ಸಂಜೆ ಮಳೆಯಲ್ಲಿ ತಣ್ಣನೆಯ ಹಾಡುಗಳು


Team Udayavani, Feb 16, 2018, 11:18 AM IST

sanje-male.jpg

ಮಳೆಗಾಲ ಶುರುವಾಗುವುದಿರಲಿ, ಇನ್ನೂ ಬೇಸಿಗೆ ಕಾಲವೇ ಶುರುವಾಗಿಲ್ಲ. ಆಗಲೇ ಅವತ್ತೂಂದು ಸಂಜೆ ಇದ್ದಿಕ್ಕಿದ್ದಂತೆ ಬೆಂಗಳೂರಿನಲ್ಲಿ ಜೋರು ಮಳೆ ಬಂದು ಬಿಟ್ಟಿತು. ಅಂಥದ್ದೊಂದು ದಿನ, ಆ ಹೊತ್ತಿನಲ್ಲಿ ಮಳೆ ಬರಬಹುದು ಎಂಬ ಕನಿಷ್ಠ ಊಹೆಯೂ ಇರದ “6 ಟು6′ ಚಿತ್ರತಂಡದವರು ಸಂಸ ಬಯಲು ರಂಗಮಂದಿರದಲ್ಲಿ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭವನ್ನು ಆಯೋಜಿಸಿಬಿಟ್ಟಿದ್ದರು.

ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪುನೀತ್‌ ರಾಜಕುಮಾರ್‌ ಬರಬೇಕಿತ್ತು. ಪುನೀತ್‌ಗಾಗಿ ಕಾಯುತ್ತಿದ್ದವರಿಗೆ, ಮಳೆ ಬಂದರೆ ಹೇಗಾಗಬೇಡ ಹೇಳಿ? ಅದೇ ಟೆನ್ಶನ್‌ ಚಿತ್ರತಂಡದವರಿಗೂ ಆಯಿತು. ಸರಿ, ಮಳೆ ನಿಲ್ಲುವಷ್ಟರಲ್ಲಿ ಮತ್ತು ಪುನೀತ್‌ ಬರುವಷ್ಟರಲ್ಲಿ ಚಿತ್ರತಂಡದವರು ಅಲ್ಲೇ ಬ್ಯಾಕ್‌ಸ್ಟೇಜ್‌ನಲ್ಲಿ ಚಿತ್ರದ ಬಗ್ಗೆ ನಾಲ್ಕು ಮಾತುಗಳನ್ನಾಡಿದರು. ಇದೊಂದು ಫ್ಯಾಮಿಲಿ ಸಿನಿಮಾ ಎಂದರೆ ತಪ್ಪಿಲ್ಲ.

ಈ ಚಿತ್ರದ ಉಸ್ತುವಾರಿಯನ್ನು “ಶಂಖನಾದ’ ಅರವಿಂದ್‌ ಅವರು ವಹಿಸಿದ್ದಾರೆ. ಅವರ ಮಗಳು ಮಾನಸ ಹೊಳ್ಳ ಚಿತ್ರಕ್ಕೆ ಸಂಗೀತ ಸಂಯೋಜಿಸಿದರೆ, ಮತ್ತೂಬ್ಬ ಮಗಳು ಕೀರ್ತನ ಚಿತ್ರಕ್ಕೆ ಹಾಡಿದ್ದಾರೆ. ಇನ್ನು ಅರವಿಂದ್‌ ಅವರ ಮೊಮ್ಮಗಳು ಲೇಖ ಹೆಸರಿನಲ್ಲಿ ಆಡಿಯೋ ಸಂಸ್ಥೆ ಪ್ರಾರಂಭಿಸಿ, ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಅಂದ ಹಾಗೆ, ಈ ಚಿತ್ರವನ್ನು ಶಿಡ್ಲಘಟ್ಟ ಶ್ರೀನಿವಾಸ್‌ ನಿರ್ದೇಶಿಸಿದ್ದಾರೆ.

ಇನ್ನು ಚಿತ್ರದಲ್ಲಿ ತಾರಕ್‌ ಪೊನ್ನಪ್ಪ, ಸಚಿನ್‌ ಮುಂತಾದವರು ಅಭಿನಯಿಸಿದ್ದಾರೆ. ರಘುನಂದನ್‌ ಮತ್ತು ಜಯಶ್ರೀ ಎನ್ನುವವರು ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಎಲ್ಲರೂ ಎಲ್ಲರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಚಿತ್ರದ ಕುರಿತು ಮಾತನಾಡಿದ ಶಿಡ್ಲಘಟ್ಟ ಶ್ರೀನಿವಾಸ್‌, “ಇದೊಂದು ಬೆಳಿಗ್ಗೆ ಆರರಿಂದ, ಸಂಜೆ ಆರರವರೆಗಿನ ಚಿತ್ರ. ಈ 12 ಗಂಟೆ ಕಾಲಮಿತಿಯಲ್ಲಿ ಏನೆಲ್ಲಾ ಆಗುತ್ತದೆ ಎನ್ನುವುದೇ ಚಿತ್ರದ ಕಥೆ.

ಕಥೆ ಬಹಳ ಚೆನ್ನಾಗಿ ಮೂಡಿ ಬಂದಿದೆ. ಚಿತ್ರಕ್ಕಾಗಿ ಮಾನಸ ಹೊಳ್ಳ ಅವರು ನಾಲ್ಕು ಒಳ್ಳೆಯ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಬರೀ ಹಾಡುಗಳಷ್ಟೇ ಅಲ್ಲ, ಚಿತ್ರದ ಹಿನ್ನೆಲೆ ಸಂಗೀತವನ್ನೂ ಅವರೇ ಸಂಯೋಜಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಿರುವ ಮತ್ತು ಕೆಲಸ ಮಾಡಿರುವ ಬಹುತೇಕರು ಹೊಸಬರು. ಆದರೆ, ಎಲ್ಲರೂ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ’ ಎಂದರು.

ಮಾತುಗಳೆಲ್ಲಾ ಮುಗಿಯುವ ಹೊತ್ತಿಗೆ ಪುನೀತ್‌ ಬಂದು ಚಿತ್ರತಂಡದವರನ್ನು ಸೇರಿಕೊಂಡರು. ಅವರ ಜೊತೆಗೆ ವಿ. ಮನೋಹರ್‌, ಕೆ. ಕಲ್ಯಾಣ್‌, ಅರ್ಜುನ್‌ ಜನ್ಯ ಸಹ ಹಾಜರಿದ್ದರು. ಎಲ್ಲರ ಸಮ್ಮುಖದಲ್ಲಿ ಚಿತ್ರದ ಹಾಡುಗಳು ಬಿಡುಗಡೆಯಾಯಿತು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.