ಹೊಸ ದಿಕ್ಕಿನತ್ತ ಯೋಗಿ

ದಯಾಳ್‌ ಕಮರ್ಷಿಯಲ್‌ ಸಿನಿಮಾವಿದು...

Team Udayavani, Sep 20, 2019, 5:34 AM IST

T-38

ಸಾಮಾನ್ಯವಾಗಿ ನಾವೆಲ್ಲ ಎಂಟು ದಿಕ್ಕು ಅಂತಾನೋ, ಹತ್ತು ದಿಕ್ಕು ಅಂತಾನೋ ಮಾತಾಡುವುದನ್ನ ಕೇಳಿದ್ದೇವೆ. ಆದರೆ ನಿರ್ದೇಶಕ ದಯಾಳ್‌ ಪದ್ಮನಾಭನ್‌ “ಒಂಬತ್ತನೇ ದಿಕ್ಕು’ ಎನ್ನುವ ಹೊಸ ದಿಕ್ಕನ್ನು ಅನ್ವೇಷಿಸಿ ಅದನ್ನು ತೆರೆಮೇಲೆ ಹೇಳಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹೌದು, ಇತ್ತೀಚೆಗಷ್ಟೇ ನಿರ್ದೇಶಕ ದಯಾಳ್‌ “ರಂಗನಾಯಕಿ’ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಇನ್ನೇನು ಆ ಚಿತ್ರ ತೆರೆಗೆ ಬರಲು ರೆಡಿಯಾಗಿ ನಿಂತಿದೆ. ಇದರ ನಡುವೆಯೇ ದಯಾಳ್‌ ಸದ್ದಿಲ್ಲದೆ ಮತ್ತೂಂದು ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಲು ಹೊರಟಿದ್ದಾರೆ. ಆ ಚಿತ್ರದ ಹೆಸರೇ “ಒಂಬತ್ತನೇ ದಿಕ್ಕು’.

ಇನ್ನು ಇಲ್ಲಿಯವರೆಗೆ ಪ್ರಯೋಗಾತ್ಮಕ ಚಿತ್ರಗಳು, ಕಲಾತ್ಮಕ ಚಿತ್ರಗಳ ಮೂಲಕವೇ ಹೆಚ್ಚು ಗುರುತಿಸಿಕೊಂಡಿರುವ ನಿರ್ದೇಶಕ ದಯಾಳ್‌ ಪದ್ಮನಾಭನ್‌ ಈ ಬಾರಿ ಪಕ್ಕಾ ಔಟ್‌ ಆ್ಯಂಡ್‌ ಔಟ್‌ ಕಮರ್ಷಿಯಲ್‌ ಶೈಲಿಯಲ್ಲಿ “ಒಂಬತ್ತನೇ ದಿಕ್ಕು’ ಚಿತ್ರವನ್ನು ತೆರೆಮೇಲೆ ತರುವ ಪ್ಲಾನ್‌ ಮಾಡಿಕೊಂಡಿದ್ದಾರೆ. ಇನ್ನು ದಯಾಳ್‌ ಹೇಳುತ್ತಿರುವ “ಒಂಬತ್ತನೇ ದಿಕ್ಕು’ ಚಿತ್ರದಲ್ಲಿ ಲೂಸ್‌ಮಾದ ಯೋಗಿ ನಾಯಕನಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಮೇಶ್‌ ಭಟ್‌, ಪ್ರಶಾಂತ್‌ ಸಿದ್ಧಿ ಮೊದಲಾದವರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸುಮಾರು ಒಂದೂವರೆ ತಿಂಗಳಿನಿಂದ “ಒಂಬತ್ತನೇ ದಿಕ್ಕು’ ಚಿತ್ರದ ಸ್ಕ್ರಿಪ್ಟ್ ಕೆಲಸಗಳಲ್ಲಿ ನಿರತವಾಗಿದ್ದ ದಯಾಳ್‌, ಇತ್ತೀಚೆಗೆ ಚಿತ್ರದ ಮುಹೂರ್ತವನ್ನು ನೆರವೇರಿಸಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ತಮಿಳು ನಟ ಆರ್ಯ “ಒಂಬತ್ತನೇ ದಿಕ್ಕು’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ನಿರ್ಮಾಪಕ ಸೌಂದರ್ಯ ಜಗದೀಶ್‌ ಕ್ಯಾಮರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಬಳಿಕ ತಮ್ಮ “ಒಂಬತ್ತನೇ ದಿಕ್ಕು’ ಚಿತ್ರದ ಬಗ್ಗೆ ಮಾತಿಗಿಳಿದ ನಿರ್ದೇಶಕ ದಯಾಳ್‌ ಪದ್ಮನಾಭನ್‌, “ಇತ್ತೀಚೆಗೆ ನನ್ನ ಚಿತ್ರಗಳೆಲ್ಲವೂ, ಎಕ್ಸ್‌ಪರಿಮೆಂಟಲ್‌ ಆಗಿದ್ದವು. “ಯಶವಂತ್‌’ ಚಿತ್ರದ ನಂತರ ನಾನು ಮಾಡುತ್ತಿರುವ ಔಟ್‌ ಆ್ಯಂಡ್‌ ಔಟ್‌ ಕಮರ್ಷಿಯಲ್‌ ಚಿತ್ರ ಇದು. ನಾನು ಇಲ್ಲಿಯವರೆಗೆ ಮಾಡಿದ ಚಿತ್ರಗಳಿಗಿಂತ ಹೊರತಾಗಿರುವ, ಹೊಸಥರದ ಸಬ್ಜೆಕ್ಟ್ ನ ಚಿತ್ರ ಮಾಡಬೇಕು ಅಂತ ಅಂದುಕೊಳ್ಳುತ್ತಿದ್ದಾಗ ಈ ಚಿತ್ರ ಮಾಡುವ ಐಡಿಯಾ ಬಂತು. ಇದೊಂದು ಇಂದಿನ ಸ್ಟೈಲ್‌ನ ಪಕ್ಕಾ ಕಮರ್ಶಿಯಲ್‌ ಎಲಿಮೆಂಟ್ಸ್‌ ಇರುವ ಆ್ಯಕ್ಷನ್‌ ಕಂ ಕ್ರೈಂ-ಥ್ರಿಲ್ಲರ್‌ ಸಬ್ಜೆಕ್ಟ್ಈ ಚಿತ್ರದಲ್ಲಿದೆ. ನಮ್ಮ ಕಾನೂನಿನ ಅಡಿಯಲ್ಲಿ ಬರುವ ಸೂಕ್ಷ್ಮವಾದ ವಿಷಯವೊಂದನ್ನು ಹೇಳುತ್ತಿದ್ದೇನೆ. ಅದೇನು ಅಂತ ಈಗಲೇ ಹೇಳಲಾರೆ. ಈ ಚಿತ್ರದಲ್ಲಿ ಹಾಡು, ಕಾಮಿಡಿ, ಆ್ಯಕ್ಷನ್ಸ್‌, ಎಮೋಶನ್ಸ್‌ ಎಲ್ಲವೂ ಇರುತ್ತದೆ. ಒಂದು ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುವ ಕಥೆಯನ್ನ ಸ್ಕ್ರೀನ್‌ ಮೇಲೆ ಹೇಳುತ್ತಿದ್ದೇವೆ’ ಎಂದು ಚಿತ್ರದ ಬಗ್ಗೆ ವಿವರಣೆ ನೀಡಿದರು.

ಇನ್ನು ಚಿತ್ರದ ನಾಯಕ ಯೋಗಿ ಈ ಚಿತ್ರದಲ್ಲಿ ಟ್ರಾವೆಲ್‌ ಏಜೆಂಟ್‌ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡುವ ಯೋಗಿ, “ದಯಾಳ್‌ ಅವರೊಂದಿಗೆ ಕೆಲಸ ಮಾಡಬೇಕು ಎಂಬ ಆಸೆ ಈ ಚಿತ್ರದ ಮೂಲಕ ಈಡೇರುತ್ತಿದೆ. ಇವತ್ತಿನ ಮಾಮೂಲಿ ಕಮರ್ಶಿಯಲ್‌ ಎಂಟರ್‌ಟೈನ್ಮೆಂಟ್‌ ಸಿನಿಮಾದಲ್ಲಿ ಏನೇನು ಇರುತ್ತವೆಯೋ, ಅದೆಲ್ಲವೂ “ಒಂಬತ್ತನೇ ದಿಕ್ಕು’ ಸಿನಿಮಾದಲ್ಲಿದೆ. ನನ್ನ ಪಾತ್ರ ಸಾಕಷ್ಟು ಕುತೂಹಲಭರಿತವಾಗಿರುವುದರಿಂದ, ಪಾತ್ರದ ಬಗ್ಗೆ ಈಗಲೇ ಹೆಚ್ಚೇನು ಹೇಳಲಾರೆ’ ಎಂದರು. ಚಿತ್ರದ ನಾಯಕಿ ಅದಿತಿ ಪ್ರಭುದೇವ ಅವರದ್ದು ಚಿತ್ರದಲ್ಲಿ ಮಧ್ಯಮ ವರ್ಗದ ಕುಟುಂಬದ ಹುಡುಗಿಯ ಪಾತ್ರವಂತೆ. ಉಳಿದಂತೆ ಚಿತ್ರದ ಮತ್ತೆರಡು ಪ್ರಮುಖ ಪಾತ್ರಗಳಿಗೆ ಡೈಲಾಗ್‌ ಕಿಂಗ್‌ ಸಾಯಿಕುಮಾರ್‌ ಮತ್ತು ಟಿ.ಎನ್‌ ಸೀತಾರಾಮ್‌ ಅವರನ್ನೂ ಕರೆತರುವ ಯೋಚನೆಯಲ್ಲಿದೆ ಚಿತ್ರತಂಡ.

“ಒಂಬತ್ತನೇ ದಿಕ್ಕು’ ಚಿತ್ರದ ನಿರ್ಮಾಣಕ್ಕೆ ದಯಾಳ್‌ ಪದ್ಮನಾಭನ್‌ ಅವರೊಂದಿಗೆ ಮತ್ತೂಬ್ಬ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ಕೂಡ ಸಾಥ್‌ ನೀಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಿದ್ದು, ರಾಕೇಶ್‌ ಛಾಯಾಗ್ರಹಣ, ಪ್ರೀತಿ ಮೋಹನ್‌ ಸಂಕಲನವಿದೆ. .

ಕಾರ್ತಿಕ್‌

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.