ಬಜಾರ್‌ನತ್ತ ಮೀನಾ ಯಾನ

ಡಾಟ್‌ ಕಾಮಾ ಹಿಂದಿನ ಸಸ್ಪೆನ್ಸ್‌!

Team Udayavani, Oct 4, 2019, 4:11 AM IST

c-25

“ಮೀನಾ ಬಜಾರ್‌ ಡಾಟ್‌ ಕಾಮಾ’ – ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಮೋಶನ್‌ ಪೋಸ್ಟರ್‌ ಹಾಗೂ ಟೀಸರ್‌ ಬಿಡುಗಡೆಯಾಗಿದೆ. ಈ ಚಿತ್ರವನ್ನು ರಾಣಾ ಸುನೀಲ್‌ ಕುಮಾರ್‌ ಸಿಂಗ್‌ ನಿರ್ದೇಶಿಸುತ್ತಿದ್ದಾರೆ. ಕಿರುತೆರೆಯಲ್ಲಿ ಹಲವು ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸಿ, ಆ ನಂತರ “ಮದುವೆ ಮನೆ’ ಚಿತ್ರ ನಿರ್ದೇಶಿಸಿರುವ ಸುನೀಲ್‌ ಕುಮಾರ್‌ ಈಗ “ಮೀನಾ ಬಜಾರ್‌’ ಮೇಲೆ ನಂಬಿಕೆ ಇಟ್ಟಿದ್ದಾರೆ. ಅಂದಹಾಗೆ, ಸಾಮಾನ್ಯವಾಗಿ ಡಾಟ್‌ ಕಾಮ್‌ ಎಂದು ಬರುತ್ತದೆ. ಆದರೆ, ಇದು “ಮೀನಾ ಬಜಾರ್‌ ಡಾಟ್‌ ಕಾಮಾ’ ಎಂದಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಸುನೀಲ್‌, “ಇಲ್ಲಿ ಡಾಟ್‌ ಕಾಮಾ ಎಂದಿದೆ. ಕಾಮ ಎಂದರೆ ಸೆಕ್ಸ್‌ ಇರಬಹುದು, ಬಯಕೆ ಇರಬಹುದು ಅಥವಾ ಮುಂದುವರೆದ ಭಾಗವಾದರೂ ಆಗಬಹುದು. ಸುಖಾಸುಮ್ಮನೆ ಈ ಶೀರ್ಷಿಕೆ ಇಟ್ಟಿಲ್ಲ. ಸಿನಿಮಾ ಕಥೆಗೆ ತುಂಬಾ ಚೆನ್ನಾಗಿ ಹೊಂದಿಕೆಯಾಗುತ್ತದೆ’ ಎಂದು ವಿವರ ನೀಡಿದರು ಸುನೀಲ್‌. ಅವರು ಹೇಳುವಂತೆ, ಇದು ಹೊಸ ಬಗೆಯ ಸಿನಿಮಾ. ಅದಕ್ಕಿಂತ ಹೆಚ್ಚಾಗಿ ಇದು ಸಂಪೂರ್ಣ ನಿರ್ದೇಶಕನ ಸಿನಿಮಾ. ಇಲ್ಲಿನ ಪಾತ್ರ, ಸನ್ನಿವೇಶಗಳೇ ಹೀರೋ ಎನ್ನುತ್ತಾರೆ ಸುನೀಲ್‌. ಅಂದಹಾಗೆ, ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ತಯಾರಾಗಿದೆ. ನಾಗೇಂದ್ರ ಸಿಂಗ್‌ ಈ ಚಿತ್ರದ ನಿರ್ಮಾಪಕರು.

ಚಿತ್ರದಲ್ಲಿ ನಿರ್ದೇಶಕ ಸುನೀಲ್‌ ಕುಮಾರ್‌ ಸಿಂಗ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಜೊತೆಗೆ ರಾಜೇಶ್‌ ನಟರಂಗ ಇಲ್ಲೊಂದು ಪಾತ್ರ ಮಾಡಿದ್ದು, ಕೈಯಲ್ಲಿ ಗನ್‌ ಹಿಡಿದು ಡಾನ್‌ ಶೈಲಿಯ ಪಾತ್ರ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ರಾಜೇಶ್‌, “ಗೆಳೆಯ ಸುನೀಲ್‌ ರಂಗಭೂಮಿಯಿಂದ ಬಂದವನು. ಹಾಗಾಗಿ, ಯಾವುದಕ್ಕೂ ಕಾಂಪ್ರಮೈಸ್‌ ಆಗದೇ ಅವನಿಗೆ ಬೇಕಾದ ಹಾಗೆ ಸಿನಿಮಾ ಮಾಡಿದ್ದಾನೆ. ನನಗೂ ಒಂದು ಒಳ್ಳೆಯ ಪಾತ್ರ ಕೊಟ್ಟಿದ್ದಾನೆ’ ಎಂದರು. ಉಳಿದಂತೆ ಚಿತ್ರದಲ್ಲಿ ಅರವಿಂದ್‌, ಶ್ರೀಜಿತ್‌ ಘೋಷ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಮಣಿಕಾಂತ್‌ ಕದ್ರಿ ಸಂಗೀತ ನೀಡಿದ್ದಾರೆ. ಇದು ನಿರ್ದೇಶಕರ ಹಲವು ವರ್ಷಗಳ ಕನಸು ಎಂದು ಚಿತ್ರದ ಬಗ್ಗೆ ಹೇಳಿದರು. ಈಗಾಗಲೇ ಚಿತ್ರ ಸೆನ್ಸಾರ್‌ ಆಗಿದ್ದು, ಕನ್ನಡದಲ್ಲಿ “ಎ’ ಹಾಗೂ ತೆಲುಗಿನಲ್ಲಿ “ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.