ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ ನಲ್ಲಿ ಪ್ರೇಕ್ಷಕರ ಮುಂದೆ..


Team Udayavani, Mar 31, 2023, 2:27 PM IST

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ..

ಆರಂಭದಲ್ಲಿಯೇ ಚಿತ್ರತಂಡ ಹೇಳಿರುವಂತೆ, “ಘೋಸ್ಟ್‌’ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌-ಥ್ರಿಲ್ಲರ್‌ ಕಥಾಹಂದರದ ಸಿನಿಮಾ. ಈಗಾಗಲೇ ಬಿಡುಗಡೆಯಾಗಿರುವ “ಘೋಸ್ಟ್‌’ ಸಿನಿಮಾದ ಪೋಸ್ಟರ್‌ಗಳಲ್ಲೂ ಶಿವಣ್ಣ ಅವರ ಕೆಲವು ಗೆಟಪ್‌ಗ್ಳು ಗಮನ ಸೆಳೆಯುವಂತಿದೆ. ಹಾಗಾದರೆ, “ಘೋಸ್ಟ್‌’ ಸಿನಿಮಾದಲ್ಲಿ ನಿಜಕ್ಕೂ ಶಿವಣ್ಣ ಎಷ್ಟು ಶೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲೂ ಇದೆ. ಇದಕ್ಕೆ ಈಗ ಶಿವಣ್ಣ ಅವರೇ ಉತ್ತರಿಸಿದ್ದಾರೆ.

“ಈ ಸಿನಿಮಾದಲ್ಲಿ ನಾನು 3 ಶೇಡ್‌ನ‌ಲ್ಲಿ ಕಾಣಿಸಿಕೊಳ್ತೀನಿ. ಕಥೆ ಮತ್ತು ಪಾತ್ರಕ್ಕೆ ತಕ್ಕಂತೆ ಸಿನಿಮಾದಲ್ಲಿ 3 ಲುಕ್‌ನಲ್ಲಿ ಕಾಣಿಸಿಕೊಳ್ಳುವ ಪ್ರಯತ್ನ ಮಾಡಿದ್ದೇನೆ. ಅದು ಎಲ್ಲರಿಗೂ ಖುಷಿ ಕೊಡಲಿದೆ ಅಂತ ಭಾವಿಸಿದ್ದೇನೆ. ಇದಕ್ಕಿಂತ ಹೆಚ್ಚಾಗಿ ಈಗಲೇ ನನ್ನ ಪಾತ್ರದ ಬಗ್ಗೆ ಹೆಚ್ಚೇನೂ ಮಾತನಾಡಲಾರೆ. ಆಡಿಯನ್ಸ್‌ ಥಿಯೇಟರ್‌ನಲ್ಲಿ ನೋಡುವಾಗಲೂ ಒಂದಷ್ಟು ಸಸ್ಪೆನ್ಸ್‌- ಥ್ರಿಲ್ಲಿಂಗ್‌ ಇರಲಿ’ ಎನ್ನುವುದು ಶಿವಣ್ಣ ಮಾತು.

ಪ್ಯಾನ್‌ ಇಂಡಿಯಾದಲ್ಲಿ ಶಿವಣ್ಣ :”ಘೋಸ್ಟ್‌’ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಭಾಷೆಗಳಲ್ಲೂ ಏಕಕಾಲದಲ್ಲೆ ನಿರ್ಮಾಣವಾಗುತ್ತಿದೆ. ಸಿನಿಮಾದಲ್ಲಿ ನಟ ಶಿವರಾಜಕುಮಾರ್‌ ಅವರೊಂದಿಗೆ ಬಹುಭಾಷಾ ನಟರಾದ ಅನುಪಮ್‌ ಖೇರ್‌, ಜಯರಾಮ್‌ ಇನ್ನಿತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮೊದಲ ಬಾರಿಗೆ ಇಂಥ ದಿಗ್ಗಜರ ಜೊತೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಶಿವಣ್ಣ ಕೂಡ ಫ‌ುಲ್‌ ಖುಷಿಯಾಗಿದ್ದಾರೆ.

“ಅನುಪಮ್‌ ಖೇರ್‌ ಅವರು ದೇಶದಲ್ಲಿ ಒಂದೇ ಅಲ್ಲ, ವಿಶ್ವದಲ್ಲಿ ಒಳ್ಳೆಯ ನಟ. ಅವರಿಂದ ಕಲಿಯುವುದು ಸಾಕಷ್ಟಿದೆ. ಸಿನಿಮಾದಲ್ಲಿ ಅವರಿಗೊಂದು ವಿಶೇಷ ಪಾತ್ರವಿದೆ. ಖಂಡಿತ ಅವರ ಪಾತ್ರ ಎಲ್ಲರಿಗೂ ಇಷ್ಟವಾಗುತ್ತದೆ. ಇನ್ನು ಜಯರಾಮ್‌ ಅವರೊಂದಿಗೆ ಅಭಿನಯಿಸಲು ಕಾಲ ಕೂಡಿ ಬಂದಿರಲಿಲ್ಲ. ಈ ಸಿನಿಮಾದಲ್ಲಿ ಅವರೊಂದಿಗೂ ಅಭಿನಯಿಸುವ ಅವಕಾಶ ಬಂದಿದೆ. ಈ ಸಿನಿಮಾದಲ್ಲಿ ಜಯರಾಮ್‌ ಅವರಿಂದ ಒಂದು ಪಾತ್ರ ಮಾಡಿಸೋಣ ಅಂತ ನಾನು ಹೇಳಿದ್ದೆ. ಟೀಮ್‌ ಕೂಡ ಈ ಪಾತ್ರಕ್ಕೆ ಅವರೇ ಸೂಕ್ತ ಎನಿಸಿತು. ಇಡೀ ಸಿನಿಮಾದ ಶೂಟಿಂಗ್‌ ಖುಷಿಕೊಡುತ್ತಿದೆ’ ಎಂದರು ಶಿವರಾಜಕುಮಾರ್‌.

2 ಪಾರ್ಟ್‌ನಲ್ಲಿ “ಘೋಸ್ಟ್‌’:  “”ಘೋಸ್ಟ್‌’ ಸಿನಿಮಾ ಎರಡು ಪಾರ್ಟ್‌ನಲ್ಲಿ ಬರುತ್ತದೆ’ ಇಂಥದ್ದೊಂದು ಮಾಹಿತಿಯನ್ನು ಸ್ವತಃ ಶಿವರಾಜಕುಮಾರ್‌ ಅವರೇ ಹಂಚಿಕೊಂಡಿದ್ದಾರೆ. ಈಗಾಗಲೇ “ಘೋಸ್ಟ್‌’ ಮೊದಲ ಭಾಗದ ಚಿತ್ರೀಕರಣ ಶೇಕಡಾ 90ರಷ್ಟು ಪೂರ್ಣಗೊಂಡಿದೆ. “ಘೋಸ್ಟ್‌’ ಮೊದಲ ಭಾಗ ಬಿಡುಗಡೆಯಾದ ನಂತರ “ಘೋಸ್ಟ್‌’ ಎರಡನೇ ಭಾಗ ಕೂಡ ತೆರೆಗೆ ಬರಲಿದೆ. ಮೊದಲ ಭಾಗದಲ್ಲಿರುವ ಬಹುತೇಕ ಎಲ್ಲ ಕಲಾವಿದರೂ ಎರಡನೇ ಭಾಗದಲ್ಲೂ ಇರಲಿದ್ದಾರೆ. ನಿರ್ದೇಶಕ ಶ್ರೀನಿ, ನಿರ್ಮಾಪಕ ಸಂದೇಶ್‌ ನಾಗರಾಜ್‌ ದೊಡ್ಡ ಕ್ಯಾನ್ವಾಸ್‌ನಲ್ಲಿ, ಬಿಗ್‌ ಬಜೆಟ್‌ನಲ್ಲಿ “ಘೋಸ್ಟ್‌’ ಸಿನಿಮಾ ಮಾಡುತ್ತಿದ್ದಾರೆ. ಎಲ್ಲ ಥರದ ಎಂಟರ್‌ಟೈನ್ಮೆಂಟ್‌ “ಘೋಸ್ಟ್‌’ನಲ್ಲಿ ಇರಲಿದೆ. ಎಲ್ಲರೂ ಎಂಜಾಯ್‌ ಮಾಡುವಂಥ ಸಿನಿಮಾ ಆಗಲಿದೆ’ ಎಂಬ ವಿಶ್ವಾಸದ ಮಾತು ಶಿವಣ್ಣ ಅವರದ್ದು.

ವರ್ಷಾಂತ್ಯಕ್ಕೆ ದರ್ಶನ  ಸದ್ಯ “ಘೋಸ್ಟ್‌’ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಲಿದ್ದು, ಮತ್ತೂಂದೆಡೆ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಕೂಡ ಭರದಿಂದ ನಡೆಯುತ್ತಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಆಗಸ್ಟ್‌ ಅಥವಾ ಸೆಪ್ಟೆಂಬರ್‌ ವೇಳೆಗೆ “ಘೋಸ್ಟ್‌’ ತೆರೆಗೆ ಬರಲಿದೆ.

 ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.