ಕಿನಾರೆಯಲ್ಲಿ ಕರಾವಳಿ ಬ್ಯೂಟಿ


Team Udayavani, Oct 6, 2017, 11:03 AM IST

06-7.jpg

“ಕಿನಾರೆ’ ಎಂಬ ಚಿತ್ರ ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದು ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರತಂಡ ಚಿತ್ರದ ಒಂದು ವಿಡಿಯೋ ಸಾಂಗ್‌ ಅನ್ನು ಬಿಡುಗಡೆ ಮಾಡಿದೆ.

ದೇವರಾಜ್‌ ಪೂಜಾರಿ ಈ ಚಿತ್ರದ ನಿರ್ದೇಶಕರು. ಅಷ್ಟಕ್ಕೂ “ಕಿನಾರೆ’ಯಲ್ಲಿ ಏನು ಹೇಳಲು ಹೊರಟಿದ್ದಾರೆಂದರೆ ಕರಾವಳಿ ಬ್ಯೂಟಿ ಎಂಬ ಉತ್ತರ ಬರುತ್ತದೆ. “ಸಾಮಾನ್ಯವಾಗಿ ಕರಾವಳಿ ಬ್ಯೂಟಿ ಎಂದಾಗ ಜನ ಕೇರಳದ ಬಗ್ಗೆ ಜನ ಮಾತನಾಡುತ್ತಾರೆ. ಆದರೆ, ಮಂಗಳೂರು, ಕುಂದಾಪುರ, ಉಡುಪಿ ಸೇರಿದಂತೆ ಇಲ್ಲಿ ಕರವಾಳಿ ಭಾಗ ಕೂಡಾ ಅದ್ಭುತ ಪ್ರಕೃತಿ ಸೊಬಗಿನಿಂದ ಕೂಡಿದೆ ಎಂಬ ಅಂಶವನ್ನು ಈ ಸಿನಿಮಾ ಮೂಲಕ ಹೇಳಲು ಹೊರಟಿದ್ದೇನೆ. ಹಾಗಾಗಿ,
ಇಲ್ಲಿ ಕರಾವಳಿಯ ಸೊಬಗು, ಅಲ್ಲಿನ ಆಚಾರ-ವಿಚಾರದ ಜೊತೆಗೆ ಪ್ರಕೃತಿಯ ಸೌಂದರ್ಯ ಕೂಡಾ ಅನಾವರಣಗೊಳ್ಳಲಿದೆ’ ಎಂಬುದು ದೇವರಾಜ್‌ ಅವರ ಮಾತು. ಹಾಗಾದರೆ “ಕಿನಾರೆ’ಯಲ್ಲಿ ಪ್ರಕೃತಿ
ಸೌಂದರ್ಯ ಬಿಟ್ಟು ಇನ್ನೇನಿದೆ ಎಂದು ನೀವು ಕೇಳಿದರೆ ಅಲ್ಲೊಂದು ಲವ್‌ಸ್ಟೋರಿಯೂ ಸಿಗುತ್ತದೆ. ಈ ಚಿತ್ರದಲ್ಲಿ ವಿಭಿನ್ನವಾದ ಒಂದು ಲವ್‌ಸ್ಟೋರಿಯೂ ಇದೆಯಂತೆ. ಇಡೀ ಸಿನಿಮಾ ಬೇರೆ ರೀತಿ ಮೂಡಿಬಂದಿರೋದರಿಂದ ಜನ ಇಷ್ಟಪಡುತ್ತಾರೆಂಬ ವಿಶ್ವಾಸ ದೇವರಾಜ್‌ ಅವರಿಗಿದೆ.

ಈ ಚಿತ್ರದಲ್ಲಿ ಸತೀಶ್‌ ರಾಜ್‌ ನಾಯಕರಾಗಿ ನಟಿಸಿದ್ದಾರೆ. ನಿರ್ದೇಶಕ ದೇವರಾಜ್‌ ಅವರ ಕೆಲಸಕ್ಕೆ ಅವರು μದಾ ಆಗಿದ್ದಾರೆ. ಅದು ಎಷ್ಟರ ಮಟ್ಟಿಗೆಂದರೆ ನಿರ್ದೇಶಕರ ಭವಿಷ್ಯ ನುಡಿಯುವ ಮಟ್ಟಿಗೆ. “ಮುಂದೊಂದು ದಿನ ಕನ್ನಡ ಚಿತ್ರರಂಗದ ಸ್ಟಾರ್‌ ಡೈರೆಕ್ಟರ್‌ಗಳ ಲಿಸ್ಟ್‌ನಲ್ಲಿ ನಮ್ಮ  ನಿರ್ದೇಶಕರು ಕೂಡಾ ಇರುತ್ತಾರೆ. ಅವರಿಗೆ ಆ ಸಾಮರ್ಥ್ಯವಿದೆ’ ಎಂದು ನಿರ್ದೇಶಕರ ಬಗ್ಗೆ ಮಾತನಾಡಿದರು ಸತೀಶ್‌. ಉಳಿದಂತೆ ಅವರ ಮಾತು ಚಿತ್ರತಂಡಕ್ಕೆ ಥ್ಯಾಂಕ್ಸ್‌ ಹೇಳುವುದಕ್ಕೆ ಮೀಸಲಾಗಿತ್ತು. ಚಿತ್ರದಲ್ಲಿ ಗೌತಮಿ ಜಾಧವ್‌ ನಾಯಕಿ. ವಿಭಿನ್ನ ಕಥೆ ಹಾಗೂ ಪಾತ್ರದಲ್ಲಿ ನಟಿಸಿದ ಖುಷಿ ಹಂಚಿಕೊಂಡರು ಪೂರ್ಣಿಮಾ. ಚಿತ್ರದಲ್ಲಿ ವಿಲನ್‌ ಆಗಿ ಶಮಂತ್‌ ಶೆಟ್ಟಿ ನಟಿಸಿದ್ದಾರೆ. ಇಷ್ಟು ದಿನ ಮನೀಶ್‌ ಶೆಟ್ಟಿಯಾಗಿದ್ದ ಅವರು ಈಗ ಶಮಂತ್‌ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ಚಿತ್ರಕ್ಕೆ ಸುರೇಂದ್ರನಾಥ್‌ ಸಂಗೀತ ನೀಡಿದ್ದಾರೆ.

ಚಿತ್ರದಲ್ಲಿ ಆರು ಹಾಡುಗಳಿದ್ದು, ಹೊಸ ಬಗೆಯಿಂದ ಕೂಡಿದೆ ಎಂಬುದು ಅವರ ಮಾತು. ಚಿತ್ರಕ್ಕೆ ಹಾಡು ಬರೆದ ವಿ.ನಾಗೇಂದ್ರ ಪ್ರಸಾದ್‌ಗೆ ನಿರ್ದೇಶಕರು ಕಥೆ ಹೇಳುವಾಗ, ತುಂಬಾ ಅನುಭವವಿರುವವರು ಮಾಡುವಂತಹ ಪಾತ್ರ ಎನಿಸಿತಂತೆ. ಆದರೆ, ಹೊಸಬರಾದರೂ ಚಿತ್ರಕ್ಕೆ ನ್ಯಾಯ ಒದಗಿಸಿರುವ ವಿಶ್ವಾಸ ಅವರಿಗಿದೆ. ಚಿತ್ರಕ್ಕೆ ಅಭಿಷೇಕ್‌ ಕಾಸರಗೋಡು ಛಾಯಾಗ್ರಹಣವಿದೆ. ಕಥೆಗೆ ಪೂರಕವಾದ ಛಾಯಾಗ್ರಹಣವಿದೆ ಎಂಬುದು ಅವರ ಮಾತು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.