ಕಲರ್‌ಫ‌ುಲ್ ಡಿಚ್ಕಿ ಡಿಸೈನ್‌


Team Udayavani, Jul 12, 2019, 5:00 AM IST

u-21

ನಟ ಕಂ ನಿರ್ದೇಶಕ ರಿಯಲ್ ಸ್ಟಾರ್‌ ಉಪೇಂದ್ರ ಅವರನ್ನು ಮಾದರಿಯಾಗಿ ಇಟ್ಟುಕೊಂಡು ಚಿತ್ರರಂಗಕ್ಕೆ ಬರುವ ಹೊಸ ಪ್ರತಿಭೆಗಳಿಗೆ ಬರವಿಲ್ಲ. ಉಪೇಂದ್ರ ಅವರಂಥಾಗಬೇಕು ಎಂದು ಪ್ರತಿದಿನ ಅನೇಕರು ಗಾಂಧಿನಗರದ ಅಡಿಯಿಡುತ್ತಲೇ ಇರುತ್ತಾರೆ. ಅದರಲ್ಲಿ ಯಶಸ್ವಿಯಾಗುವವರು ಎಷ್ಟು ಜನ ಅನ್ನೋದು ಬೇರೆ ಪ್ರಶ್ನೆ. ಆದರೆ ಅಂಥ ಪ್ರಯತ್ನಕ್ಕೆ ಕೈ ಹಾಕುವ ಕೆಲವರು ಆಗಾಗ್ಗೆ ತಮ್ಮ ಚಿತ್ರಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿರುತ್ತಾರೆ. ಈಗ ಅಂಥದ್ದೇ ಉಪೇಂದ್ರ ಅಭಿಮಾನಿ ರಣ ಚಂದು ಎನ್ನುವವರು, ಉಪ್ಪಿ ಸ್ಟೈಲ್ನಲ್ಲಿ ಚಿತ್ರವನ್ನು ಮಾಡಿದ್ದಾರೆ. ಆ ಚಿತ್ರದ ಹೆಸರು ‘ಡಿಚ್ಕಿ ಡಿಸೈನ್‌’.

ಅರೇ, ಇದೇನಿದು? ಚಿತ್ರದ ಹೆಸರೇ ವಿಚಿತ್ರವಾಗಿದೆಯಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುವ ರಣ ಚಂದು, ವಿಚಿತ್ರವಾಗಿದೆ ಎನ್ನುವ ಕಾರಣಕ್ಕೇ ಇಂಥದ್ದೊಂದು ಹೆಸರಿಟ್ಟಿದ್ದೇವೆ ಎನ್ನುತ್ತಾರೆ. ಅಂದಹಾಗೆ, ಈ ಚಿತ್ರದಲ್ಲಿ ರಣ ಚಂದು ಅವರೇ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಅಲ್ಲದೆ ಉಪೇಂದ್ರ ಅವರಂತೆಯೇ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಸೇರಿದಂತೆ ಚಿತ್ರದ ಹಲವು ವಿಭಾಗಗಳಲ್ಲಿ ಸ್ವತಃ ತಾವೇ ಕೆಲಸ ಮಾಡಿದ್ದಾರೆ. ಈ ಚಿತ್ರದಲ್ಲಿ ರಣ ಚಂದು ಅವರಿಗೆ ನಾಯಕಿಯಾಗಿ ನಿಮಿಕಾ ರತ್ನಾಕರ್‌ ಜೋಡಿಯಾಗಿದ್ದಾರೆ. ಉಳಿದಂತೆ ನಟನ ಪ್ರಶಾಂತ್‌, ಸುಕೇಶ್‌, ರವಿ, ಮನೋಹರ್‌ ಗೌಡ ಮೊದಲಾದವರು ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ

ಇನ್ನು ತಮ್ಮ ‘ಡಿಚ್ಕಿ ಡಿಸೈನ್‌’ ಚಿತ್ರದ ಬಗ್ಗೆ ಮಾತನಾಡುವ ರಣ ಚಂದು, ‘ಒಂದೂವರೆ ಲಕ್ಷದಿಂದ ಶುರುವಾದ ಈ ಚಿತ್ರ ಈಗ ರಿಲೀಸ್‌ ಹಂತಕ್ಕೆ ಬಂದಿದೆ. ಚಿತ್ರದ ಟೈಟಲ್ ಸಾಂಗ್‌ ರಿಲೀಸ್‌ ಆದ ನಂತರ ಚಿತ್ರದ ಬಗ್ಗೆ ವಿಶ್ವಾಸ ಹೆಚ್ಚಿತು. ಇನ್ನು ಈ ಚಿತ್ರದಲ್ಲಿ ಕಥೆಯೇ ಹೈಲೈಟ್. ಬೆಂಗಳೂರು ನೋಡಲು ಬರುವ ಹಳ್ಳಿ ಹುಡುಗನೊಬ್ಬ ಏನೇನು ಪರಿಪಾಟಲು ಅನುಭವಿಸುತ್ತಾನೆ ಅನ್ನೋದೆ ಚಿತ್ರದ ಕಥೆ. ಚಿತ್ರದಲ್ಲಿ ನಾಯಕ ನಗಿಸಿದ್ರೆ, ನಾಯಕಿ ಮನ ಕಲಕುವಂತೆ ಮಾಡುತ್ತಾಳೆ. ಕಾಲೇಜ್‌ನಲ್ಲಿ ‘ಡಿಚ್ಕಿ ಡಿಸೈನ್‌’ ಅಂಥ ಪದ ಬಳಸುತ್ತಾರೆ. ಈ ಪದಕ್ಕೆ ಕಲರ್‌ಫ‌ುಲ್ ಅಂತ ಅರ್ಥ ಬರುತ್ತದೆ. ಇಲ್ಲಿ ಹಿಪ್‌-ಹಾಪ್‌ ಇದೆ, ಕಾಲೇಜ್‌ ಲೈಫ್ ಇದೆ. ಇದೊಂದು ಯೂಥ್ಸ್ ಸಬ್ಜೆಕ್ಟ್ ಚಿತ್ರ’ ಎಂದು ವಿವರಣೆ ಕೊಡುತ್ತಾರೆ.

ಚಿತ್ರದಲ್ಲಿ ತನ್ನ ಪಾತ್ರದ ಬಗ್ಗೆ ಮಾತನಾಡುವ ನಾಯಕಿ ನಿಮಿಕಾ ರತ್ನಾಕರ್‌, ‘ಮೊದಲ ಬಾರಿಗೆ ನಾನು ಹೀರೋಯಿನ್‌ ಆಗಿ ಮಾಡಿದ ಚಿತ್ರ ಇದು. ಈ ಚಿತ್ರದಲ್ಲಿ ನನಗೆ ಹೋಮ್ಲಿ, ಪೊಲೀಸ್‌ ಮತ್ತು ಗ್ಲಾಮರ್‌ ಹೀಗೆ 3 ವಿಭಿನ್ನ ಶೇಡ್‌ಗಳ ಪಾತ್ರವಿದೆ. ಒಂದೊಳ್ಳೆ ಚಿತ್ರ ಮಾಡಿರುವುದಕ್ಕೆ ಖುಷಿ ಇದೆ’ ಎಂದರು.

ಸುಮಾರು 2 ವರ್ಷದ ಹಿಂದೆ ಶುರುವಾದ ಈ ಚಿತ್ರ ಸದ್ಯ ತನ್ನ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಾಗಿದೆ. ಬೆಳಗಾವಿ, ಗೋವಾ ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಎಸ್‌. ಸಾಮ್ರಾಟ್ ಛಾಯಾಗ್ರಹಣ, ಸುರೇಶ್‌ ಆರ್ಮುಗಂ ಸಂಕಲನ ಕಾರ್ಯವಿದೆ. ಚಿತ್ರದ 3 ಹಾಡುಗಳಿಗೆ ಕಾರ್ತಿಕ್‌ ಚೆನ್ನೋಜಿ ರಾವ್‌, ರೋಣದ ಬಕ್ಕೇಶ್‌ ಸಂಗೀತವಿದೆ

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.