ಜನ್ ‘ಧನು’ ಖಾತೆ: ಬ್ಯಾಡ್‌ ಬಾಯ್‌ ಇಮೇಜ್‌ ತಂದ ಸೌಭಾಗ್ಯ


Team Udayavani, Apr 23, 2021, 10:31 AM IST

dhananjay

ನಟ ಡಾಲಿ ಧನಂಜಯ್‌ ಈಗ ಕನ್ನಡಕ್ಕಷ್ಟೇ ಸೀಮಿತನಾದ ನಟನಲ್ಲ. ಕನ್ನಡದ ಜೊತೆ ತೆಲುಗು, ತಮಿಳು, ಮಲೆಯಾಳಂ ಸಿನಿ ಪ್ರೇಕ್ಷಕರಿಗೂ ಧನಂಜಯ್‌ ಪರಿಚಿತ ನಟ. ಸದ್ಯ ಧನಂಜಯ್‌ ಅಭಿನಯಿಸುತ್ತಿರುವ ಬಹುತೇಕ ಸಿನಿಮಾಗಳು ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಗಳಲ್ಲೂ ನಿರ್ಮಾಣವಾಗುತ್ತಿದೆ.

“ಟಗರು’ ಸಿನಿಮಾ ಬಿಡುಗಡೆಯ ನಂತರ ಸಹಜವಾಗಿಯೇ ಹೊಸಥರದ ಪಾತ್ರಗಳು ಧನಂಜಯ್‌ ಅವರನ್ನು ಹುಡುಕಿಕೊಂಡು ಬಂದವು. ಕನ್ನಡದ ಜೊತೆ ಬೇರೆ ಬೇರೆ ಭಾಷೆಗಳ ನಿರ್ಮಾಪಕರು ಮತ್ತು ನಿರ್ದೇಶಕರ ಗಮನಸೆಳೆದಿದ್ದರಿಂದ, ಧನಂಜಯ್‌ ಅವರಿಗೆ ಬೇರೆ ಬೇರೆ ಭಾಷೆಗಳಲ್ಲೂ ಅವಕಾಶಗಳು ಬರೋದಕ್ಕೆ ಶುರುವಾಯ್ತು.

ಈ ಬಗ್ಗೆ ಮಾತನಾಡುವ ಧನಂಜಯ್‌, “”ಟಗರು’ ಸಿನಿಮಾದ ಬಳಿಕ ಒಂದಷ್ಟು ಹೊಸಥರದ ಪಾತ್ರಗಳು ನನ್ನನ್ನು ಹುಡುಕಿಕೊಂಡು ಬಂದವು. ಕನ್ನಡದ ಜೊತೆ ತೆಲುಗು, ತಮಿಳು, ಮಲೆಯಾಳಂನಲ್ಲೂ ಒಳ್ಳೆಯ ಪಾತ್ರಗಳು ಬಂದವು. ರಾಮ್‌ ಗೋಪಾಲ್‌ ವರ್ಮ ಅವರ “ಭೈರವಗೀತ’ ಅದರಲ್ಲಿ ಮೊದಲನೆಯದು. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲೂ ಬಂದ “ಭೈರವಗೀತ’ ಸಿನಿಮಾಕ್ಕೆ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿತು. ಸಿನಿಮಾ ಬಾಕ್ಸಾಫೀಸ್‌ನಲ್ಲಿ ಗೆಲ್ಲದಿದ್ದರೂ, ತೆಲುಗಿನಲ್ಲಿ ನನಗೆ ಒಳ್ಳೆಯ ಓಪನಿಂಗ್‌ ಸಿಕ್ಕಿತು. ತೆಲುಗು ಆಡಿಯನ್ಸ್‌ಗೆ ನನ್ನ ಪರಿಚಯವಾಯ್ತು. ಅದಾದ ಬಳಿಕ ತೆಲುಗಿನಲ್ಲೂ ಆಫ‌ರ್ ಬರೋದಕ್ಕೆ ಶುರುವಾಯ್ತು’ ಎನ್ನುತ್ತಾರೆ ಧನಂಜಯ್‌.

ಇದನ್ನೂ ಓದಿ:ಲೆಕ್ಕಾಚಾರ ಉಲ್ಟಾಪಲ್ಟಾ: ಚೇತರಿಕೆಯ ಮೊದಲೇ ಸಿನಿ ಮಂದಿಯ ಕನಸು ನುಂಗಿದ ಕೊರೋನಾ

ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್‌ ನಿರ್ದೇಶನದ, ಅಲ್ಲು ಅರ್ಜುನ್‌ ನಾಯಕನಾಗಿರುವ “ಪುಷ್ಪಾ’ ಸಿನಿಮಾದಲ್ಲಿ ಧನಂಜಯ್‌ ಮುಖ್ಯ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಧನಂಜಯ್‌, “ಸುಕುಮಾರ್‌ ಅವರಂಥ ಕ್ರಿಯೇಟಿವ್‌ ಡೈರೆಕ್ಟರ್‌ ಜೊತೆ ಕೆಲಸ ಮಾಡೋದೆ ಒಂದು ಡಿಫ‌ರೆಂಟ್‌ ಎಕ್ಸ್‌ಪೀರಿಯನ್ಸ್‌. “ಪುಷ್ಪಾ’ ಸಿನಿಮಾದಲ್ಲಿ ಕಂಪ್ಲೀಟ್‌ ನೆಗೆಟಿವ್‌ ಶೇಡ್‌ ಕ್ಯಾರೆಕ್ಟರ್‌ ಇದೆ. ಇದರ ಹಿಂದೆಯೇ ಇನ್ನೂ ಕೆಲವು ಸಿನಿಮಾಗಳ ಮಾತುಕತೆ ನಡೆಯುತ್ತಿದೆ’ ಎನ್ನುತ್ತಾರೆ ಧನಂಜಯ್‌.

ಸದ್ಯ ಕನ್ನಡದಲ್ಲಿ ಧನಂಜಯ್‌ ಅಭಿನಯದ “ಸಲಗ’, “ಬಡವ ರಾಸ್ಕಲ್‌’, “ರತ್ನನ್‌ ಪ್ರಪಂಚ’, “ಶಿವಪ್ಪ’, “ಮಾನ್ಸೂನ್‌ ರಾಗ’, “ಹೆಡ್‌ ಆ್ಯಂಡ್‌ ಬುಷ್‌’ ಹೀಗೆ ಸಾಲು ಸಾಲು ಸಿನಿಮಾಗಳು ತೆರೆಗೆ ಬರುತ್ತಿವೆ. ಈ ವರ್ಷ ಆರಂಭದಲ್ಲಿಯೇ ನಟ ಧನಂಜಯ್‌ “ಪೊಗರು’ ಮತ್ತು “ಯುವರತ್ನ’ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬಂದಿದ್ದಾರೆ. “ಈ ವರ್ಷ ನಾನು ಅಭಿನಯಿಸಿದ್ದ “ಪೊಗರು’ ಮತ್ತು “ಯುವರತ್ನ’ ಸಿನಿಮಾಗಳು ರಿಲೀಸ್‌ ಆಗಿವೆ. ಎರಡೂ ಸಿನಿಮಾಗಳಲ್ಲೂ ಸ್ಕ್ರೀನ್‌ ಸ್ಪೇಸ್‌ ಕಡಿಮೆಯಿದ್ರೂ, ಜನ ನನ್ನ ಪಾತ್ರವನ್ನ ತುಂಬಾ ಎಂಜಾಯ್‌ ಮಾಡಿದ್ರು. ಒಬ್ಬ ನಟನಾಗಿ ನಾನು ಹೀರೋ ಕ್ಯಾರೆಕ್ಟರ್‌ ಮಾಡ್ತೀನಾ ಅಥವಾ ವಿಲನ್‌ ಕ್ಯಾರೆಕ್ಟರ್‌ ಮಾಡ್ತೀನಾ ಅನ್ನೋದಕ್ಕಿಂತ, ಆಡಿಯನ್ಸ್‌ಗೆ ರೀಚ್‌ ಆಗುವಂಥ ಕ್ಯಾರೆಕ್ಟರ್‌ ಮಾಡ್ತೀನಾ ಅನ್ನೋದು ನನಗೆ ಮುಖ್ಯವಾಗುತ್ತದೆ. ಆ ಮಟ್ಟಿಗೆ ಹೇಳ್ಳೋದಾದ್ರೆ, ಈ ವರ್ಷದ ಆರಂಭದಲ್ಲೇ, ಈ ಎರಡೂ ಸಿನಿಮಾಗಳಲ್ಲಿ ಜನರಿಗೆ ರೀಚ್‌ ಆಗಿದ್ದೇನೆ. ನನ್ನ ಕ್ಯಾರೆಕ್ಟರ್‌ ಆಡಿಯನ್ಸ್‌ ಜೊತೆ ಇಂಟರ್ಯಾಕ್ಟ್ ಮಾಡಿದೆ’ ಎನ್ನುತ್ತಾರೆ ಧನಂಜಯ್‌.

ಜಿ.ಎಸ್.ಕಾರ್ತಿಕ ಸುಧನ್

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.