ವಿಭಿನ್ನ ಪ್ರಚಾರದಲ್ಲಿ ‘ಹೊಂದಿಸಿ ಬರೆಯಿರಿ..’
Team Udayavani, Jun 10, 2022, 4:26 PM IST
ಸಿನಿಮಾ ಮಾಡೋದೇ ಒಂದು ಸವಾಲಾದರೆ, ಅದನ್ನು ಥಿಯೇಟರ್ಗೆ ತರುವುದು ಪ್ರೇಕ್ಷಕರಿಗೆ ಮುಟ್ಟಿಸುವುದು ಇನ್ನೊಂದು ಸವಾಲು. ಅದರಲ್ಲೂ ಹೊಸಬರ ಸಿನಿಮಾಗಳಿಗೆ, ಹೊಸಥರದ ಕಂಟೆಂಟ್ ಸಿನಿಮಾಗಳಿಗೆ ಈ ಸವಾಲುಗಳನ್ನು ಎದುರಿಸಿದರೇನೇ, ಗೆಲುವಿನ ನಗೆ ಬೀರಲು ಸಾಧ್ಯ. ಹೀಗಾಗಿ ಇತ್ತೀಚೆಗೆ ಸಿನಿಮಾ ತಂಡಗಳು ಹೊಸರೀತಿಯ ಪ್ರಚಾರ ಕಾರ್ಯಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುತ್ತವೆ. ಇದೀಗ “ಹೊಂದಿಸಿ ಬರೆಯಿರಿ’ ಚಿತ್ರತಂಡ, ಅಂಥದ್ದೊಂದು ವಿಭಿನ್ನ ಪ್ರಮೋಶನ್ಸ್ ಮೂಲಕ ಗಮನ ಸೆಳೆಯುತ್ತಿದೆ.
ಹೌದು, “ಹೊಂದಿಸಿ ಬರೆಯಿರಿ’ ಸಿನಿಮಾ ಟೀಂ ಸಾಮಾಜಿಕ ಕಾರ್ಯಗಳ ಮೂಲಕ ವಿಭಿನ್ನವಾಗಿ ಚಿತ್ರದ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ಇತ್ತೀಚೆಗೆ ನಡೆದ “ವಿಶ್ವ ಪರಿಸರ ದಿನ’ದ ಅಂಗವಾಗಿ ಸೈಕಲ್ ಜಾಥಾ ನಡೆಸುವ ಮೂಲಕ ಚಿತ್ರತಂಡ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.
ನಾಯಕ ನಟರಾದ ಪ್ರವೀಣ್ ತೇಜ್, ನವೀನ್ ಶಂಕರ್, ಶ್ರೀ ಮಹಾದೇವ್, ನಾಯಕಿಯರಾದ ಐಶಾನಿ ಶೆಟ್ಟಿ, ಸಂಯುಕ್ತಾ ಹೊರನಾಡು, ಭಾವನಾ ರಾವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ, ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹೀಗೆ ಚಿತ್ರತಂಡದ ಕಲಾವಿದರು ಮತ್ತು ತಂತ್ರಜ್ಞರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸಂರಕ್ಷಣೆಯ ಕಾರ್ಯದ ಜೊತೆಗೆ ಪ್ರಚಾರ ಕಾರ್ಯವನ್ನೂ ನಡೆಸಿದರು.
ಇದನ್ನೂ ಓದಿ:ಫ್ಯಾಮಿಲಿ ಪ್ಯಾಕ್ ಜೋಡಿಯ ‘ಅಬ್ಬಬ್ಬ’ ಸ್ಟೋರಿ!
ಇನ್ನೂ ಇದೇ ಭಾನುವಾರ “ವಿ ರನ್ ಫಾರ್ ಕಾಸ್’ ಎಂಬ ಮ್ಯಾರಾಥಾನ್ ಕಾರ್ಯಕ್ರಮದಲ್ಲೂ ಭಾಗಿಯಾಗಲಿರುವ “ಹೊಂದಿಸಿ ಬರೆಯಿರಿ’ ಸಿನಿಮಾ ತಂಡ, ಈ ಮೂಲಕ ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಜಾಗೃತಿ ಮೂಡಿಸುವ ಕೆಲಸಕ್ಕೂ ಮುಂದಾಗಿದೆ.
“ಹೊಂದಿಸಿ ಬರೆಯಿರಿ’ ಚಿತ್ರಕ್ಕೆ ಶಾಂತಿ ಸಾಗರ್ ಛಾಯಾಗ್ರಹಣ, ಜೋಕೋಸ್ಟ ಸಂಗೀತವಿದೆ. ಕೆ. ಕಲ್ಯಾಣ್, ಹೃದಯಶಿವ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಂಡೇ ಸಿನಿಮಾಸ್’ ಬ್ಯಾನರ್ನಡಿ ಈ ಚಿತ್ರ ನಿರ್ಮಾಣವಾಗಿದೆ. ಇದೇ ತಿಂಗಳ 24ಕ್ಕೆ “ಹೊಂದಿಸಿ ಬರೆಯಿರಿ’ ಸಿನಿಮಾದ ಮೊದಲ ಹಾಡು, ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್