ಡೈರೆಕ್ಟರ್ ಸ್ಪೆಷಲ್‌!


Team Udayavani, Nov 24, 2017, 11:48 AM IST

Kanaka_(174).jpg

ಅತ್ತ ಕಡೆ ದುನಿಯಾ ವಿಜಯ್‌ ಫ್ಯಾಮಿಲಿ, ಇತ್ತ ಕಡೆ ನಿರ್ದೇಶಕ ಆರ್‌.ಚಂದ್ರು ಫ್ಯಾಮಿಲಿ, ಅದರ ಜೊತೆಗೆ ಚಿತ್ರರಂಗದ ಕುಟುಂಬ… ಹೀಗೆ ಕುಟುಂಬಗಳೆಲ್ಲವೂ ಒಟ್ಟಾಗಿ ಸಂಭ್ರಮಿಸಿದ್ದು “ಕನಕ’ ಚಿತ್ರದ ಆಡಿಯೋ ಬಿಡುಗಡೆಯ ವಿಶೇಷ ಎನ್ನಬಹುದು. ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ “ಕನಕ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಗರದ ಲಲಿತ್‌ ಅಶೋಕ ಹೋಟೆಲ್‌ನಲ್ಲಿ ನಡೆಯಿತು.

ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲು ನಿರ್ದೇಶಕರುಗಳಾದ ಯೋಗರಾಜ್‌ ಭಟ್‌, ಸೂರಿ ಹಾಗೂ ಶಶಾಂಕ್‌ ಬಂದಿದ್ದರು. ಅವರೆಲ್ಲರೂ ಒಂದೊಂದು ಹಾಡುಗಳನ್ನು ಬಿಡುಗಡೆ ಮಾಡಿದರು. ಇನ್ನು, ದುನಿಯಾ ವಿಜಯ್‌ ಕುಟುಂಬ ಒಂದು ಹಾಡು ಬಿಡುಗಡೆ ಮಾಡಿದರೆ, ಉಳಿದಂತೆ ಯೋಗರಾಜ್‌ ಭಟ್‌, ಸೂರಿ, ಶಶಾಂಕ್‌ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. 

ಚಂದ್ರು ಸಿನಿಮಾಕ್ಕಾಗಿ ಬಡಿದಾಡುವ ಮನುಷ್ಯ ಎಂದು ಭಟ್ರಾ ಹೇಳಿದರೆ, ಚಂದ್ರು ಸಿನಿಮಾವನ್ನು ಪ್ರೀತಿಸುವ ವ್ಯಕ್ತಿ ಎಂದರು ಸೂರಿ. ಇನ್ನು, ಶಶಾಂಕ್‌ ಅವರಿಗೆ ಚಂದ್ರು ಅವರ ಮೇಕಿಂಗ್‌ ಶೈಲಿ ಇಷ್ಟವಂತೆ. ಜೊತೆಗೆ ಯಾವುದೇ ಒಂದು ಜಾನರ್‌ಗೆ ಅಂಟಿಕೊಳ್ಳದೇ, ಎಲ್ಲಾ ತರಹ ಪ್ರಯತ್ನಿಸುತ್ತಾರೆಂದರು ಶಶಾಂಕ್‌. ಆಡಿಯೋ ಬಿಡುಗಡೆಗೆ ಆರ್‌.ಚಂದ್ರು ಊರಾದ ಶಿಡ್ಲಘಟ್ಟದಿಂದಲೂ ಸಾಕಷ್ಟು ಮಂದಿ ಹಿತೈಷಿಗಳು ಬಂದಿದ್ದರು.

ಚಿಕ್ಕಬಳ್ಳಾಪುರ ಶಾಸಕ ಸುಧಾಕರ್‌, “ಚಂದ್ರು ಅವರಿಗೆ ನಾಯಕತ್ವ ಗುಣವಿದೆ. ಅವರು ಬೇಕಾದರೆ ರಾಜಕೀಯಕ್ಕೂ ಬರಬಹುದು’ ಎನ್ನುತ್ತಾ “ಕನಕ’ ಚಿತ್ರಕ್ಕೆ ಶುಭಕೋರಿದರು. ತಾವು ಆಹ್ವಾನಿಸಿದವರೆಲ್ಲಾ ಕಾರ್ಯಕ್ರಮಕ್ಕೆ ಬಂದಿದ್ದರಿಂದ ಆರ್‌.ಚಂದ್ರು ಖುಷಿಯಾಗಿದ್ದರು. “ಇವತ್ತು ಮೂವರು ನಿರ್ದೇಶಕರನ್ನು ಕರೆದು ಅವರಿಂದ ಹಾಡು ಬಿಡುಗಡೆ ಮಾಡಿಸಿ, ಸನ್ಮಾನಿಸಿದ್ದು ಖುಷಿ ಕೊಟ್ಟಿದೆ. ಅವರು ಚಿತ್ರರಂಗಕ್ಕೆ ಬಂದು ಹತ್ತು ವರ್ಷ ಕಳೆದಿದೆ.

ನಾನು ಅವರನ್ನು ನೋಡಿ ಸಾಕಷ್ಟು ಕಲಿತಿದ್ದೇನೆ’ ಎಂದರು. “ದುನಿಯಾ’ ವಿಜಯ್‌ ಕೂಡಾ “ಕನಕ’ ಬಗ್ಗೆ ಮಾತನಾಡಿದರು. ಇನ್ನು, “ಕನಕ’ ಚಿತ್ರದ ಮೂಲಕ ಗಾಯಕ ನವೀನ್‌ ಸಜ್ಜು ಸಂಗೀತ ನಿರ್ದೇಶಕರಾಗಿದ್ದಾರೆ. ತಮಗೆ ಅವಕಾಶ ಕೊಟ್ಟ ವಿಜಯ್‌ ಹಾಗೂ ಚಂದ್ರು ಅವರನ್ನು ಯಾವತ್ತೂ ಮರೆಯಲ್ಲ ಎಂದರು. ಕಾರ್ಯಕ್ರಮದಲ್ಲಿ ಚಿತ್ರದ ಹಾಡು ಹಾಗೂ ಟ್ರೇಲರ್‌ ಪ್ರದರ್ಶಿಸಲಾಯಿತು. ನಾಯಕಿಯರಾದ ಮಾನ್ವಿತಾ ಹಾಗೂ ಹರಿಪ್ರಿಯಾ ಗೈರಾಗಿದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.