ಕಲರ್‌ಫ‌ುಲ್‌ ಕೆಮಿಸ್ಟ್ರಿ


Team Udayavani, Feb 15, 2019, 12:30 AM IST

24.jpg

“ಅಪ್ಪ, ಅಮ್ಮ, ಮಗ ಮತ್ತು ಸೊಸೆ…’ ಈ ನಾಲ್ವರ ನಡುವಿನ ಕಥೆಯೇ “ಕೆಮಿಸ್ಟ್ರಿ ಆಫ್ ಕರಿಯಪ್ಪ’.– ಹೀಗೆ ಹೇಳುತ್ತಲೇ ಮಾತಿಗಿಳಿದರು ನಟ ತಬಲನಾಣಿ. “ಒಂದು ಸಂದೇಶದ ಜೊತೆ ಮನರಂಜನೆ ಮೂಲಕ ಒಂದೊಳ್ಳೆಯ ಫ್ಯಾಮಿಲಿ ಕಥೆ ಹೇಳುತ್ತಿದ್ದೇವೆ. ಇದು ಮಂಡ್ಯ ಜಿಲ್ಲೆಯಲ್ಲಿ ನಡೆದಂತಹ ಒಂದು ನೈಜ ಘಟನೆ ಇಟ್ಟುಕೊಂಡು ಮಾಡಿರುವ ಚಿತ್ರ. ಮನುಷ್ಯನಿಗೆ ಸಮಸ್ಯೆಗಳು ಸಹಜ. ಅವೆಲ್ಲವನ್ನು ಧೈರ್ಯವಾಗಿ ಎದುರಿಸಿದರೆ ಹೇಗೆ ಬದುಕಲು ಸಾಧ್ಯವಿದೆ ಎಂಬುದನ್ನು ಹಾಸ್ಯಮಯವಾಗಿಯೇ ಇಲ್ಲಿ ಹೇಳಲಾಗಿದೆ. ಇಲ್ಲಿ ಮುಖ್ಯವಾದ ಅಂಶವೆಂದರೆ, ಮಾತೇ ಬಂಡವಾಳ. ಒಂದು ಚಿಕ್ಕ ಮನೆ, ಸಣ್ಣ ಕಾರು ಜೊತೆಗೆ ಪುಟ್ಟ ಕುಟುಂಬದ ಕಥೆ ಮತ್ತು ವ್ಯಥೆ ಇಲ್ಲಿ ಹೈಲೈಟ್‌. ನಾನಿಲ್ಲಿ ಒಬ್ಬ ಮಗನಿಗೆ ಎಷ್ಟು ಸಹಾಯ ಮಾಡಲು ಸಾಧ್ಯವೋ ಅದನ್ನು ಮಾಡುವಂತಹ ಪ್ರೀತಿಯ ಅಪ್ಪನಾಗಿ ನಟಿಸಿದ್ದೇನೆ. ಇಡೀ ಚಿತ್ರತಂಡದ ಶ್ರಮದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಚಿತ್ರ ನೋಡಿದವರಿಗೆ ಖಂಡಿತವಾಗಿಯೂ ನಗು ವಕೌìಟ್‌ ಆಗುತ್ತೆ’ ಅಂದರು ತಬಲನಾಣಿ.

ನಿರ್ದೇಶಕ ಕುಮಾರ್‌ ಅವರಿಗೆ ಈ ಚಿತ್ರ ಯಶಸ್ಸು ತಂದುಕೊಡುತ್ತದೆ ಎಂಬ ವಿಶ್ವಾಸ. ಕಾರಣ, ಈಗಾಗಲೇ ಚಿತ್ರದ ಹಾಡು, ಟ್ರೇಲರ್‌ ಸಾಕಷ್ಟು ಮೆಚ್ಚುಗೆ ಪಡೆದಿರುವುದು. “ಮಂಡ್ಯ ಜಿಲ್ಲೆಯಲ್ಲಿ ನಡೆದ ಘಟನೆ ಬಗ್ಗೆ ಗೆಳೆಯರೊಬ್ಬರು ವಿವರಿಸಿದ್ದರು. ಆ ಘಟನೆ ಇಟ್ಟುಕೊಂಡು ಚಿತ್ರವನ್ನೇಕೆ ಮಾಡಬಾರದು ಎಂದೆನಿಸಿ ಈ ಚಿತ್ರ ಮಾಡಿದ್ದೇನೆ. ಇದೊಂದು ಫ್ಯಾಮಿಲಿ ಕಥೆ. ಮಗನಲ್ಲಿರುವ ಒಂದು ವೀಕ್‌ನೆಸ್‌ ಚಿತ್ರದ ಹೈಲೈಟ್‌. ತಂದೆಗೆ ತನ್ನ ಸಂಸಾರವೇ ಸರ್ವಸ್ವ. ಆದರೆ, ಆ ಸಂಸಾರದಲ್ಲೊಂದು ರಿಸ್ಕ್ ಶುರುವಾಗುತ್ತೆ. ಕರಿಯಪ್ಪ ಆ ಗಂಭೀರ ವಿಷಯವನ್ನು ಹೇಗೆ ಬಗೆಹರಿಸುತ್ತಾನೆ ಎಂಬುದನ್ನೇ ಇಲ್ಲಿ ಹಾಸ್ಯಮಯ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಒಂದು ಸರಳ ಸುಂದರ ಸಾಂಸಾರಿಕ ಚಿತ್ರ ಮಾಡಿದ್ದು ಖುಷಿ ಕೊಟ್ಟಿದೆ’ ಎಂಬುದು ನಿರ್ದೇಶಕ ಕುಮಾರ್‌ ಅವರ ಮಾತು.

ನಿರ್ಮಾಪಕ ಡಾ.ಡಿ.ಎಸ್‌.ಮಂಜುನಾಥ್‌ ಅವರಿಗೆ ಒಳ್ಳೆಯ ಚಿತ್ರ ಮಾಡಿರುವ ಸಂತಸವಿದೆ. ಸೆನ್ಸಾರ್‌ ಯಾವುದೇ ಕಟ್‌, ಮ್ಯೂಟ್‌ ಇಲ್ಲದೆ “ಯು/ಎ’ ಪ್ರಮಾಣ ಪತ್ರ ನೀಡಿದೆ. ಇಲ್ಲಿ ಸಂದೇಶದ ಜೊತೆ ಹಾಸ್ಯವೂ ಮೇಳೈಸಿದೆ. ಕನ್ನಡದಲ್ಲಿ ನೈಜ ಘಟನೆ ಸಿನಿಮಾ ಬಂದಿದ್ದರೂ, ಅವುಗಳಲ್ಲಿ ಮನರಂಜನೆ ಹೆಚ್ಚಾಗಿ ಕಂಡಿಲ್ಲ ಎನ್ನುವವರಿಗೆ ಇಲ್ಲಿ ಮನರಂಜನೆ ಮುಖ್ಯವಾಗಿದೆ. ಸಿನಿಮಾ ನೋಡಿ ಹೊರಬಂದವರಿಗೆ ಹೊಸ ಫೀಲ್‌ ಸಿಗಲಿದೆ. ಕನ್ನಡ ಚಿತ್ರಗಳನ್ನು ಮಾಡುವುದೇ ಕಷ್ಟ. ಅದರಲ್ಲೂ ಬಿಡುಗಡೆ ಮಾಡುವುದು ಇನ್ನೂ ಕಷ್ಟ. ಆದರೆ, ವಿತರಕ ವಿಜಯ್‌ ಅವರು ಸಿನಿಮಾ ನೋಡಿ, ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನಿರ್ದೇಶಕರು ಹೇಳಿದ ಬಜೆಟ್‌ ಒಳಗೆ ಚಿತ್ರ ಮಾಡಿ ಮುಗಿಸಿದ್ದಾರೆ. ನಿಜ ಹೇಳುವುದಾದರೆ, ನಾನೀಗ ಲಾಭದಲ್ಲಿದ್ದೇನೆ’ ಅಂದರು ಮಂಜುನಾಥ್‌.

ವಿತರಕ ವಿಜಯ್‌ ಅವರು, ಭೂಮಿಕಾ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಿದ್ದಾರೆ. ಮಲ್ಟಿಪ್ಲೆಕ್ಸ್‌ ಸೇರಿದಂತೆ ರಾಜ್ಯದೆಲ್ಲೆಡೆ ಸುಮಾರು 60 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಕುರಿತು ಹೇಳಿಕೊಂಡರು.

ನಾಯಕಿ ಸಂಜನಾಗೆ ಇದು ಮೊದಲ ಚಿತ್ರವಂತೆ. ಅವರಿಲ್ಲಿ ಹಳ್ಳಿಯಿಂದ ಬಂದು ಹುಡುಗಿ ಪಾತ್ರ ನಿರ್ವಹಿಸಿದ್ದು, ಗಂಡನನ್ನೇ ಗಂಡಸು ಎಂಬ ಬಗ್ಗೆ ಗೊಂದಲ ಪಡುವಂತಹ ಪಾತ್ರ ಮಾಡಿದ್ದಾರಂತೆ. ಒಂದು ಸಮಸ್ಯೆ ಬಂದಾಗ, ಹೆಣ್ಣು ಹೇಗೆ ನಿರ್ಧಾರ ತೆಗೆದುಕೊಳ್ಳಬೇಕೆಂಬ ಸಂದೇಶ ಇಲ್ಲಿ ಪ್ರಧಾನ ಎಂಬುದು ಸಂಜನಾ ಮಾತು. ಅಪೂರ್ವ ಇಲ್ಲಿ ತಬಲನಾಣಿ ಅವರ ಜೋಡಿಯಾಗಿ ನಟಿಸಿದ ಬಗ್ಗೆ ಹೇಳಿಕೊಂಡರು. ನಾಯಕ ಚಂದನ್‌, ಹೆಚ್ಚೇನೂ ಮಾತನಾಡಲಿಲ್ಲ. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.