ಆತ್ಮಹತ್ಯೆ ಮಹಾಪಾಪ! ಅನ್ನದಾತನ ಬವಣೆಗೊಂದು ಪರಿಹಾರ


Team Udayavani, Jan 27, 2017, 3:45 AM IST

annadata.jpg

ರೈತರ ಬವಣೆ ಮತ್ತು ಅವರ ಆತ್ಮಹತ್ಯೆ ಕುರಿತು ಈಗಾಗಲೇ ಹಲವು ಸಿನಿಮಾಗಳು, ಕಿರುಚಿತ್ರಗಳು ಬಂದಿವೆ. ಆ ಸಾಲಿಗೆ “ಅನ್ನದಾತ’ ಎಂಬ ಕಿರುಚಿತ್ರವೂ ಒಂದು. ಈ ಕಿರುಚಿತ್ರದ ಮೂಲಕ ವಚನ್‌ ಮನಿಯ ನಿರ್ದೇಶಕರಾಗಿದ್ದಾರೆ. “1995 ರಿಂದ 2014 ರವರೆಗೆ ಸುಮಾರು ನಾಲ್ಕು ಲಕ್ಷದಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2004 ರಲ್ಲಿ 8,724 ರೈತರು ಸಮಸ್ಯೆಗೆ ಸಿಲುಕಿ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಪ್ರತಿ ನಿತ್ಯ 42 ರಿಂದ 45 ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನಿಟ್ಟುಕೊಂಡು, ರೈತರ ಆತ್ಮಹತ್ಯೆ ತಡೆಗೊಂದು ಬಲವಾದ ಪರಿಹಾರ ಕಂಡುಕೊಳ್ಳಬೇಕು’ ಎಂಬ ನಿಟ್ಟಿನಲ್ಲೇ “ಅನ್ನದಾತ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದಾಗಿ ಹೇಳುತ್ತಾರೆ ವಚನ್‌ ಮನಿಯ. ಈಗಾಗಲೇ “ಅನ್ನದಾತ’ ಕಿರುಚಿತ್ರ ಡೆಲ್ಲಿ ಮತ್ತು ಮುಂಬೈನ ಕಿರುಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದೆ. 

ಇತ್ತೀಚೆಗೆ ಪತ್ರಕರ್ತರಿಗೊಂದು ಪ್ರದರ್ಶನ ಏರ್ಪಡಿಸಿದ್ದ ವಚನ್‌ ಮನಿಯ, ಈ ಮೂಲಕ ರೈತರ ಆತ್ಮಹತ್ಯೆ ತಡೆಗಟ್ಟುವ ಕುರಿತು ಒಂದು ಚರ್ಚೆ ನಡೆಯಬೇಕು. ಸಾಮಾಜಿಕ ತಾಣಗಳಲ್ಲಿ ಈ ಕಿರುಚಿತ್ರವನ್ನು ಅಪ್‌ಲೋಡ್‌ ಮಾಡಿ, ಆ ಮೂಲಕ ಜಾಗೃತಿ ಉಂಟು ಮಾಡುವ ಸಣ್ಣ ಪ್ರಯತ್ನ ಮಾಡಲು ಹೊರಟಿದ್ದೇನೆ.

ಇಲ್ಲಿ ಸಾವಿಗೆ ಪರಿಹಾರ ಸೂಚಿಸಿಲ್ಲ. ಆದರೆ, ಆತ್ಮಹತ್ಯೆ ತಡೆಗೆ ಕುರಿತಾದ ಚರ್ಚೆಗಳು ನಡೆಯಬೇಕು. ಸಾಮಾಜಿಕ ತಾಣಗಳ ಮೂಲಕ ಒಂದು ದೊಡ್ಡ ಜಾಗೃತಿಯಾಗಬೇಕು ಎಂಬ ಆಸೆ ನನ್ನದು’ ಎನ್ನುತ್ತಾರೆ ವಚನ್‌ ಮನಿಯ.
ಅಂದಹಾಗೆ, ಮಾಗಡಿ ತಾಲೂಕಿನ ನೀಲಸಂದ್ರ ಎಂಬ ಗ್ರಾಮದಲ್ಲಿ “ಅನ್ನದಾತ’ ಕಿರುಚಿತ್ರವನ್ನು ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಬಬಿಂದರ್‌ ಸಿಂಗ್‌ ಕ್ಯಾಮೆರಾ ಹಿಡಿದಿದ್ದಾರೆ. ಸಮೀರ್‌ ಕುಲಕರ್ಣಿ ಸಂಗೀತ ನೀಡಿದ್ದಾರೆ. ಈಗಾಗಲೇ ಈ ಕಿರುಚಿತ್ರವನ್ನು ವೀಕ್ಷಿಸಿರುವ ಹಿರಿಯ ಕಲಾವಿದ ದತ್ತಣ್ಣ ಮತ್ತು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಕಿರುಚಿತ್ರದೊಳಗಿನ ಆಶಯಗಳ ಬಗ್ಗೆ ಮಾತಾಡಿದ್ದಾರೆ. ನಂಜಪ್ಪಣ್ಣ ಇಲ್ಲಿ ರೈತರಾಗಿ ನಟಿಸಿದರೆ, ಅವರ ಸಹೋದರಿ ಭದ್ರಕಾಳಮ್ಮ ಅವರು ಅವರ ತಾಯಿಯಾಗಿ ನಟಿಸಿದ್ದಾರೆ. ಉಳಿದಂತೆ ಬೋರೇಗೌಡ, ವಿನಯ್‌ಕುಮಾರ್‌ ಕಿರುಚಿತ್ರದ ಹೈಲೆಟ್‌. ಅಂದು ಈ ಕಿರುಚಿತ್ರದ ಹಿಂದೆ ಕೆಲಸ ಮಾಡಿದ ಮತ್ತು ಸಹಕರಿಸಿದ ಪ್ರತಿಯೊಬ್ಬರಿಗೂ ಮನಿಯ ಸಂಸ್ಥೆ ನೆನಪಿನ ಕಾಣಿಕೆ ನೀಡಿ ಗೌರವಿಸಿತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.