ಚಿನ್ನಾರಿ ಮುತ್ತನ ಆ್ಯಕ್ಷನ್‌ ಪ್ಯಾಕ್‌


Team Udayavani, Feb 22, 2019, 12:30 AM IST

31.jpg

ವಿಜಯ ರಾಘವೇಂದ್ರ ಸುಮಾರು ಎರಡು ವರ್ಷಗಳ ಹಿಂದೆ ಒಪ್ಪಿಕೊಂಡ ಚಿತ್ರವೊಂದು ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಚಿತ್ರದ ಫ‌ಸ್ಟ್‌ಲುಕ್‌ ಟೀಸರ್‌ ಬಿಡುಗಡೆಯಾಗಿದೆ. ಹೌದು, “ಯದಾ ಯದಾ ಹೀ ಧರ್ಮಸ್ಯ’ ಎಂಬ ಚಿತ್ರವೊಂದರಲ್ಲಿ ವಿಜಯರಾಘವೇಂದ್ರ ನಟಿಸಿದ್ದಾರೆ. ನೀವು ಈ ಹಿಂದೆ ನೋಡಿದ ವಿಜಯರಾಘವೇಂದ್ರ ಅವರಿಗೂ ಈ ಚಿತ್ರದಲ್ಲಿ ನೋಡುವ ವಿಜಯರಾಘವೇಂದ್ರ ಅವರಿಗೂ ಸಾಕಷ್ಟು ವ್ಯತ್ಯಾಸವಿದೆ. ಮೊದಲ ಬಾರಿಗೆ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಇಮೇಜ್‌ನಲ್ಲಿ ಕಾಣಿಸಿಕೊಂಡಿದ್ದಾರೆ ವಿಜಯ ರಾಘವೇಂದ್ರ. ಕನ್ನಡ, ತಮಿಳು ಮತ್ತು ತೆಲುಗಿನ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ, ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ವಿರಾಜ್‌, “ಯದಾ ಯದಾ ಹೀ ಧರ್ಮಸ್ಯ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ ಬಾರದಿದ್ದರೂ, ಕನ್ನಡದ ಮೇಲಿನ ಪ್ರೀತಿ, ಮತ್ತು ಇತ್ತೀಚೆಗೆ ಬರುತ್ತಿರುವ ಹೊಸತರದ ಕನ್ನಡ ಚಿತ್ರಗಳ ಮೇಲಿನ ಆಸಕ್ತಿಯಿಂದಾಗಿ ಇಂಧೋರ್‌ ಮೂಲದ ಅಕ್ಷರ ತಿವಾರಿ, “ಅಕ್ಷರ ಪ್ರೊಡಕ್ಷನ್ಸ್‌’ ಬ್ಯಾನರ್‌ನಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. 

ಚಿತ್ರದ ಬಗ್ಗೆ ಮಾತನಾಡುವ ವಿಜಯ ರಾಘವೇಂದ್ರ, “ನಿರ್ದೇಶಕರು ಬಂದು ಕಥೆ ಹೇಳಿದಾಗ, ಆರಂಭದಲ್ಲಿ ಬೇಡ ಅಂದಿದ್ದೆ. ಏಕೆಂದರೆ ನನಗೆ ಜೋರಾಗಿ ಕಿರುಚೋದು, ಅಬ್ಬರಿಸೋದು ಇಷ್ಟವಿಲ್ಲ. ಆದರೆ, ನಿರ್ದೇಶಕರು ಈ ಪಾತ್ರವನ್ನು ನೀವೇ ಮಾಡಬೇಕು ಎಂದರು. ಹಾಗಾಗಿ, ಮಾಡಿದೆ. ಈಗ ಫ‌ಸ್ಟ್‌ಲುಕ್‌ ಟೀಸರ್‌ ನೋಡಿದ ಮೇಲೆ ಸ್ವಲ್ಪ ಸಮಾಧಾನವಾಯಿತು’ ಎಂದರು. ಚಿತ್ರದಲ್ಲಿ ಸಾಯಿಕುಮಾರ್‌ ವಿಲನ್‌ ಆಗಿ ನಟಿಸಿದ್ದು, ಶ್ರಾವ್ಯಾ ನಾಯಕಿ. 

“ಇದೊಂದು  ಕಮರ್ಷಿಯಲ್‌ ಆ್ಯಕ್ಷನ್‌ ಎಂಟರ್‌ಟೈನ್ಮೆಂಟ್‌ ಚಿತ್ರ. ನೋಡುಗರಿಗೆ ಪ್ರತಿ ದೃಶ್ಯವೂ ಇಷ್ಟವಾಗುವಂತೆ ಚಿತ್ರವನ್ನು ಮಾಡಿದ್ದೇವೆ. ಚಿತ್ರದ ದೃಶ್ಯಗಳು ಅದ್ಧೂರಿಯಾಗಿ ಮೂಡಿಬಂದಿದ್ದು, ನೋಡುಗರಿಗೆ ಹೊಸ ಅನುಭವ ನೀಡಲಿದೆ. ಅಂದುಕೊಂಡಿರುವುದನ್ನು ತೆರೆಮೇಲೆ ತರಲು ಯಶಸ್ವಿಯಾಗಿದ್ದೇವೆ. ನಮ್ಮ ಪ್ರಯತ್ನ ಪ್ರೇಕ್ಷಕರಿಗೂ ಇಷ್ಟವಾಗುತ್ತದೆ. ಔಟ್‌ ಆ್ಯಂಡ್‌ ಔಟ್‌ ಮಾಸ್‌ ಎಂಟರ್‌ಟೈನ್ಮೆಂಟ್‌ ಸಿನಿಮಾವಾದ್ರೂ, ಇದರಲ್ಲಿ ಒಂದು ಸಂದೇಶವಿದೆ’ ಎನ್ನುವುದು ನಿರ್ದೇಶಕ ವಿರಾಜ್‌ ಮಾತು. ನಿರ್ಮಾಪಕ ಅಕ್ಷರ ತಿವಾರಿ ಹೆಚ್ಚೇನು ಮಾತನಾಡಲಿಲ್ಲ. ನಾಯಕಿ ಶ್ರಾವ್ಯಾ ಕೂಡಾ ತಮ್ಮ ಪಾತ್ರದ ಬಗ್ಗೆ ಖುಷಿ ವ್ಯಕ್ತಪಡಿಸಿದರು. ಚಿತ್ರದಲ್ಲಿ ಬುಲೆಟ್‌ ಕೂಡಾ ಓಡಿಸಿದ್ದಾರಂತೆ. ಪ್ರಥಮ್‌ ಕೂಡಾ ಚಿತ್ರದಲ್ಲಿ ನಟಿಸಿದ್ದಾರೆ. ಲಹರಿ ವೇಲು ಕೂಡಾ ಸಿನಿಮಾದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, ಇವತ್ತಿನ ಕಾಲಕ್ಕೆ ಈ ಟೈಟಲ್‌ ಹೊಂದಿಕೆಯಾಗುತ್ತದೆ ಎಂದರು. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಜ್ಯೂಡಾ ಸ್ಯಾಂಡಿ ಮತ್ತು ಪರಾಗ್‌ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. “ಯದಾ ಯದಾ ಹೀ ಧರ್ಮಸ್ಯ’ ಚಿತ್ರವನ್ನು ಬೆಂಗಳೂರು, ಮುರುಡೇಶ್ವರ, ಗೋಕರ್ಣ, ಸಕಲೇಶಪುರ ಸ್ತುಮುತ್ತ ಮತ್ತು ಗೋವಾ, ಕೇರಳದ ಸುಂದರ ತಾಣಗಳಲ್ಲಿ ಸುಮಾರು 65 ದಿನಗಳ ಕಾಲ ಚಿತ್ರೀಕರಿಸಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.