ಚಂಬಲ್‌ನಲ್ಲಿ ಡಿ.ಕೆ.ರವಿ ಕಥೆ!


Team Udayavani, Feb 8, 2019, 12:30 AM IST

28.jpg

ನೀನಾಸಂ ಸತೀಶ್‌ ಮುಖದಲ್ಲಿ ಮಂದಹಾಸ ಮೂಡಿದೆ. ಮತ್ತೂಂದು ಗೆಲುವಿನ ನಿರೀಕ್ಷೆಯಲ್ಲಿ ಎದುರು ನೋಡುತ್ತಿದ್ದಾರೆ. ಸತೀಶ್‌ ಅವರ ಈ ಖುಷಿ, ನಿರೀಕ್ಷೆಗೆ ಕಾರಣ “ಚಂಬಲ್‌’. ಸತೀಶ್‌ ನಾಯಕರಾಗಿ ಕಾಣಿಸಿಕೊಂಡಿರುವ “ಚಂಬಲ್‌’ ಚಿತ್ರದ ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿದ್ದು, ನೋಡುಗರಿಂದ ಮೆಚ್ಚುಗೆ ಪಡೆದಿದೆ. ಇತ್ತೀಚೆಗೆ ಈ ಟ್ರೇಲರ್‌ ಅನ್ನು ಪುನೀತ್‌ರಾಜಕುಮಾರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. “ನಿರ್ದೇಶಕ ಜೇಕಬ್‌ ವರ್ಗಿಸ್‌ ಜೊತೆ ನಾನು “ಪೃಥ್ವಿ’ ಸಿನಿಮಾದಲ್ಲಿ ನಟಿಸಿದ್ದೆ. ಒಂದೊಳ್ಳೆಯ ಪಾತ್ರ ಕೊಟ್ಟಿದ್ದರು. ಜಿಲ್ಲಾಧಿಕಾರಿ ಪಾತ್ರವನ್ನು ಖುಷಿಯಿಂದ ಮಾಡಿದ್ದೆ. ಈಗ ಸತೀಶ್‌ ಅವರಿಗೆ “ಚಂಬಲ್‌’ನಲ್ಲಿ ಮತ್ತೂಂದು ವಿಭಿನ್ನ ಪಾತ್ರ ಕೊಟ್ಟಿದ್ದಾರೆ. ಚಿತ್ರದ ಟ್ರೇಲರ್‌ ನೋಡಿದಾಗಲೇ ಇದೊಂದು ಹೊಸ ಬಗೆಯ ಸಿನಿಮಾವಾಗುವ ಲಕ್ಷಣ ಕಾಣುತ್ತಿದೆ’ ಎಂದು ಶುಭಕೋರಿದರು. 

ನಾಯಕ ಸತೀಶ್‌ ಕೂಡಾ “ಚಂಬಲ್‌’ ಹಾಗೂ ಅದರ ಪಾತ್ರದ ಬಗ್ಗೆ ಎಕ್ಸೆ„ಟ್‌ ಆಗಿದ್ದಾರೆ. “ನಾನು ಹೆಚ್ಚು ಓದಿಲ್ಲ. ಆದರೆ, ಇಲ್ಲಿ ಐಎಎಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದೇನೆ. ಹೊಸ ಬಗೆಯ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸವಿದೆ’ ಎನ್ನುವುದು ಸತೀಶ್‌ ಮಾತು. ಇನ್ನು, ಚಿತ್ರದ ಟ್ರೇಲರ್‌ ನೋಡಿದವರು, ಇದು ಐಎಎಸ್‌ ಅಧಿಕಾರಿ ಡಿ.ಕೆ.ರವಿ ಕುರಿತಾದ ಕಥೆ ಎಂಬ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಸತೀಶ್‌, “ನನಗೆ ಆ ಬಗ್ಗೆ ಗೊತ್ತಿಲ್ಲ. ನಿರ್ದೇಶಕರು ಹೇಳಿದ್ದನ್ನು ಮಾಡಿದ್ದೇನೆ’ ಎಂದು ಜಾಣ ಉತ್ತರ ಕೊಡುತ್ತಾರೆ. ಈ ಚಿತ್ರವನ್ನು ಜೇಕಬ್‌ ವರ್ಗಿಸ್‌ ನಿರ್ದೇಶಿಸಿದ್ದಾರೆ. ಎಂದಿನಂತೆ ಈ ಬಾರಿಯೂ ಜೇಕಬ್‌ ಹೆಚ್ಚು ಮಾತನಾಡುವ ಗೋಜಿಗೆ ಹೋಗಲಿಲ್ಲ. ಪತ್ರಕರ್ತರಿಂದ ಜೇಕಬ್‌ಗ, “ಇದು ಡಿಕೆ ರವಿ ಕುರಿತಾದ ಸಿನಿಮಾನಾ’ ಎಂಬ ಪ್ರಶ್ನೆ ಎದುರಾಯಿತು. “ಇದು ಯಾರ ಕುರಿತಾದ ಸಿನಿಮಾವೂ ಅಲ್ಲ. ನಮ್ಮ ಸುತ್ತಮುತ್ತ ನಡೆದ ಒಂದಷ್ಟು ನೈಜ ಘಟನೆಗಳನ್ನಿಟ್ಟುಕೊಂಡು ಮಾಡಿರುವ ಸಿನಿಮಾವಷ್ಟೇ. ಒಂದು ವೇಳೆ ಆ ತರಹ ಕಂಡರೆ ಅದು ಕಾಕತಾಳೀಯವಷ್ಟೇ’ ಎಂದರು. ನಾಯಕಿ ಸೋನು ಗೌಡ ಕೂಡಾ “ಚಂಬಲ್‌’ ಬಗ್ಗೆ ಖುಷಿಯಾಗಿದ್ದಾರೆ. ಹೊಸ ಬಗೆಯ ಪಾತ್ರ ಸಿಕ್ಕ ಖುಷಿ ಹಂಚಿಕೊಂಡರು. ಜೊತೆಗೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪುನೀತ್‌ ಬಂದಿದ್ದರಿಂದ ಸೋನು ಎಕ್ಸೆ„ಟ್‌ ಆಗಿದ್ದರು. ಶಾಲಾ ದಿನಗಳಲ್ಲಿ ಪುನೀತ್‌ ಸಿನಿಮಾವನ್ನು ಕ್ಲಾಸ್‌ ಬಂಕ್‌ ಮಾಡಿ ನೋಡಿದ್ದನ್ನು ನೆನಪಿಸಿಕೊಂಡರು. ಉಳಿದಂತೆ ಚಿತ್ರದ ತಾಂತ್ರಿಕ ವರ್ಗ ತಮ್ಮ ಅನುಭವ ಹಂಚಿಕೊಂಡಿತು. 

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.