![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಹಣ ಇಲ್ಲದ ಮೇಲೆ ಎಲ್ಲವೂ ಮಟಾಶ್
Team Udayavani, Aug 17, 2018, 6:00 AM IST
![c-28.jpg](https://www.udayavani.com/wp-content/uploads/2018/08/17/c-28.jpg)
“ಜುಗಾರಿ’, “ಲಾಸ್ಟ್ಬಸ್’ ಚಿತ್ರಗಳನ್ನು ನಿರ್ದೇಶಿಸಿರುವ ಎಸ್.ಡಿ.ಅರವಿಂದ್ ಈಗ “ಮಟಾಶ್’ ಎಂಬ ಸಿನಿಮಾ ಮಾಡಿಮುಗಿಸಿದ್ದಾರೆ. ಈ ಬಾರಿ ಥ್ರಿಲ್ಲರ್ ಜಾನರ್ ಅನ್ನು ಕೈಗೆತ್ತಿಕೊಂಡಿರುವ ಅರವಿಂದ್, ಇತ್ತೀಚೆಗೆ ಚಿತ್ರದ ಟೀಸರ್ ಹಾಗೂ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ತಮ್ಮ “ಗೋಲ್ಡ್ ಅಂಡ್ ಡ್ರೀಮ್ಸ್’ ಪ್ರೊಡಕ್ಷನ್ ಹೌಸ್ನಡಿ ಈ ಸಿನಿಮಾ ನಿರ್ಮಾಣವಾಗಿದೆ. “ಮಟಾಶ್’ ಒಂದು ಕಾಮಿಕಲ್ ಥ್ರಿಲ್ಲರ್. ಅಪನಗಧೀಕರಣ ನಂತರ ಆದಂತಹ ಸತ್ಯ ಘಟನೆಗಳ ಆಧಾರಿತ ಕಾಲ್ಪನಿಕ ಸಿನಿಮಾವಿದು. ಆ ಸಂದರ್ಭದಲ್ಲಿ ಜನರು ತಮ್ಮ ತಮ್ಮ ಅನುಕೂಲಕ್ಕೆ ಏನೆಲ್ಲಾ ಮಾಡಿದರು. ಯಾವುದನ್ನೆಲ್ಲಾ ಬಳಸಿಕೊಂಡರು ಎಂಬುದನ್ನು ಒಂದು ಯೂಥ್ಫುಲ್ ಸ್ಟೋರಿ ಮೂಲಕ ಹೇಳಹೊರಟಿದ್ದಾರೆ ಅರವಿಂದ್.ಅಪನನಗಧೀಕರಣ ವೇಳೆ ಜನರು ಹೇಗೆಲ್ಲಾ ಪ್ರತಿಕ್ರಿಯಿಸಿದರು ಎಂಬ ಅಂಶವನ್ನು ತಮ್ಮದೇ ಶೈಲಿಯಲ್ಲಿ ಹೇಳಿದ್ದಾರಂತೆ.
ಚಿತ್ರದ ಬಗ್ಗೆ ಮಾತನಾಡುವ ಅರವಿಂದ್, “ಅಪನಗಧೀಕರಣದ ಸಮಯದಲ್ಲಿ ನಡೆದ ಕಾಲ್ಪನಿಕ ಕಥೆ ಇದು. ಮೈಸೂರು, ಬಿಜಾಪುರ, ಬೆಂಗಳೂರು ಹುಡುಗರು ಹಾಗೂ ಇಬ್ಬರು ಹುಡುಗಿಯರು ಸಕಲೇಶಪುರದ ರೆಸಾರ್ಟ್ಗೆ ಹೋಗಿದ್ದಾಗ ಒಂದು ಘಟನೆ ನಡೆಯುತ್ತದೆ. ಆ ನಂತರ ಅವರು ಅಂದುಕೊಂಡದ್ದು ಎಲ್ಲವೂ ಉಲ್ಟಾ ಆಗುತ್ತದೆ. ಅಲ್ಲಿವರೆಗೆ ಖುಷಿ ಖುಷಿಯಾಗಿದ್ದ ಅವರೇ ಕಚ್ಚಾಡಿಕೊಳ್ಳಲು ಆರಂಭಿಸುತ್ತಾರೆ. ಅಷ್ಟಕ್ಕೂ ಆ ಘಟನೆ ಏನು ಎಂಬುದೇ ಈ ಸಿನಿಮಾದ ಹೈಲೈಟ್’ ಎಂದು ಚಿತ್ರದ ಬಗ್ಗೆ ವಿವರ ಕೊಟ್ಟರು ಅರವಿಂದ್. ಸಸ್ಪೆನ್ಸ್, ಥ್ರಿಲ್ಲರ್ ಚಿತ್ರವಾದ “ಮಟಾಶ್’ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಅರವಿಂದ್ ಅವರದು. ಚಿತ್ರದಲ್ಲಿ ಸಮರ್ಥ ನರಸಿಂಹರಾಜು, ಐಶ್ವರ್ಯ ಸಿಂಧೋಗಿ, ರಜನಿ ಭಾರದ್ವಜ್, ರಾಘು ರಾಮನಕೊಪ್ಪ, ವಿ.ಮನೋಹರ್, ನಂದಗೋಪಾಲ್, ಸದಾನಂದ ಕಲಿ, ರವಿಕಿರಣ್ ರಾಜೇಂದ್ರನ್, ಸಿದ್ಧಾಂತ್ ಸುಂದರ್, ರಂಗಸ್ವಾಮಿ, ಅಮೋಘ…, ಗಣೇಶ್ ರಾಜ್, ಬಾಲಾಜಿ ಶೆಟ್ಟಿ, ಗೌತಮ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಅರವಿಂದ್ ನಿರ್ದೇಶನದ ಜೊತೆಗೆ ಆರು ಹಾಡುಗಳಿಗೆ ಸಂಗೀತವನ್ನೂ ನೀಡಿದ್ದಾರೆ. ಸತೀಶ್ ಪಾಟಕ್ ಹಾಗು ಗಿರೀಶ್ ಪಾಟೀಲ್ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಅವಿನಾಶ್ ಇಲ್ಲಿ ಕಲಾನಿರ್ದೇಶನ ಮಾಡಿದ್ದಾರೆ. ಚಿತ್ರತಂಡದ ಸದಸ್ಯರೆಲ್ಲ ಅವಕಾಶ ಸಿಕ್ಕ ಬಗ್ಗೆ ಖುಷಿ ಹಂಚಿಕೊಂಡರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.