ರಂಗನಾಯಕಿಯ ಆರ್ತನಾದ

ಕಾಡಿದ ಕಥೆಗೆ ದಯಾಳ್‌ ದೃಶ್ಯರೂಪ

Team Udayavani, May 3, 2019, 6:00 AM IST

Suchi-Dayal

ಅತ್ಯಾಚಾರದಂಥ ಘಟನೆ ಹೆಣ್ಣೊಬ್ಬಳ ಬದುಕನ್ನ ಹೇಗೆ ಹಿಂಸಿಸುತ್ತದೆ, ಸಂತ್ರಸ್ತೆಯನ್ನು ಸಮಾಜ ಹೇಗೆ ನೋಡುತ್ತದೆ. ಅದನ್ನೆಲ್ಲ ಮೆಟ್ಟಿ ಆಕೆ ಹೇಗೆ ನಿಲ್ಲುತ್ತಾಳೆ ಎನ್ನುವುದೇ ”ರಂಗನಾಯಕಿ’ಯ ಕಥಾಹಂದರ…

“ರಂಗನಾಯಕಿ’ ಈ ಹೆಸರು ಕೇಳುತ್ತಿದ್ದಂತೆ ಇಂದಿಗೂ ಅದೆಷ್ಟೋ ಸಿನಿಪ್ರಿಯರ ಕಣ್ಣುಗಳು ಅರಳುತ್ತವೆ. 1981ರಲ್ಲಿ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲರ ನಿರ್ದೇಶನದಲ್ಲಿ ಮೂಡಿಬಂದಿದ್ದ “ರಂಗನಾಯಕಿ’ ಕನ್ನಡದ ಎವರ್‌ ಗ್ರೀನ್‌ ಸಿನಿಮಾಗಳ ಪಟ್ಟಿಯಲ್ಲಿ ಸಿಗುವ ಅಪರೂಪದ ಹೆಸರು. “ರಂಗನಾಯಕಿ’ ತೆರೆಕಂಡು ಬರೋಬ್ಬರಿ 38 ವರ್ಷಗಳಾದರೂ, ಇಂದಿಗೂ ಆ ಚಿತ್ರದ ಹಾಡುಗಳು, ಪಾತ್ರಗಳು ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುವುದೇ “ರಂಗನಾಯಕಿ’ ಚಿತ್ರದ ಜನಪ್ರಿಯತೆಗೆ ಸಾಕ್ಷಿ.

ಅದೆಲ್ಲ ಸರಿ, ಈಗ ಯಾಕೆ “ರಂಗನಾಯಕಿ’ ಬಗ್ಗೆ ಮಾತು ಅಂತೀರಾ? ಅದಕ್ಕೊಂದು ಕಾರಣವಿದೆ. ಕನ್ನಡ ಚಿತ್ರರಂಗದ ಮರೆಯಲಾಗದಂಥ “ರಂಗನಾಯಕಿ’ ಮತ್ತೆ ತೆರೆಮೇಲೆ ಬರುತ್ತಿದ್ದಾಳೆ. ಹೌದು, ಕನ್ನಡದಲ್ಲಿ ಮತ್ತೆ “ರಂಗನಾಯಕಿ’ ಎನ್ನುವ ಹೆಸರಿನಲ್ಲಿ ಚಿತ್ರ ತೆರೆಗೆ ಬರುತ್ತಿದೆ. ಹಾಗಂತ, ಅಂದಿನ “ರಂಗನಾಯಕಿ’ ಮತ್ತೆ ರೀ-ರಿಲೀಸ್‌ ಆಗುತ್ತದೆಯಾ? ಅಂತ ಕೇಳಬೇಡಿ. ನಾವು ಹೇಳುತ್ತಿರುವುದು “ರಂಗನಾಯಕಿ’ಯ ಬಗ್ಗೆಯೇ ಆದರೂ, ಅದು ನಿರ್ದೇಶಕ ಪುಟ್ಟಣ್ಣ ಕಣಗಾಲರ ಅಂದಿನ “ರಂಗನಾಯಕಿ’ ಬಗ್ಗೆ ಅಲ್ಲ. ನಿರ್ದೇಶಕ ದಯಾಳ್‌ ಪದ್ಮನಾಭನ್‌ ಅವರ ಇಂದಿನ “ರಂಗನಾಯಕಿ’ ಬಗ್ಗೆ.

ಇತ್ತೀಚೆಗಷ್ಟೇ “ತ್ರಯಂಬಕಂ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತಂದಿದ್ದ ನಿರ್ದೇಶಕ ದಯಾಳ್‌ ಪದ್ಮನಾಭನ್‌ ಈಗ “ರಂಗನಾಯಕಿ’ ಟೈಟಲ್‌ನಲ್ಲಿ ಹೊಸಚಿತ್ರವನ್ನು ಅನೌನ್ಸ್‌ ಮಾಡಿದ್ದಾರೆ.
“ರಂಗನಾಯಕಿ’ ಅಂತ ಟೈಟಲ್‌ ಇದ್ದರೂ, ಪುಟ್ಟಣ್ಣ ಅವರ “ರಂಗನಾಯಕಿ’ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಚಿತ್ರದ ಕಥಾಹಂದರ ಇಂಥದ್ದೊಂದು ಟೈಟಲ್‌ ಬಯಸಿದ್ದರಿಂದ ಅದನ್ನೆ ಮರುಬಳಕೆ ಮಾಡಿಕೊಳ್ಳುತ್ತಿದ್ದೇವೆ’ ಅನ್ನೋದು ನಿರ್ದೇಶಕ ದಯಾಳ್‌ ಮಾತು.

ಅಂದಹಾಗೆ, ಕೆಲವು ವರ್ಷಗಳಿಂದ ತನ್ನ ಮನಸ್ಸಿನಲ್ಲಿ ಓಡುತ್ತಿದ್ದ ಕಥೆಯೊಂದಕ್ಕೆ ದಯಾಳ್‌ ಅಕ್ಷರ ರೂಪ ಕೊಟ್ಟು ಅದನ್ನು “ರಂಗನಾಯಕಿ’ ಎನ್ನುವ ಹೆಸರಿನಲ್ಲಿ ಕಿರು ಕಾದಂಬರಿ ಆಗಿ ಇತ್ತೀಚೆಗೆ ಹೊರಗೆ ತಂದಿದ್ದಾರೆ. ಅಲ್ಲದೆ ಇದೇ ಕಿರು ಕಾದಂಬರಿಯನ್ನು ದಯಾಳ್‌ ಸಿನಿಮಾ ರೂಪದಲ್ಲಿ ಬಿಗ್‌ ಸ್ಕ್ರೀನ್‌ ಮೇಲೆ ತರುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ.

ಇತ್ತೀಚೆಗೆ “ರಂಗನಾಯಕಿ’ ಕಾದಂಬರಿಯ ಲೋಕಾರ್ಪಣೆ ಮತ್ತು ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಹಿರಿಯ ಐಪಿಎಸ್‌ ಅಧಿಕಾರಿ ಡಿ. ರೂಪಾ, ಈ ಕಿರು ಕಾದಂಬರಿಯನ್ನು ಲೋಕಾರ್ಪಣೆ ಮಾಡಿ, ಅದನ್ನು ಚಿತ್ರವನ್ನಾಗಿಸುವ ಕೆಲಸಕ್ಕೂ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ನಿರ್ದೇಶಕ ದಯಾಳ್‌, ಈ “ರಂಗನಾಯಕಿ’ ಚಿತ್ರದಲ್ಲಿ ಅಂಥದ್ದೇನಿದೆ? ಇಲ್ಲಿ “ರಂಗನಾಯಕಿ’ ಯಾರು? ಇದರ ವಿಶೇಷತೆಗಳೇನು? ಎನ್ನುವುದರ ಬಗ್ಗೆ ಒಂದಷ್ಟು ವಿಷಯಗಳನ್ನು ತೆರೆದಿಟ್ಟರು. “ಕೆಲ ವರ್ಷಗಳ ಹಿಂದೆ ದೇಶದಲ್ಲಿ ನಡೆದ ನಿರ್ಭಯಾ ಪ್ರಕರಣ ಅನೇಕರಿಗೆ ನೆನಪಿರಬಹುದು. ಅದೇ ಘಟನೆ “ರಂಗನಾಯಕಿ’ ಕಾದಂಬರಿ ಮತ್ತು ಚಿತ್ರಕ್ಕೆ ಕಾರಣ.

ಅತ್ಯಾಚಾರದಂಥ ಘಟನೆ ಹೆಣ್ಣೊಬ್ಬಳ ಬದುಕನ್ನ ಹೇಗೆ ಹಿಂಸಿಸುತ್ತದೆ, ಸಂತ್ರಸ್ತೆಯನ್ನು ಸಮಾಜ ಹೇಗೆ ನೋಡುತ್ತದೆ. ಅದನ್ನೆಲ್ಲ ಮೆಟ್ಟಿ ಆಕೆ ಹೇಗೆ ನಿಲ್ಲುತ್ತಾಳೆ ಎನ್ನುವುದೇ “ರಂಗನಾಯಕಿ’ಯ ಕಥಾಹಂದರ. ನಮ್ಮ ಸುತ್ತಮುತ್ತ ಕಂಡು-ಕೇಳಿದ ಕೆಲವು ನೈಜ ಘಟನೆಗಳನ್ನು ಆಧರಿಸಿ, ಅದಕ್ಕೊಂದಷ್ಟು ಸಿನಿಮಾ ಟಚ್‌ ಕೊಟ್ಟು “ರಂಗನಾಯಕಿ”ಯನ್ನು ತೆರೆಮೇಲೆ ತರುವ ಯೋಜನೆ ಇದೆ’ ಎನ್ನುವುದು ದಯಾಳ್‌ ಮಾತು.

ಇನ್ನು ಚಿತ್ರದಲ್ಲಿ ರಂಗನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಶ್ರೀನಿ, ತ್ರಿವಿಕ್ರಮ್‌, ಸಿಹಿಕಹಿ ಚಂದ್ರು, ಸುಂದರ ರಾಜ್‌ ಮೊದಲಾದವರು ರಂಗನಾಯಕಿಯ ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ “ಎಟಿಎಂ’ ಎನ್ನುವ ಚಿತ್ರವನ್ನು ನಿರ್ಮಿಸಿದ್ದ ಎಸ್‌.ವಿ ನಾರಾಯಣ್‌, “ಎಸ್‌.ವಿ ಎಂಟರ್‌ಟೈನ್ಮೆಂಟ್ಸ್‌’ ಬ್ಯಾನರ್‌ನಲ್ಲಿ “ರಂಗನಾಯಕಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

“ರಂಗನಾಯಕಿ’ ಚಿತ್ರಕ್ಕೆ ಬಿ. ರಾಕೇಶ್‌ ಛಾಯಾಗ್ರಹಣ, ಸುನೀಲ್‌ ಕಶ್ಯಪ್‌ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ನವೀನ್‌ ಕೃಷ್ಣ ಸಂಭಾಷಣೆಯಿದೆ. ಚಿತ್ರವನ್ನು ಬೆ‌ಂಗಳೂರು, ಹಾಸನ, ಕೊಡಗು ಸುತ್ತಮುತ್ತ ಚಿತ್ರೀಕರಿಸುವ ಯೋಜನೆಯಲ್ಲಿದೆ ಚಿತ್ರತಂಡ. ಸದ್ಯತನ್ನ ಟೈಟಲ್‌ ಲಾಂಚ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿರುವ “ರಂಗನಾಯಕಿ’ ಇದೇ ವರ್ಷಾಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ.

— ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.