ಮೇಸ್ಟ್ರ ಸಿನಿಮಾಕ್ಕೆ ದರ್ಶನ ಸಾಥ್

ಇಂಡಿಯಾ ವರ್ಸಸ್‌ ಇಂಗ್ಲೆಂಡ್‌ ತೆರೆಗೆ ಸಿದ್ಧ

Team Udayavani, Jan 17, 2020, 5:45 AM IST

an-15

ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ “ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ. ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳನ್ನು ಭರದಿಂದ ನಡೆಸುತ್ತಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಮತ್ತು ತಂಡ ಇತ್ತೀಚೆಗೆ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸಮ್ಮುಖದಲ್ಲಿ ಅದ್ಧೂರಿಯಾಗಿ ಚಿತ್ರದ ಟ್ರೇಲರ್‌ ಅನ್ನು ಹೊರತಂದಿದೆ.

ಖಾಸಗಿ ಹೋಟೆಲ್‌ವೊಂದರಲ್ಲಿ ನಡೆದ ಸಮಾರಂಭದಲ್ಲಿ ನಟ ದರ್ಶನ್‌ ಮುಖ್ಯ ಅತಿಥಿ­ಯಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ದರ್ಶನ್‌, “”ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಅನ್ನೋ ಟೈಟಲ್‌ ತುಂಬಾ ಚೆನ್ನಾಗಿದೆ. ನಾನು ಅದಕ್ಕೆ ಒಂದು ಟ್ವಿಸ್ಟ್‌ ಕೊಡುತ್ತೇನೆ. ಸಿನಿಮಾದ ಟೈಟಲ್‌ ಮುಂದೆ ಮದರ್‌ ಹಾಕಿದ್ರೆ ನಮ್‌ “ಮದರ್‌ ಇಂಡಿಯಾ’ ಆಗುತ್ತಾರೆ. ಇಂಗ್ಲೆಂಡ್‌ ಮುಂದೆ ಗರ್ಲ್ ಫ್ರೆಂಡ್‌ ಹಾಕಿದರೆ, “ಗರ್ಲ್ ಫ್ರೆಂಡ್‌ ಆಫ್ ಇಂಗ್ಲೆಂಡ್‌’ ಆಗುತ್ತದೆ. ಈ ಕಾರ್ಯಕ್ರಮದಲ್ಲಿ ನಮ್ಮ ಮದರ್‌ ಇಂಡಿಯಾ ಹಾಗೂ ಗರ್ಲ್ ಫ್ರೆಂಡ್‌ ಇಬ್ಬರೂ ಇದ್ದಾರೆ. ಸುಮಮ್ಮ ಮದರ್‌ ಇಂಡಿಯಾ ಆದ್ರೆ ಮಾನ್ವಿತಾ ಅವ್ರು ಅವರೇ ಗರ್ಲ್ ಫ್ರೆಂಡ್‌. ಇನ್ನು ಸಿನಿಮಾದ ಟೈಟಲ್‌ ನಲ್ಲಿ ಒಂದು ಡೈಮಂಡ್‌ ಇದ್ದು, ಅದು ವಸಿಷ್ಠ’ ಎಂದು ಚಿತ್ರದ ಟೈಟಲ್‌ಗೆ ಹೊಸ ವ್ಯಾಖ್ಯಾನ ನೀಡಿದರು.

ಇದೇ ವೇಳೆ ಮಾತನಾಡಿದ ನಟ ವಸಿಷ್ಠ ಸಿಂಹ, “ಒಮ್ಮೆ ದರ್ಶನ್‌ ಅವರು ಸಿನಿಮಾದ ಶೂಟಿಂಗ್‌ನಲ್ಲಿದ್ದಾಗ, ಭೇಟಿ ಮಾಡಿ, ನಮ್ಮ ಸಿನಿಮಾದ ಟ್ರೇಲರ್‌ ರಿಲೀಸ್‌ ಮಾಡಿಕೊಡಬೇಕೆಂದು ಮನವಿ ಮಾಡಿದೆ. ನಮ್ಮ ಆಹ್ವಾನಕ್ಕೆ ಸ್ಪಂದಿಸಿದ ದರ್ಶನ್‌ ಈಗ ಟ್ರೇಲರ್‌ ರಿಲೀಸ್‌ ಮಾಡಿದ್ದಾರೆ. ಬದುಕಿದರೆ ದರ್ಶನ್‌ ಅವರ ಥರ ಬದುಕಬೇಕು. ನಾನು ಹೇಗೆ ಬದುಕಬೇಕು ಎಂದು ಕನಸು ಕಟ್ಟಿದ್ದೆನೋ, ಅದೇ ತರ ದರ್ಶನ್‌ ಅವರ ಬದುಕು ಇದೆ. ಒಬ್ಬ ನಟ ಹೀಗೂ ಇರಬಹುದು ಎಂದು ದರ್ಶನ್‌ ತೋರಿಕೊಟ್ಟಿದ್ದಾರೆ. ಕುದುರೆ ಓಡಿಸುವುದು, ತೋಟಗಾರಿಕೆ ಮಾಡುವುದು, ಹಸುಗಳನ್ನು ಮೇಯಿಸುವುದು, ಹಾಲು ಕರೆಯುವುದು, ಕಾರ್‌, ಬೈಕ್‌ ಪ್ಯಾಷನ್‌ ಇದೆಲ್ಲ ನೋಡಿ ತುಂಬ ಖುಷಿ ಆಗುತ್ತದೆ. ಈ ಕಾರಣಕ್ಕೆ ದರ್ಶನ್‌ ತುಂಬ ಇಷ್ಟ ಆಗ್ತಾರೆ. ಬೆಂಗಳೂರಿನಲ್ಲಿ ಸಾಫ್ಟವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾಗ ಹುಟ್ಟಿಕೊಂಡ ನಾಟಕದ ಗೀಳು ಹೆಚ್ಚಾಯಿತು. ಆ ನಂತರ ಆ ಗೀಳು ಒಬ್ಬ ನಟನಾಗಿ ಕೆರಿಯರ್‌ ಆಯ್ಕೆ ಮಾಡಿಕೊಳ್ಳಲು ಪ್ರೇರೇಪಿಸಿತು. ಈಗ ನಟನೆ ಇಷ್ಟು ದೂರ ತಂದು ನಿಲ್ಲಿಸಿದೆ. ಹೀಗೆಲ್ಲ ಆಗುತ್ತದೆ ಅಂತ ಕನಸು ಕೂಡ ಕಂಡಿರಲಿಲ್ಲ. ನಾನು ಹೀರೋ ಆಗ್ತಿàನಿ. ಮುಂದೊಂದು ದಿನ ಹೀಗೆ ಆಗುತ್ತೆ ಅಂತ ಯಾವತ್ತೂ ಗೊತ್ತಿರಲಿಲ್ಲ’ ಎಂದರು.

ಇದೇ ವೇಳೆ ಮಾತನಾಡಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌, ಚಿತ್ರದ ಕಥಾಹಂದರ, ವಿಶೇಷತೆಗಳು, ಚಿತ್ರೀಕರಣದ ಅನುಭವಗಳು ಮತ್ತು ಬಿಡುಗಡೆಯ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಹಾಜರಿದ್ದ ನಾಯಕ ನಟಿ ಮಾನ್ವಿತಾ ಹರೀಶ್‌, ಹಿರಿಯ ನಟಿ ಸುಮಲತಾ ಅಂಬರೀಶ್‌ ಚಿತ್ರದ ಬಗ್ಗೆ ಮಾತನಾಡಿದರು. ‘ ಇದೇ ಜನವರಿ 24ಕ್ಕೆ ತೆರೆಗೆ ಬರುತ್ತಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.