‘ಬಡವ ರಾಸ್ಕಲ್‌’ ನಲ್ಲಿ ಡಾಲಿ ಕನಸು


Team Udayavani, Dec 24, 2021, 9:03 AM IST

badava rascal

ಇದು ನನಗೆ ತುಂಬಾನೇ ಸ್ಪೆಷಲ್‌ ಸಿನಿಮಾ…’ – ಹೀಗೆ ಹೇಳಿ ಒಂದು ಕ್ಷಣ ಮೌನವಾದರು ಧನಂಜಯ್‌. ಅವರ ಮಾತಲ್ಲಿ ಒಂದು ತೃಪ್ತಭಾವವಿತ್ತು. ಒಂದೊಳ್ಳೆಯ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುತ್ತಿರುವ ಖುಷಿಯೂ ಇತ್ತು. ಇಷ್ಟು ಹೇಳಿದ ಮೇಲೆ ಧನಂಜಯ್‌ ಯಾವ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆಂಬುದನ್ನು ಪ್ರತ್ಯೇಕವಾಗಿ ಹೇಳುವಂತಿಲ್ಲ.

ಹೌದು, ಧನಂಜಯ್‌ ನಿರ್ಮಿಸಿ, ನಟಿಸಿರುವ “ಬಡವ ರಾಸ್ಕಲ್‌’ ಚಿತ್ರ ಇಂದು ತೆರೆಕಾಣುತ್ತಿದೆ. ಧನಂಜಯ್‌ ಸ್ವಲ್ಪ ಹೆಚ್ಚೇ ಎಕ್ಸೈಟ್‌ ಆಗಿದ್ದಾರೆ. ಅದಕ್ಕೆ ಮುಖ್ಯ ಕಾರಣ ನಿರ್ಮಾಣ. ನಟನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು, ಆರಂಭದಲ್ಲಿ ಸಾಕಷ್ಟು ಕಷ್ಟದ ದಿನಗಳನ್ನು ನೋಡಿ, “ಡಾಲಿ’ ಪಾತ್ರದ ಮೂಲಕ ಸಿಕ್ಕಾಪಟ್ಟೆ ಫೇಮಸ್  ಆದ  ನಟ ಧನಂಜಯ್‌, ನಟನಾಗಿ ಬೇಡಿಕೆಯಲ್ಲಿರುವಾಗಲೇ ನಿರ್ಮಾಣದ ಕನಸು ಕಂಡವರು. ಅದರ ಫ‌ಲವಾಗಿ ಮೂಡಿಬಂದಿರೋದು “ಬಡವ ರಾಸ್ಕಲ್‌’.

ಇದು ಡಾಲಿ ಶ್ರಮದ ಸಿನಿಮಾ, ಜೊತೆಗೊಂದು ಕನಸು. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು, ಟ್ರೇಲರ್‌ ಹಿಟ್‌ ಆಗುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಚಿತ್ರದ ಬಗ್ಗೆ ಮಾತನಾಡುವ ಧನಂಜಯ್‌, “ಬಡವ ರಾಸ್ಕಲ್‌ ಫ್ಯಾಮಿಲಿ ಆಡಿಯನ್ಸ್‌ಗೆ ಹೆಚ್ಚು ಕನೆಕ್ಟ್ ಆಗುವ ಸಿನಿಮಾ. ಬರೀ ಹೀರೋಯಿಸಂ ಇಲ್ಲ. ಪ್ರತಿ ಪಾತ್ರವೂ ಮಾತನಾಡುತ್ತದೆ. ಅಷ್ಟೊಂದು ಪ್ರಾಮುಖ್ಯತೆ ಇಲ್ಲಿದೆ. ಸಮಯ, ಸಂದರ್ಭಕ್ಕನುಗುಣವಾಗಿ ಹೀರೋಯಿಂಸ ತೋರಿಸಲಾಗಿದೆ’ ಎನ್ನುವ ಧನಂಜಯ್‌ ಸ್ವಲ್ಪ ಹೆಚ್ಚೇ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಪ್ರೀಮಿಯರ್‌ ಶೋ. ಮೈಸೂರಿನಲ್ಲಿ ಪ್ರೀಮಿಯರ್‌ ಶೋ ನಡೆದಿದೆ. ಪ್ರೀಮಿಯರ್‌ ಶೋ ಟಿಕೆಟ್‌ ಬುಕ್ಕಿಂಗ್‌ ಓಪನ್‌ ಆದ ಕೇವಲ ಎರಡು ಗಂಟೆಯಲ್ಲೇ ಅಷ್ಟೂ ಟಿಕೆಟ್‌ಗಳು ಮಾರಾಟವಾಗುವ ಮೂಲಕ ಜನ ಸಿನಿಮಾದ ಬಗೆಗಿನ ಕುತೂಹಲ ತೋರಿಸಿದ್ದಾರೆ.

ಇನ್ನು, ಮೊದಲ ಬಾರಿಗೆ ನಿರ್ಮಾಣ ಮಾಡಿರುವ ಧನಂಜಯ್‌ಗೆ ಮುಂದೆ ಮತ್ತಷ್ಟು ಸಿನಿಮಾಗಳನ್ನು ನಿರ್ಮಿಸುವ ಕನಸಿದೆ. “ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳನ್ನು ನಿರ್ಮಿಸಿ, ಹೊಸಬರಿಗೆ ಅವಕಾಶ ನೀಡುವ ಕನಸಿದೆ. ಅವೆಲ್ಲವೂ “ಬಡವ ರಾಸ್ಕಲ್‌’ ಮೇಲೆ ನಿಂತಿದೆ. ಈಗಾಗಲೇ ಸಿನಿಮಾ ನೋಡಿರುವವರು ನಿರ್ಮಾಪಕರಾಗಿಯೂ ಯಶಸ್ವಿಯಾಗುತ್ತೀರಿ ಎನ್ನುವ ಭರವಸೆ ನೀಡಿದ್ದಾರೆ. ಅಂತಿಮವಾಗಿ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದಷ್ಟೇ ಮುಖ್ಯವಾಗುತ್ತದೆ’ ಎನ್ನುವುದು ಧನಂಜಯ್‌ ಮಾತು.

“ಬಡವ ರಾಸ್ಕಲ್‌’ ಸಾಕಷ್ಟು ಅಡೆತಡೆಗಳನ್ನು ದಾಟಿಕೊಂಡು ಬಂದು ಇಂದು ತೆರೆಕಾಣುತ್ತಿದೆ. ಚಿತ್ರವನ್ನು ಶಂಕರ್‌ ಗುರು ನಿರ್ದೇಶಿಸಿದ್ದು, ಧನಂಜಯ್‌, ಅಮೃತಾ ಅಯ್ಯಂ ಗಾರ್‌, ರಂಗಾಯಣ ರಘು, ತಾರಾ, ನಾಗಭೂಷಣ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.