ಮಕ್ಕಳ ರಾಜ್ಯ


Team Udayavani, Aug 3, 2018, 6:00 AM IST

s-12.jpg

ಸಾಮಾನ್ಯವಾಗಿ ಮಕ್ಕಳ ಸಿನಿಮಾವೆಂದರೆ ಬರೋದು, ಹೋಗೋದು ಗೊತ್ತಾಗಲ್ಲ. ಪ್ರಚಾರದಿಂದಲೂ ಆ ಸಿನಿಮಾಗಳು ದೂರವೇ ಇರುತ್ತವೆ. ಆದರೆ, “ರಾಮರಾಜ್ಯ’ ಸಿನಿಮಾ ಮಾತ್ರ ಅದರಿಂದ ಭಿನ್ನ. ಎಲ್ಲಾ ಕಮರ್ಷಿಯಲ್‌ ಸಿನಿಮಾಗಳಂತೆ ಚಿತ್ರವನ್ನು ಪ್ರಚಾರ ಮಾಡಲು ಹಾಗೂ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಅದರ ಮೊದಲ ಅಂಗವಾಗಿ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ಈ ಚಿತ್ರವನ್ನು ನೀಲ್‌ ಕೆಂಗಾಪುರ ನಿರ್ದೇಶಿಸಿದ್ದು, ಆರ್‌.ಶಂಕರ್‌ ಗೌಡ ನಿರ್ಮಿಸಿದ್ದಾರೆ. ಈ ಚಿತ್ರ ಆಗಸ್ಟ್‌ 10 ರಂದು ಬಿಡುಗಡೆಯಾಗುತ್ತಿದೆ.

ಗಾಂಧೀಜಿಯವರ ರಾಮರಾಜ್ಯದ ಕನಸನ್ನು ನನಸು ಮಾಡಲು ಹೋರಾಡುವ ನಾಲ್ಕು ಮಕ್ಕಳ ಸುತ್ತ ಈ ಸಿನಿಮಾ ಸಾಗುತ್ತದೆ. ಅದೇ ಕಾರಣದಿಂದ ಈ ಚಿತ್ರಕ್ಕೆ “ಗಾಂಧಿ ತಾತನ ಕನಸು’ ಎಂಬ ಟ್ಯಾಗ್‌ಲೈನ್‌ ಕೂಡಾ ಇದೆ. ನಿರ್ದೇಶಕ ನೀಲ್‌ ಹೇಳುವಂತೆ, ಈ ಚಿತ್ರದಲ್ಲಿ ದೊಡ್ಡವರು ಕಲಿಯುವಂತಹ ಸಾಕಷ್ಟು ಅಂಶಗಳಿವೆಯಂತೆ. ಎಲ್ಲರಿಗೂ ಒಂದೇ ನ್ಯಾಯ ಎಂಬ ಕಾನ್ಸೆಪ್ಟ್ನಡಿ ಈ ಸಿನಿಮಾ ಸಾಗುತ್ತದೆಯಂತೆ. ಮಕ್ಕಳು ತಮ್ಮ ಕೆಲಸದಿಂದ ಹೇಗೆ ದೊಡ್ಡವರ ಕಣ್ಣು ತೆರೆಸುತ್ತಾರೆ ಎಂಬ ಅಂಶವೂ ಈ ಸಿನಿಮಾದಲ್ಲಿ ಪ್ರಮುಖವಾಗಿದೆಯಂತೆ. ಚಿತ್ರದಲ್ಲಿ ನಾಲ್ಕು ಮಕ್ಕಳು ಪ್ರಮುಖ ಪಾತ್ರ ಮಾಡಿದ್ದು, ಆ ಸಂದರ್ಭದಲ್ಲಿನ ಅನುಭವ, ಮಕ್ಕಳ ತುಂಟಾಟವನ್ನು ಹಂಚಿಕೊಂಡು ಖುಷಿಯಾದರು ನೀಲ್‌.  ಚಿತ್ರವನ್ನು ನಿರ್ಮಿಸುತ್ತಿರುವ ಶಂಕರೇಗೌಡ ಅವರಿಗೆ ಕಥೆ ತುಂಬಾನೇ ಇಷ್ಟವಾಯಿತಂತೆ. ಕಥೆಯೊಂದಿಗೆ ನಟ ಪ್ರೇಮ್‌ ಅವರ ಬಳಿ ಹೋಗಿ, “ನಿಮ್ಮ ಮಗ ಈ ಸಿನಿಮಾದಲ್ಲಿ ನಟಿಸಿದರೆ ಚೆನ್ನಾಗಿರುತ್ತದೆ’ ಎಂದಾಗ ಪ್ರೇಮ್‌ ಕಥೆ ಕೇಳಿ ಖುಷಿಯಿಂದ ಒಪ್ಪಿಕೊಂಡರಂತೆ. ಹಾಗಾಗಿ, ಪ್ರೇಮ್‌ ಪುತ್ರ ಏಕಾಂತ್‌ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾನೆ. ಇನ್ನು, ಮಕ್ಕಳ ಸಿನಿಮಾದ ಹಾಡಿಗೆ ಗ್ರಾಫಿಕ್‌ ಬಳಸೋದು ಕಡಿಮೆ. ಆದರೆ “ರಾಮರಾಜ್ಯ’ ಚಿತ್ರದ “ಓದು ಓದು …’ ಹಾಡು ಗ್ರಾಫಿಕ್‌ ಹಿನ್ನೆಲೆಯಲ್ಲಿ ಮೂಡಿಬಂದಿದೆ. ಈ ಹೆಗ್ಗಳಿಕೆ ನಿರ್ಮಾಪಕರಿಗಿದೆ. 

ಚಿತ್ರದಲ್ಲಿ ಅಶ್ವಿ‌ನಿ ಗೌಡ ಕೂಡಾ ನಟಿಸಿದ್ದಾರೆ. ಇಲ್ಲಿ ಅವರು ಗೃಹಿಣಿಯಾಗಿ ಕಾಣಿಸಿಕೊಂಡಿದ್ದು, ತುಂಬಾ ಖುಷಿಕೊಟ್ಟ ಪಾತ್ರವಂತೆ. ಚಿತ್ರದಲ್ಲಿ ನಟಿಸಿದ ಏಕಾಂತ್‌, ಹೇಮಂತ್‌, ಕಾರ್ತಿಕ್‌ ಹಾಗೂ ಶೋಯೆಭ್‌ ಕೂಡಾ ತಮ್ಮ ಖುಷಿ ಹಂಚಿಕೊಂಡರು. ಇನ್ನು, ನಟಿ ಸ್ವಾತಿ ಒಪ್ಪಿಕೊಂಡ ಮೊದಲ ಸಿನಿಮಾ ಇದಂತೆ. ಆದರೆ, ಮೊದಲು ಬಿಡುಗಡೆಯಾಗಿದ್ದು “ಎಡಕಲ್ಲು ಗುಡ್ಡದ ಮೇಲೆ’. 

ಚಿತ್ರಕ್ಕೆ ಎ.ಟಿ.ರವೀಶ್‌ ಸಂಗೀತ ನೀಡಿದ್ದು, ರೀರೆಕಾರ್ಡಿಂಗ್‌ ಮಾಡುವಾಗ ಸಿನಿಮಾ ನೋಡಿ ಖುಷಿಯಾಯಿತಂತೆ. ಇನ್ನು, ಮಗನ ಚಿತ್ರದ ಆಡಿಯೋ ಬಿಡುಗಡೆಗೆ ಅತಿಥಿಯಾಗಿ ಬಂದಿದ್ದ ಪ್ರೇಮ್‌ “ರಾಮರಾಜ್ಯ’ ತಂಡಕ್ಕೆ ಶುಭಕೋರಿದರು. “ಮಗ ಆತನ ಸ್ವ ಆಸಕ್ತಿಯಿಂದ ಸಿನಿಮಾದತ್ತ ವಾಲಿದ್ದಾನೆ. ಆತನನ್ನು ನಟನೆ, ಜಿಮ್ನಾಸ್ಟಿಕ್‌ ಸೇರಿದಂತೆ ಹಲವು ಕೆಟಗರಿಗಳಲ್ಲಿ ತರಬೇತಿಗೊಳಿಸಿರುವ ಚಾಮರಾಜ್‌ ಮಾಸ್ಟರ್‌ಗೆ ನಾನು ಥ್ಯಾಂಕ್ಸ್‌ ಹೇಳಲೇಬೇಕು’ ಎಂದರು.  ಉಳಿದಂತೆ ಯತಿರಾಜ್‌, ನಾಗೇಂದ್ರಪ್ರಸಾದ್‌, ಹನುಮಂತೇಗೌಡ ನಟಿಸಿದ್ದಾರೆ. 

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.