Kaiva ಅಮರಪ್ರೇಮಿಯ ರಕ್ತಚರಿತ್ರೆ; ಬಜಾರಿಗೆ ಬಂತು ಧನ್ವೀರ್ ಚಿತ್ರ


Team Udayavani, Dec 8, 2023, 11:03 AM IST

Dhanveerrah spoke about Kaiva

“ಕೈವ’- ಆರಂಭದಿಂದಲೂ ಸದ್ದು ಮಾಡುತ್ತಲೇ ಬಂದ ಚಿತ್ರ. ಕ್ಲಾಸ್‌ ಸಿನಿಮಾಗಳನ್ನು ಮಾಡುತ್ತಾ ಬಂದಿರುವ ಜಯತೀರ್ಥ ಮೊದಲ ಬಾರಿಗೆ ಔಟ್‌ ಅಂಡ್‌ ಔಟ್‌ ಮಾಸ್‌ ಕಂಟೆಂಟ್‌ ನೊಂದಿಗೆ ನಿರ್ದೇಶಿಸಿರುವ ಚಿತ್ರವಿದು. ಈ ಚಿತ್ರದಲ್ಲಿ ಧನ್ವೀರ್‌ ನಾಯಕರಾಗಿ ನಟಿಸಿದ್ದು, ಅವರ ರೆಟ್ರೋ ಲುಕ್‌ ಗಮನ ಸೆಳೆಯುತ್ತಿದೆ. ಇಂದು ಬಿಡುಗಡೆಯಾಗುತ್ತಿರುವ ಈ ಚಿತ್ರದ ಮೇಲೆ ಧನ್ವೀರ್‌ ಭರ್ಜರಿ ನಿರೀಕ್ಷೆ ಇಟ್ಟಿದ್ದು, ಆ ಚಿತ್ರದ ಕುರಿತಾದ ಒಂದಷ್ಟು ಪ್ರಶ್ನೆಗಳಿಗೆ ಉತ್ತರವಾಗಿದ್ದಾರೆ.

ನಿಮ್ಮ ಮೂರನೇ ಸಿನಿಮಾಕೈವಬಿಡುಗಡೆಯಾಗುತ್ತಿದೆ. ಸಂದರ್ಭ ಹೇಗಿದೆ?

ಎಷ್ಟೇ ಸಿನಿಮಾ ಮಾಡಿದ ನಟನಿಗಾದರೂ ತನ್ನ ಹೊಸ ಸಿನಿಮಾ ಬಿಡುಗಡೆ ಸಮಯದಲ್ಲಿ ಸಣ್ಣ ಒಂದು ಭಯ, ಜನ ಹೇಗೆ ಸ್ವೀಕರಿಸುತ್ತಾರೆ ಎಂಬ ಕಾತರ ಇದ್ದೇ ಇರುತ್ತದೆ. ನನಗೂ ಈಗ ಅದೇ ಫೀಲಿಂಗ್‌ ಇದೆ. ಈಗಾಗಲೇ ಚಿತ್ರದ ಟೀಸರ್‌, ಟ್ರೇಲರ್‌, ಹಾಡು ಹಿಟ್‌ ಆಗಿದೆ. ಹಾಗಾಗಿ, ಪ್ರೇಕ್ಷಕರು ಸಿನಿಮಾವನ್ನು ತುಂಬಾ ಖುಷಿಯಿಂದ ಸ್ವೀಕರಿಸುತ್ತಾರೆ ಎಂಬ ವಿಶ್ವಾಸವಿದೆ.

ಏನಿದುಕೈವ‘?

ಒಂದೇ ಮಾತಲ್ಲಿ ಹೇಳುವುದಾದರೆ “ಕೈವ’ ಒಂದು ಲವ್‌ಸ್ಟೋರಿ. ಹಾಗಂತ ಕಥೆ ಅಷ್ಟಕ್ಕೆ ಸೀಮಿತವಾಗಿಲ್ಲ, ಇಲ್ಲೊಂದು ರಕ್ತ ಸಿಕ್ತ ಅಧ್ಯಾಯವೂ ತೆರೆದುಕೊಳ್ಳುತ್ತದೆ. ಅದಕ್ಕೊಂದು ಗಟ್ಟಿ ಕಾರಣವಿದೆ. ಅದನ್ನು ಸಿನಿಮಾದಲ್ಲೇ ನೋಡಬೇಕು.

ಕೈವನೈಜ ಘಟನೆಯಾಧಾರಿತ ಸಿನಿಮಾ ಅಂತಾರೆ?

ಹೌದು, ನಮ್ಮ ನಿರ್ದೇಶಕ ಜಯತೀರ್ಥ ಅವರು ನೈಜ ಘಟನೆಯಾಧರಿಸಿ ಈ ಸಿನಿಮಾ ಮಾಡಿದ್ದಾರೆ. 80ರ ದಶಕದಲ್ಲಿ ನಡೆದ ಒಂದಷ್ಟು ನೈಜ ಅಂಶಗಳು ಈ ಸಿನಿಮಾದಲ್ಲಿವೆ. ಮೂಲ ಅಂಶವನ್ನಿಟ್ಟುಕೊಂಡು ಅದಕ್ಕೆ ಸಿನಿಮಾ ಟಚ್‌ ಕೊಟ್ಟಿದ್ದಾರೆ.

ನಿಮ್ಮ ಪಾತ್ರದ ಬಗ್ಗೆ ಹೇಳಿ?

ನನ್ನದು ತುಂಬಾ ಮುಗ್ಧ ಹುಡುಗನ ಪಾತ್ರ. ಹಾಗಂತ ಸಿನಿಮಾದುದ್ದಕ್ಕೂ ಅದೇ ಪಾತ್ರ ಸಾಗಿ ಬರುವುದಿಲ್ಲ. ಒಬ್ಬ ಮುಗ್ಧ ಹುಡುಗನ ತಾಳ್ಮೆಯ ಕಟ್ಟೆ ಹೊಡೆದಾಗ ಏನಾಗುತ್ತದೆ ಎಂಬುದು ಹೈಲೈಟ್‌. ಒಬ್ಬ ಪ್ರೇಮಿ ತನ್ನ ಪ್ರೀತಿಗಾಗಿ ಏನೆಲ್ಲಾ ಮಾಡುತ್ತಾನೆ ಎಂಬುದು ನನ್ನ ಪಾತ್ರದ ಹೈಲೈಟ್‌.

ರೆಟ್ರೋ ಲುಕ್‌, ಪಾತ್ರ ಸವಾಲೆನಿಸಿತೇ?

ಖಂಡಿತಾ ಇದು ಸವಾಲಿನ ಪಾತ್ರ. ಆದರೆ, ನಿರ್ದೇಶಕರು ಈ ಕಥೆ ಹೇಳಿದ ಕೂಡಲೇ ನಾನು ಖುಷಿಯಿಂದ ಒಪ್ಪಿಕೊಂಡೆ. ಏಕೆಂದರೆ ನಾನು ಇದುವರೆಗೆ ಮಾಡದಂತಹ ಪಾತ್ರವಿದು. ಈ ಕಥೆ ನನಗೆ ಸಿಗುವ ಮುಂಚೆ ಬೇರೆ ಬೇರೆ ನಟರ ಬಳಿ ಹೋಗಿದೆ. ಅಂತಿಮವಾಗಿ ನನ್ನ ಅದೃಷ್ಟಕ್ಕೆ ನನಗೆ ಸಿಕ್ಕಿತು. ನಿರ್ದೇಶಕ ಜಯತೀರ್ಥ ಅವರು ತುಂಬಾ ಸಾಫ್ಟ್ ಮತ್ತು ಕ್ಲಾಸ್‌ ಸಿನಿಮಾ ಮಾಡಿದವರು. ಆದರೆ, ಈ ಚಿತ್ರದಲ್ಲಿ ಅವರು ತಮ್ಮ ನಿರ್ದೇಶನದ ಮತ್ತೂಂದು ಶೈಲಿ ತೋರಿಸಿದ್ದಾರೆ.

ನಿಮ್ಮ ಫೆವರೇಟ್‌ ಸ್ಟಾರ್‌ ದರ್ಶನ್‌ ಅವರು ಸಿನಿಮಾ ನೋಡಿದ್ರಾ?

ಇಲ್ಲ, ಕೆಲವು ಶೋ ರೀಲ್‌ಗಳನ್ನು ನೋಡಿದ್ದಾರೆ. ಆರಂಭದಲ್ಲಿ ಶೋ ರೀಲ್‌ ನೋಡಿದ ಅವರು ಅದೊಂದು ದಿನ ಕರೆ ಮಾಡಿ, “ಇಷ್ಟೊಳ್ಳೆಯ ಕಂಟೆಂಟ್‌ ಅನ್ನು ಇಟ್ಟುಕೊಂಡು ಯಾಕೆ ರಿಲೀಸ್‌ ಮಾಡ್ತಿಲ್ಲ ನೀವು. ಮೊದಲು ಸಿನಿಮಾ ರಿಲೀಸ್‌ ಮಾಡುವ ಬಗ್ಗೆ ಗಮನ ಹರಿಸಿ’ ಎಂದರು. ಅಲ್ಲಿಂದ ಸಿನಿಮಾ ಬಿಡುಗಡೆ ಪ್ರಕ್ರಿಯೆ ಆರಂಭವಾಯಿತು. ಸಿನಿಮಾವನ್ನು ಕೂಡಾ ಅವರಿಗೆ ತೋರಿಸುತ್ತೇವೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.