ಮಹಿರ ಚಿತ್ರಕ್ಕೆ ದರ್ಶನ್‌ ಸಾಥ್‌


Team Udayavani, Feb 15, 2019, 12:30 AM IST

25.jpg

ಹೊಸಬರಿಗೆ ಮೊದಲಿನಿಂದಲೂ ದರ್ಶನ್‌ ಪ್ರೋತ್ಸಾಹಿಸಿಕೊಂಡು ಬಂದಿದ್ದಾರೆ. ಆ ಸಾಲಿಗೆ ಈಗ “ಮಹಿರ’ ಸಿನಿಮಾ ಕೂಡ ಸೇರಿದೆ. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ದರ್ಶನ್‌, “ಈ ಚಿತ್ರದ ನಿರ್ದೇಶಕರಾಗಲಿ, ನಿರ್ಮಾಪಕರಾಗಲಿ ನನಗೆ ಪರಿಚಯವಿಲ್ಲ. ಆದರೆ, ರಾಜಣ್ಣ ಅವರು ಹಲವು ತಿಂಗಳಿನಿಂದಲೂ ಈ ಚಿತ್ರದ ಆಡಿಯೋ ಬಿಡುಗಡೆಗೆ ಬರಬೇಕು ಎಂದು ಒತ್ತಾಯಿಸಿದ್ದರು. ಅವರು ನನ್ನ ಬಳಿ ಏನನ್ನೂ ಕೇಳಿಲ್ಲ. ಹಾಗಾಗಿ ನಾನು ಚಿತ್ರದ ಆಡಿಯೋ ಬಿಡುಗಡೆ ಮಾಡಿದ್ದೇನೆ. ಇನ್ನು, ನಿರ್ದೇಶಕರು ಲಂಡನ್‌ನಲ್ಲಿ ಇದ್ದಂತಹ ಒಳ್ಳೆಯ ಕೆಲಸವನ್ನು ಬಿಟ್ಟು ಚಿತ್ರರಂಗಕ್ಕೆ ಬಂದಿರುವುದು ಸಂತಸದ ವಿಷಯ. “ಮಹಿರ’ ಶೀರ್ಷಿಕೆ ಬಗ್ಗೆ ಗೊತ್ತಿಲ್ಲ. ಆದರೆ, ಅದೊಂದು ಸಂಸ್ಕೃತ ಪದ ಎಂಬುದು ಅರ್ಥವಾಗಿದೆ. ಚಿತ್ರದ ಟ್ರೇಲರ್‌ ನೋಡಿದಾಗ, ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ ಎನಿಸುತ್ತೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭಹಾರೈಸಿದರು ದರ್ಶನ್‌.

ದರ್ಶನ್‌ ಅವರ ಮಾತಿಗೂ ಮುನ್ನ ಚಿತ್ರದ ಎರಡು ಲಿರಿಕಲ್‌ ವಿಡಿಯೋ ಮತ್ತು ಟ್ರೇಲರ್‌ ತೋರಿಸಲಾಯಿತು. ನಿರ್ಮಾಪಕ ವಿವೇಕ್‌ ಕೋಡಪ್ಪ, “ಚಿತ್ರ ಅಂದುಕೊಂಡಂತೆ ಮೂಡಿಬಂದಿದೆ. ಒಳ್ಳೆಯ ಚಿತ್ರವನ್ನು ಕನ್ನಡಿಗರು ಎಂದೂ ಬಿಟ್ಟಿಲ್ಲ. ನಮ್ಮ ಚಿತ್ರಕ್ಕೆ ಎಲ್ಲರ ಬೆಂಬಲ ಇರಲಿ’ ಎಂದರು ಅವರು.

ನಿರ್ದೇಶಕ ಮಹೇಶ್‌ ಅವರಿಗೆ ಇದು ಮೊದಲ ಚಿತ್ರ. ಈ ಹಿಂದೆ ಸಿನಿಮಾ ಮಾಡಲು ಸಾಕಷ್ಟು ಓಡಾಟ ನಡೆಸಿದ್ದ ಅವರಿಗೆ ನಿರ್ಮಾಪಕ ವಿವೇಕ್‌ ಕೋಡಪ್ಪ, ಕಥೆ ಕೇಳಿ ಬೆಂಬಲಕ್ಕೆ ನಿಂತಿದ್ದಕ್ಕೆ ಈ ಚಿತ್ರವಾಗಿದೆ ಅಂತ ನೆನಪಿಸಿಕೊಂಡರು ಮಹೇಶ್‌. ಕುಟುಂಬದ ಪ್ರೋತ್ಸಾಹ, ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಾನು ಚಿಕ್ಕಂದಿನಿಂದಲೂ ದರ್ಶನ್‌ ಸರ್‌ ಅವರ ಚಿತ್ರಗಳನ್ನು ನೋಡಿಕೊಂಡೇ ಬಂದಿದ್ದೇನೆ. ನಮ್ಮ ಚಿತ್ರದ ಆಡಿಯೋ ಬಿಡುಗಡೆಗೆ ಬರುತ್ತೇನೆ ಎಂದು ಮಾತುಕೊಟ್ಟಿದ್ದರು. ಅದರಂತೆ ಬಂದು ನಮಗೆ ಶುಭಹಾರೈಸಿದ್ದಾರೆ. ದರ್ಶನ್‌ ಅವರ ಮುಂದೆ ನಿಂತಿರುವುದಕ್ಕೆ ಮಾತುಗಳೇ ಬರುತ್ತಿಲ್ಲ ಅಂತ ಮೈಕ್‌ ಅನ್ನು ರಾಜ್‌.ಬಿ.ಶೆಟ್ಟಿಗೆ ಕೊಟ್ಟರು. “ನಾನಿಲ್ಲಿ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರದಲ್ಲಿ ರಿಯಲ್‌ ಸ್ಟಂಟ್ಸ್‌ ಇದೆ. ಬರೀ ಬುದ್ಧಿಶಕ್ತಿಯಿಂದಲೇ ತೆಗೆದುಕೊಂಡ ನಿರ್ಧಾರದಿಂದ ಹೇಗೆ ಅಪರಾಧಿಯನ್ನು ಬಂಧಿಸಲಾಗುತ್ತದೆ ಎಂಬುದು ಇಲ್ಲಿ ಹೈಲೈಟ್‌’ ಅಂದರು ಅವರು.

ಇನ್ನು, ಚೈತ್ರಾ ಈ ಚಿತ್ರದ ನಾಯಕಿ. ಅವರಿಲ್ಲಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. ಅಮ್ಮನ ಜೊತೆ ಇರುವ ಆ ಹುಡುಗಿ ಒಂದು ಹಂತದಲ್ಲಿ ಗಂಭೀರವಾಗುತ್ತಾಳೆ. ಯಾಕೆ ಹಾಗೆ ಆಗುತ್ತಾಳೆ ಎಂಬುದು ಸಸ್ಪೆನ್ಸ್‌ ಅಂದರು ಚೈತ್ರಾ.  ಚಿತ್ರಕ್ಕೆ ನಿಲಿಮರಾವ್‌ ಮತ್ತು ರಾಕೇಶ್‌ ಸಂಗೀತ ನೀಡಿದ್ದಾರೆ. ಪೂಜಾ, ನಿಖೀತಾ, ಚೇತನ್‌ಡಿಸೋಜ ಇತರರು ಆಡಿಯೋ ಬಿಡುಗಡೆ ವೇಳೆ ಇದ್ದರು. ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.