂಲಕ ತಮ್ಮ ಊರಿನ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿರುವುದು ಹಿಂದಿನಿಂದಲೂ ನಡೆಯುತ್ತಾ ಬಂದಿದೆ. ಹುಬ್ಬಳ್ಳಿ ಕಡೆಯವರು ಸಿನಿಮಾ ಮಾಡಿದರೆ, ಆ ಕಡೆಯವರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ, ಕರಾವಳಿಯವರು ಮಾಡಿದರೆ ಚಿತ್ರದಲ್ಲಿ ಕರಾವಳಿ ಮೂಲದ ಕಲಾವಿದರು ಹೆಚ್ಚಿರುತ್ತಾರೆ. ಗಾಂಧಿನಗರಕ್ಕೆ ಬರುವ ಹೊಸಬರು ಈ ತರಹ ಸ್ಥಳೀಯ ತಂಡದೊಂದಿಗೆ ಸಿನಿಮಾ ಯಾನ ಆರಂಭಿಸುವುದು ಹೊಸದೇನಲ್ಲ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಮಿಸ್ಟರ್‌ ಚೀಟರ್‌ ರಾಮಾಚಾರಿ’. ರಾಯಚೂರಿನ ತಂಡವೊಂದು ಸೇರಿಕೊಂಡು ಈ ಸಿನಿಮಾ ಮಾಡಿದೆ. ರಾಯಚೂರಿನ ರಾಮಾಚಾರಿ ಎನ್ನುವವರು ಈ ಸಿನಿಮಾದ ನಿರ್ದೇಶಕರು. ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. ಪ್ರವೀಣಾ ರವೀಂದ್ರ ಕುಲಕರ್ಣಿ ಈ ಸಿನಿಮಾದ ನಿರ್ಮಾಪಕರು. ಇವರು ಕೂಡಾ ರಾಯಚೂರಿನವರು. 

ಆರಂಭದಲ್ಲಿ ಕಿರುಚಿತ್ರ ಮಾಡಲೆಂದು ಹೊರಟ ತಂಡ ಮುಂದೆ ಕಿರುಚಿತ್ರವನ್ನು ಹಿರಿದಾಗಿಸಿದೆ. ಅದರ ಪರಿಣಾಮ “ಮಿಸ್ಟರ್‌ ಚೀಟರ್‌ ರಾಮಾಚಾರಿ’ ಸಿನಿಮಾವಾಗಿದೆ. ನಿರ್ಮಾಪಕಿ ಪ್ರವೀಣಾ ಅವರ ಬಳಿ ನಿರ್ದೇಶಕ ರಾಮಾಚಾರಿ, ಕಥೆ ಹೇಳಿ, ಕಿರುಚಿತ್ರ ನಿರ್ಮಿಸುವಂತೆ ಕೇಳಿಕೊಂಡರಂತೆ. ಅದರಂತೆ ಆರಂಭವಾದ ಕಿರುಚಿತ್ರ ಮುಂದೆ ಕಥೆ ಇಷ್ಟವಾಗಿ, ಬೆಳೆಯುತ್ತಾ ಹೋಗಿ ಸಿನಿಮಾವಾಯಿತಂತೆ. “ರಾಮಾಚಾರಿಯವರು ಮಾಡಿಕೊಂಡಿರುವ ಕಥೆ ತುಂಬಾ ಚೆನ್ನಾಗಿದೆ. ಆರಂಭದಲ್ಲಿ ಕಿರುಚಿತ್ರ ಮಾಡಲು ಹೊರಟೆವು. ಆದರೆ ಕಥೆ ಚೆನ್ನಾಗಿದೆ ಅನಿಸಿ, ಸಿನಿಮಾ ಮಾಡಿದ್ದೇವೆ. ಸ್ಥಳೀಯ ಕಲಾವಿದರನ್ನೇ ಬಳಸಿಕೊಂಡು ಈ ಸಿನಿಮಾ ಮಾಡಿದ್ದೇವೆ. ಈ ಮೂಲಕ ನಮ್ಮೂರಿನ ಪ್ರತಿಭೆಗಳಿಗೆ ಅವಕಾಶ ಕೊಟ್ಟ ಖುಷಿ ಇದೆ’ ಎನ್ನುವುದು ಪ್ರವೀಣಾ ಅವರ ಮಾತು.

ನಿರ್ದೇಶಕ ರಾಮಾಚಾರಿಯವರಿಗೆ ಇದು ಮೊದಲ ಸಿನಿಮಾ. ಈ ಹಿಂದೆ ಕಿರುಚಿತ್ರ ಮಾಡಿದ ಅನುಭವಿದೆ. “ಮಿಸ್ಟರ್‌ ಚೀಟರ್‌ ರಾಮಾಚಾರಿ’ಯಲ್ಲಿ ನೋಟ್‌ಬ್ಯಾನ್‌ ಸಂದರ್ಭ ಜನ ಎದುರಿಸಿದ ತೊಂದರೆ ಸೇರಿದಂತೆ ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ವಿಚಾರಗಳನ್ನಿಟ್ಟುಕೊಂಡು ಸಿನಿಮಾ ಮಾಡಲಾಗಿದೆಯಂತೆ. ಪ್ರತಿಯೊಬ್ಬರು ಕೂಡಾ ಒಂದಲ್ಲ ಒಂದು ರೀತಿಯಲ್ಲಿ ಮೋಸಗಾರರೇ ಎಂಬ ಅಂಶವನ್ನು ಸಿನಿಮಾದಲ್ಲಿ ಹೇಳಿದ್ದಾರಂತೆ ರಾಮಾಚಾರಿ. ಈ ಚಿತ್ರದ ಕ್ಲೈಮ್ಯಾಕ್ಸ್‌ ಅನ್ನು ಪ್ರೇಕ್ಷಕನೇ ಬರೆಯುತ್ತಾನೆಂಬುದು ರಾಮಾಚಾರಿ ಮಾತು. ಹಾಗಂತ ಚಿತ್ರದಲ್ಲಿ ಕ್ಲೈಮ್ಯಾಕ್ಸ್‌ ಇಲ್ಲವೆಂದಲ್ಲ. ಆದರೆ ಪ್ರೇಕ್ಷಕನ ನಿರ್ಧಾರ, ಆಲೋಚನೆಗೆ ತಕ್ಕಂತೆ ಕ್ಲೈಮ್ಯಾಕ್ಸ್‌ ನೋಡುತ್ತಾನಂತೆ. “ಇಲ್ಲಿ ಹೀರೋ-ಹೀರೋಯಿನ್‌ ಎಂದಿಲ್ಲ. ಪ್ರತಿ ಪಾತ್ರಗಳು ಪ್ರಮುಖವಾಗಿದ್ದು, ಕಥೆಯನ್ನು ಮುನ್ನಡೆಸುತ್ತವೆ’ ಎನ್ನಲು ರಾಮಾಚಾರಿ ಮರೆಯಲಿಲ್ಲ. ಚಿತ್ರದಲ್ಲಿ ರಾಯಚೂರು ಕಲಾವಿದ ರಾಮಾಂಜನೇಯ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಅತ್ತ ಕಡೆ ಹೀರೋ ಅಲ್ಲದ ಇತ್ತ ಕಡೆ ವಿಲನ್‌ ಆಗದಂತಹ ಪಾತ್ರ ಅವರಿಗೆ ಸಿಕ್ಕಿದೆಯಂತೆ. ಚಿತ್ರದಲ್ಲಿ ರಾಶಿ ಮೇಘನಾ ಹಾಗೂ ಮೇಘನಾ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ಪ್ರದ್ಯೋತ್ತನ್‌ ಸಂಗೀತವಿದೆ. ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.