ಮಕ್ಕಳ ಕಮರ್ಷಿಯಲ್ ಸಿನ್ಮಾ

ಆರು ಭಾಷೆಗಳಲ್ಲಿ ಗಿರ್ಮಿಟ್‌

Team Udayavani, Nov 1, 2019, 5:21 AM IST

28

ಮಕ್ಕಳ ಸಿನಿಮಾ ಎಂದರೆ ಅನೇಕರಲ್ಲಿ ಒಂದು ಭಾವನೆ ಇದೆ. ಅದೇನೆಂದರೆ ಸಮಸ್ಯೆಯಲ್ಲಿ ಸಿಲುಕಿರುವ ಮಗುವೊಂದರ ಮನಕಲುಕುವ ಕಥಾನಕ ಎಂದು. ಅದಕ್ಕೆ ಪೂರಕವಾಗಿ ಒಂದಷ್ಟು ಅದೇ ಮಾದರಿಯ ಸಿನಿಮಾಗಳು ಕೂಡಾ ಬಂದಿವೆ. ಆದರೆ, ಈಗ ಬಿಡುಗಡೆಗೆ ಸಿದ್ಧವಾಗಿರುವ ಮಕ್ಕಳ ಸಿನಿಮಾ ಪಕ್ಕಾ ಕಮರ್ಷಿಯಲ್‌. ಸ್ಟಾರ್‌ ನಟರ ಕಮರ್ಷಿಯಲ್‌ ಸಿನಿಮಾಗಳು ಯಾವ ಮಟ್ಟಕ್ಕೆ ನಿಮಗೆ ಖುಷಿ, ಮನರಂಜನೆ ಕೊಡುತ್ತವೋ, ಆ ಮಟ್ಟಕ್ಕೆ ಈ ಚಿತ್ರ ಮನರಂಜನೆ ನೀಡಲಿದೆ. ಅಂದಹಾಗೆ, ಆ ಚಿತ್ರ “ಗಿರ್ಮಿಟ್‌’. ಸದ್ಯ ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗದ ಮೂಲಕ ಸದ್ದು ಮಾಡುತ್ತಿರುವ ಚಿತ್ರವಿದು. ರವಿ ಬಸ್ರೂರು ಈ ಚಿತ್ರದ ನಿರ್ದೇಶಕರು. ಎನ್‌.ಎಸ್‌.ರಾಜ್‌ಕುಮಾರ್‌ ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರ ನವೆಂಬರ್‌ 8 ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಅನ್ನು ಹಿರಿಯ ಪತ್ರಕರ್ತ ಎಚ್‌.ಆರ್‌.ರಂಗನಾಥ್‌ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದರು.

ನಿರ್ದೇಶಕ ರವಿಬಸ್ರೂರ್‌ ಅವರಿಗೆ ಹೊಸ ಪ್ರಯೋಗದ ಸಿನಿಮಾಗಳನ್ನು ಮಾಡುವುದರಲ್ಲಿ ಖುಷಿ ಇದೆಯಂತೆ. ಮೂಲತಃ ಸಂಗೀತ ನಿರ್ದೇಶಕರಾಗಿರುವ ರವಿ, ವರ್ಷಕ್ಕೆ ಎರಡು ತಿಂಗಳು ತಮ್ಮ ಹವ್ಯಾಸಕ್ಕಾಗಿ ಮೀಸಲಿಡುತ್ತಾರಂತೆ. ಆ ಹವ್ಯಾಸದಲ್ಲಿ ಮಾಡಿರುವ ಸಿನಿಮಾವೇ “ಗಿರ್ಮಿಟ್‌’. ಅಷ್ಟೊಂದು ಮಕ್ಕಳನ್ನು ಒಟ್ಟಿಗೆ ಸೇರಿಸಿ ಸಿನಿಮಾ ಮಾಡೋದು ಸುಲಭವದ ಕೆಲಸವಲ್ಲ ಎನ್ನುವ ರವಿ, ಪ್ರತಿ ಮಗು ಕೂಡಾ ಚೆನ್ನಾಗಿ ನಟಿಸಿದೆ ಎನ್ನಲುಯ ಮರೆಯುವುದಿಲ್ಲ. ರವಿ ಬಸ್ರೂರು ಅವರಿಗೆ ಈ ಸಿನಿಮಾ ಮಾಡಲು “ಡ್ರಾಮಾ ಜ್ಯೂನಿಯರ್’ ಸ್ಫೂರ್ತಿಯಂತೆ. ಅಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸುವುದನ್ನ ಕಂಡ ನನಗೆ ಇಂಥದ್ದೊಂದು ಪ್ರಯತ್ನ ಯಾಕೆ ಮಾಡಬಾರದು ಎನಿಸಿದ್ದರಿಂದ ಈ ಚಿತ್ರ ಮಾಡಲು ಮುಂದಾದರಂತೆ.”ಚಿತ್ರವನ್ನು ನೋಡಿದ ಯಶ್‌ ಮತ್ತು ರಾಧಿಕಾ ಪಂಡಿತ್‌ ಅವರು ನಮ್ಮ ಚಿತ್ರದ ನಾಯಕ, ನಾಯಕಿ ಪಾತ್ರಕ್ಕೆ ವಾಯ್ಸ ನೀಡಿದ್ದಾರೆ. ಅಷ್ಟೇ ಅಲ್ಲ, ಅಚ್ಯುತ್‌, ತಾರಾ, ರಂಗಾಯಣ ರಘು,ಸುಧಾ ಬೆಳವಾಡಿ, ಶಿವರಾಜ್‌ ಕೆ.ಆರ್‌. ಪೇಟೆ,ಸಾಧುಕೋಕಿಲ, ಜಹಾಂಗೀರ್‌, ಹೊನ್ನವಳ್ಳಿ ಕೃಷ್ಣ ಸೇರಿದಂತೆ ಹಲವು ಕಲಾವಿದರು ಮಕ್ಕಳ ನಟನೆಗೆ ಧ್ವನಿ ನೀಡಿದ್ದಾರೆ’ಎನ್ನುತ್ತಾರೆ ರವಿಬಸ್ರೂರ್‌.

ನಿರ್ಮಾಪಕ ಎನ್‌.ಎಸ್‌.ರಾಜ್‌ಕುಮಾರ್‌ ಅವರಿಗೆ ಈ ತರಹದ ಸಿನಿಮಾ ಮಾಡೋದರಲ್ಲಿ ಖುಷಿ ಇದೆಯಂತೆ. ಅದೇ ಕಾರಣದಿಂದ ಅವರು ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣಕ್ಕೆ ಮೊದಲ ಆದ್ಯತೆ ಕೊಡುತ್ತಿದ್ದಾರಂತೆ. ಸದ್ಯ ಬಿಡುಗಡೆಗೆ ರೆಡಿಯಾಗಿರುವ “ಗಿರ್ಮಿಟ್‌’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದರೊಂದಿಗೆ ಇಂಗ್ಲೀಷ್‌ ಭಾಷೆಯಲ್ಲೂ ಸಹ ತೆರೆಗೆ ತರಲು ತಯಾರಿ ನಡೆಸಲಾಗುತ್ತಿದೆ. ಇತ್ತೀಚೆಗೆ ಆರು ಭಾಷೆಗಳಲ್ಲೂ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆಶ್ಲೇಷ್‌ ರಾಜ್‌, ಶ್ಲಾಘಾ ಸಾಲಿಗ್ರಾಮ,ನಾಗರಾಜ್‌ ಜಪ್ತಿ, ಶ್ರಾವ್ಯಾ, ತನಿಶಾ ಕೋಣೆ, ಆದಿತ್ಯ, ಸಹನ ಬಸ್ರೂರ್‌, ಪವಿತ್ರ, ಜಯೇಂದ್ರ, ಸಿಂಚನ, ಮನೀಶ್‌ ಶೆಟ್ಟಿ, ಸಾರ್ಥಕ್‌ ಶೆಣೈ, ಮಹೇಂದ್ರ ಮತ್ತು ಪವನ್‌ ಬಸ್ರೂರ್‌ ನಟಿಸಿದ್ದಾರೆ. ಸಚಿನ್‌ ಬಸ್ರೂರ್‌ ಛಾಯಾಗ್ರಹಣವಿದೆ. ರವಿಬಸ್ರೂರ್‌ ಸಂಗೀತವಿದೆ.

ರವಿ ರೈ

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.