ಕಾಲೇಜ್‌ ಖದರ್‌


Team Udayavani, Oct 20, 2017, 11:15 AM IST

College-Kumar_(240).jpg

ವಿಕ್ಕಿ ಹಾಗೂ ಸಂಯುಕ್ತಾ ಹೆಗಡೆ ಅಭಿನಯದ “ಕಾಲೇಜ್‌ ಕುಮಾರ್‌’ ಚಿತ್ರ ಶುರುವಾಗಿದ್ದು ಮತ್ತು ಮುಗಿದಿದ್ದು ಗೊತ್ತೇ ಇದೆ. ಈಗ ಆಡಿಯೋ ಸಿಡಿ ಕೂಡ ಬಿಡುಗಡೆಯಾಗಿದೆ. ನಿರ್ಮಾಪಕ ಪದ್ಮನಾಭ ಆಡಿಯೋ ಬಿಡುಗಡೆ ಸಮಾರಂಭವನ್ನು ಚೌಡಯ್ಯ ಮೆಮೋರಿಯಲ್‌ ಹಾಲ್‌ನಲ್ಲಿ ಆಯೋಜಿಸಿದ್ದರು. ಅಂದಿನ ಹೈಲೈಟ್‌ ಧ್ರುವ ಸರ್ಜಾ, ಮಾಲಾಶ್ರೀ ಮತ್ತು ಸಚಿವ ಎ. ಮಂಜು. ಉಳಿದಂತೆ ಚಿತ್ರರಂಗದ ಅನೇಕ ಗಣ್ಯರು ಕುಮಾರನ ಹಾಡುಗಳ ಬಿಡುಗಡೆಗೆ ಸಾಕ್ಷಿಯಾದರು.

ಅಂದು ಹಾಡು, ಕುಣಿತ, ಹಾಸ್ಯದ ಹೊನಲು, ಮ್ಯಾಜಿಕ್‌, ಪುಟಾಣಿಗಳ ತರಹೇವಾರಿ ಡೈಲಾಗ್‌ಗಳ ಝಲಕ್‌ ಇತ್ಯಾದಿಯಿಂದಾಗಿ ಆ ವೇದಿಕೆ ರಂಗಾಗಿತ್ತು. ಧ್ರುವ ಸರ್ಜಾ ವೇದಿಕೆಗೆ ಬರುವವರೆಗೂ ಒಂದೇ ವೇಗದಲ್ಲಿ ನಡೆಯುತ್ತಿದ್ದ ಮನರಂಜನೆ ಕಾರ್ಯಕ್ರಮ, ಧ್ರುವ ಸರ್ಜಾ ವೇದಿಕೆಗೆ ಎಂಟ್ರಿಯಾಗುತ್ತಿದ್ದಂತೆ, ಇನ್ನಷ್ಟು ರಂಗಾಯಿತು. ಡೈಲಾಗ್‌ ಹೇಳುತ್ತಲೇ, “ನಿರ್ದೇಶಕ ಸಂತು ಅವರು ಸಾಕಷ್ಟು ಸಮಯ ತೆಗೆದುಕೊಂಡು ಈ ಚಿತ್ರ ಮಾಡಿದ್ದಾರೆ. ಇಂದಿನ ಹೀರೋ ಅರ್ಜುನ್‌ ಜನ್ಯ.

ನಾನು ಈ ಚಿತ್ರವನ್ನು ಮೊದಲ ದಿನವೇ ಚಿತ್ರಮಂದಿರದಲ್ಲಿ ವೀಕ್ಷಿಸುತ್ತೇನೆ’ ಎಂದರು ಧ್ರುವ. ನಿರ್ಮಾಪಕ ಪದ್ಮನಾಭ ಕೂಡ ಅಂದು ಎಂದಿಗಿಂತ ಉತ್ಸಾಹದಲ್ಲಿದ್ದರು. ಅದಕ್ಕೆ ಕಾರಣ, ವೇದಿಕೆ ಮೇಲೆ ಹೆಜ್ಜೆ ಹಾಕುತ್ತಿದ್ದ ನೃತ್ಯ ಕಲಾವಿದರು. ಅವರೊಂದಿಗೆ ಹೆಜ್ಜೆ ಹಾಕಿದ ಪದ್ಮನಾಭ್‌, “ಅರ್ಜುನ್‌ ಜನ್ಯ ಒಳ್ಳೆಯ ಹಾಡು ಕೊಟ್ಟಿದ್ದಾರೆ. ಇದು ಕಾಲೇಜ್‌ ಹುಡುಗನ ಸುತ್ತ ನಡೆಯೋ ಕಥೆ. ಈಗಿನ ಯೂತ್ಸ್ಗೆ ಬೇಕಾದ ಎಲ್ಲಾ ಅಂಶಗಳೂ ಇಲ್ಲಿವೆ.

ಇನ್ನು, ಪಶುವೈದ್ಯ ಕಾಲೇಜ್‌ನಲ್ಲಿ ಚಿತ್ರೀಕರಣ ಮಾಡಲು ಸಚಿವ ಮಂಜು ಅವರು ಅನುಮತಿ ಕೊಡಿಸಿದ್ದಾರೆ. ಅವರಿಗೆ ಚಿತ್ರತಂಡದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ’ ಅಂದರು ಅವರು. ನಿರ್ದೇಶಕ ಸಂತು ಈ ಚಿತ್ರದ ಮೂಲಕ ಹೆಸರು ಬದಲಿಸಿಕೊಂಡಿದ್ದಾರೆ. ಅವರು ತಮ್ಮ ತಂದೆಯ ಹೆಸರು ಸೇರಿಸಿಕೊಂಡು ಇಲ್ಲಿ ಹರಿ ಸಂತು ಆಗಿದ್ದಾರೆ. “ಅರ್ಜುನ್‌ ಜನ್ಯ ಅವರಿಗೆ ಕಥೆ ಹೇಳಿದಾಗ, ಯಾರಿಗೂ ಹೇಳಬೇಡ ಅಂತ ಅವರೇ, ನಿರ್ಮಾಪಕರನ್ನು ಪರಿಚಯಿಸಿದರು.

ನಾನಿಲ್ಲಿ ಹೆಚ್ಚು ಖರ್ಚು ಮಾಡಿಸಿದ್ದೇನೆ. ಕಥೆಗೆ ಇಮೇಜ್‌ ಇರುವಂತಹ ನಾಯಕ ಅವಶ್ಯಕತೆ ಇರಲಿಲ್ಲ. ಇಲ್ಲಿ ಫೈಟ್‌ ಇಲ್ಲ. ಒಳ್ಳೆಯ ಲವ್‌ಸ್ಟೋರಿ ಇದೆ. ಚಿತ್ರದಲ್ಲಿ  ವಿಕ್ಕಿ, ಸಂಯುಕ್ತಾ ಹೆಗಡೆ, ರವಿಶಂಕರ್‌ ಮತ್ತು ಶ್ರುತಿ ನಾಲ್ಕು ಪಿಲ್ಲರ್‌ ಇದ್ದಂತೆ’ ಅಂದರು ಹರಿ ಸಂತು. ಅರ್ಜುನ್‌ ಜನ್ಯ ಅಂದು ಹಾಡುವುದರ ಜತೆ ನಾಯಕಿ ಸಂಯುಕ್ತಾ ಹೆಗಡೆ ಜತೆ ಹೆಜ್ಜೆ ಹಾಕಿದರು. ರವಿಶಂಕರ್‌ಗೆ ಒಳ್ಳೆಯ ಪಾತ್ರ ಸಿಕ್ಕ ಖುಷಿ ಇದೆ. ಅವರಿಗೆ ಆರ್ಮುಗಂ ಕೋಟೆಯಿಂದ ಹೊರ ಬಂದಿದ್ದೇನೆ ಎಂಬ ವಿಶ್ವಾಸವಿದೆ.

ಶ್ರುತಿ ಅವರಿಗೆ ರವಿಶಂಕರ್‌ ಜತೆ ನಟಿಸಿದ್ದು ಒಳ್ಳೆಯ ಅನುಭವ ಆಗಿದೆ. “ಅವರ ದೊಡ್ಡ ಅಭಿಮಾನಿ ನಾನು’ ಅಂದರು ಶ್ರುತಿ. ಚಿತ್ರತಂಡ ಕುರಿತು ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ತಂಡಕ್ಕೆ ಶುಭಹಾರೈಸಿದರು. ಸಚಿವ ಎ. ಮಂಜು, ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹರಸಿದರು. ಮಿಕ್ಕಂತೆ ನಾಯಕ ವಿಕ್ಕಿ, ನಾಯಕಿ ಸಂಯುಕ್ತಾ ಹೆಗಡೆ ಮಾತನಾಡಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.