ಹೊಸಬರ ಹಾರರ್‌ ಚಿತ್ರ


Team Udayavani, Sep 7, 2018, 6:00 AM IST

27.jpg

ಹಾರರ್‌ ಸಿನಿಮಾಗಳ ಕ್ರೇಜ್‌ ಹೆಚ್ಚುತ್ತಿದೆ. ಹಾಗಂತ ಪ್ರೇಕ್ಷಕರಿಗಲ್ಲ, ಹೊಸದಾಗಿ ಚಿತ್ರ ರಂಗಕ್ಕೆ ಬರುವ ಚಿತ್ರತಂಡಗಳಿಗೆ. ನೀವು ಸೂಕ್ಷ್ಮವಾಗಿ ಗಮನಿಸಿದರೆ ಗಾಂಧಿನಗರಕ್ಕೆ ಹೊಸದಾಗಿ ಬರುವ ಬಹುತೇಕ ಮಂದಿ ಕಥೆಯಲ್ಲಿ ದೆವ್ವಕ್ಕೊಂದು ಸ್ಥಾನ ಕೊಟ್ಟಿರುತ್ತಾರೆ. “ಮನೆ ನಂ.67′ ಎಂಬ ಹೊಸಬರ ಸಿನಿಮಾದಲ್ಲೂ ದೆವ್ವದಾಟ ಜೋರಾಗಿದೆ. ಜೈಕುಮಾರ್‌ ಈ ಚಿತ್ರದ ನಿರ್ದೇಶಕರು. ವಿಎಫ್ಎಕ್ಸ್‌ ವಿಭಾಗದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿರುವ ಜೈಕುಮಾರ್‌ ಅವರಿಗೆ ಸಿನಿಮಾ ಮಾಡುವ  ಆಸೆ ಮುಂಚಿನಿಂದಲೂ ಇತ್ತಂತೆ. ಅದೀಗ ಈಡೇರಿದೆ. ಅವರ ಮೊದಲ ಚಿತ್ರದಲ್ಲೇ ದೆವ್ವ ಪ್ರಮುಖ ಪಾತ್ರ ವಹಿಸುತ್ತಿದೆ. 

ಎಲ್ಲಾ ಓಕೆ, “ಮನೆ ನಂ.67′ ಕಥೆಯೇನು, ಇದು ಬೇರೆ ಹಾರರ್‌ ಸಿನಿಮಾಗಳಿಗಿಂತ ಹೇಗೆ ಭಿನ್ನ ಎಂಬ ಪ್ರಶ್ನೆ ಸಹಜವಾಗಿಯೇ ಎಲ್ಲರನ್ನು ಕಾಡುತ್ತದೆ. ಆದರೆ, ಜೈಕುಮಾರ್‌ ಅದಕ್ಕೆ ಸ್ಪಷ್ಟವಾಗಿ ಉತ್ತರಿಸಲು ತಯಾರಿಲ್ಲ. “ಭಿನ್ನವಾಗಿದೆ, ವಿಭಿನ್ನವಾಗಿದೆ’ ಎಂದಷ್ಟೇ ಹೇಳುತ್ತಾರೆ. ಹಳ್ಳಿಯಿಂದ ಸಿಟಿಗೆ ಬರುವ ಹುಡುಗ ಸಿಟಿಯಲ್ಲೊಂದು ಬಾಡಿಗೆ ಮನೆ ಸೇರುತ್ತಾನಂತೆ. ಆ ನಂತರ ಏನಾಗುತ್ತದೆ ಎಂಬ ಅಂಶವೇ ಸಿನಿಮಾದ ಹೈಲೈಟ್‌ ಎನ್ನುತ್ತಾರೆ. ಇಷ್ಟು ಹೇಳಿದ ಮೇಲೆ ಮುಂದಿನ ಕಥೆಯನ್ನು ಊಹಿಸಿಕೊಳ್ಳೋದು ನಿಮಗೇನು ಕಷ್ಟದ ಕೆಲಸವಲ್ಲ. 

ಈ ಚಿತ್ರದ ಕಾರ್ಯಕಾರಿ ನಿರ್ಮಾಪಕ ಸುರೇಶ್‌ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು. ಇಡೀ ತಂಡ ಸೇರಿಕೊಂಡು ಒಂದೊಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಎಂಬ ಅಭಿಪ್ರಾಯ ಅವರಿಗಿದೆ. ಚಿತ್ರದಲ್ಲಿ ಸತ್ಯ ಅಜಿತ್‌ ನಾಯಕರಾಗಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮಾತನಾಡುವ ಬದಲು, ಟ್ರೇಲರ್‌ನಲ್ಲಿದ್ದ ಡೈಲಾಗ್‌ ಅನ್ನೇ ಪುನರುತ್ಛರಿಸಿದರು. ಉಳಿದಂತೆ ಚಿತ್ರದಲ್ಲಿ ಸುಮಿತ್ರಾ ನಟಿಸಿದ್ದು, ಅವರಿಲ್ಲಿ ದೆವ್ವವಾಗಿ ನಟಿಸಿದ್ದಾರೆ. ಮೊದಲಿಗೆ ದೆವ್ವದ ಪಾತ್ರ ಎಂದಾಗ ಭಯವಾಯಿತಂತೆ. ಆದರೆ, ಇಡೀ ತಂಡದ ಬೆಂಬಲದೊಂದಿಗೆ ಪಾತ್ರ ನಿಭಾಯಿಸಿದ್ದಾಗಿ ಹೇಳಿಕೊಂಡರು. ಉಳಿದಂತೆ ಚಿತ್ರದಲ್ಲಿ ನಟಿಸಿರುವ ವಾಸಂತಿ, ಸ್ವಪ್ನ, ಗಾಯತ್ರಿ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು. 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.