ಎವಿಡೆನ್ಸ್‌ ಜೊತೆಬಂದವರು..


Team Udayavani, Sep 25, 2020, 8:49 PM IST

ಎವಿಡೆನ್ಸ್‌ ಜೊತೆಬಂದವರು..

ಹೊಸತರ ಪ್ರಯೋಗಗಳನ್ನು ಮಾಡಲು ಬಯಸುವವರಿಗೆ ಸಿನಿಮಾದಲ್ಲಿ ಹತ್ತಾರು ಅವಕಾಶಗಳು ಇದ್ದೇ ಇರುತ್ತದೆ. ಇಂಥದ್ದೇ ಅವಕಾಶಗಳನ್ನು ಬಳಸಿಕೊಂಡು ಇಲ್ಲೊಂದು ಹೊಸಬರ ತಂಡ ಹೊಸ ಪ್ರಯೋಗದ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರಲು ಹೊರಟಿದೆ.

ಅಂದಹಾಗೆ, ಆ ಸಿನಿಮಾದ ಹೆಸರು “ಎವಿಡೆನ್ಸ್‌’. ಈ ಚಿತ್ರದ ವಿಶೇಷತೆ ಎಂದರೆ, ಕೇವಲ ಒಂದೇ ಲೊಕೇಶನ್‌ನಲ್ಲಿ, ಎರಡು ಪಾತ್ರಗಳನ್ನು ಇಟ್ಟುಕೊಂಡು ಇಡೀ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಇತ್ತೀಚೆಗಷ್ಟೇ ಸೆಟ್ಟೇರಿದ್ದ ಈ ಚಿತ್ರ ಕೇವಲ ಐದು ದಿನಗಳಲ್ಲಿ ತನ್ನ ಇಡೀ ಚಿತ್ರೀಕರಣವನ್ನು ಪೂರ್ಣಗೊಳಿಸಿ, ಈಗ ಪೋಸ್ಟ್‌ ಪ್ರೊಡಕ್ಷನ್‌ಕೆಲಸಗಳಲ್ಲಿ ನಿರತವಾಗಿದೆ.  ಯುವ ಪ್ರತಿಭೆ ಪ್ರವೀಣ್‌ ರಾಮಕೃಷ್ಣ “ಎವಿಡೆನ್ಸ್‌’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಇಂಥದ್ದೊಂದು ಸಿನಿಮಾ ಪ್ರಯೋಗದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರವೀಣ್‌ ರಾಮಕೃಷ್ಣ, “ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಇಂಥದ್ದೊಂದು ಸಿನಿಮಾ ಮಾಡಬಹುದಾ ಎಂಬ ಯೋಚನೆ ಬಂತು. ಅದರಂತೆ ಒಂದು ಕಥೆಯನ್ನು ಆಯ್ಕೆ ಮಾಡಿಕೊಂಡು ಸ್ಕ್ರಿಪ್ಟ್ ಕೂಡ ಮಾಡಿಕೊಂಡೆವು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ, ನಮ್ಮ ಪ್ಲಾನ್‌ ಪ್ರಕಾರ ಒಂದೇ ಲೊಕೇಶನ್‌ನಲ್ಲಿ, ಎರಡು ಕ್ಯಾರೆಕ್ಟರ್‌ಗಳನ್ನು ಇಟ್ಟುಕೊಂಡು, ಐದು ದಿನಗಳಲ್ಲಿ ಶೂಟಿಂಗ್‌ ಪೂರ್ಣಗೊಳಿಸಿದ್ದೇವೆ. ಇದೊಂದು ಸಸ್ಪೆನ್ಸ್‌ ಕಂ ಕ್ರೈಂ – ಥ್ರಿಲ್ಲರ್‌ ಶೈಲಿಯ ಸಿನಿಮಾ. ಒಬ್ಬ ಆರೋಪಿ ಮತ್ತು ತನಿಖಾ ಅಧಿಕಾರಿಯ ನಡುವೆ ಹೇಗೆ ವಿಚಾರಣೆ ಪ್ರಕ್ರಿಯೆ ನಡೆಯುತ್ತದೆ ಅನ್ನೋದರ ಸುತ್ತ ಇಡೀ ಸಿನಿಮಾ ಸಾಗುತ್ತದೆ’ ಎಂದು ವಿವರಣೆ ನೀಡುತ್ತಾರೆ.

“ಒಂದು ಸಿನಿಮಾವನ್ನು ಒಂದೇ ಜಾಗ ಮತ್ತು ಎರಡು ಪಾತ್ರಗಳನ್ನು ಬಳಸಿಕೊಂಡುಕಟ್ಟಿಕೊಡುವುದು ನಿಜಕ್ಕೂ ಸವಾಲಿನಕೆಲಸ. ಇಲ್ಲಿಯವರೆಗೆ ಎಲ್ಲೂ ಅನಾವರಣಗೊಳ್ಳದ ಸಸ್ಪೆನ್ಸ್‌ – ಥ್ರಿಲ್ಲರ್‌ ಕಥಾವಸ್ತು ಈ ಸಿನಿಮಾದಲ್ಲಿದೆ. ನೋಡುಗರು ಒಂದು ಕ್ಷಣವೂ ಅತ್ತಿತ್ತ ನೋಡದಂತೆ ಹಿಡಿದಿಡುವ ಪ್ರಯತ್ನ ಈ ಸಿನಿಮಾದಲ್ಲಿ ಮಾಡಿದ್ದೇವೆ’ ಎಂದು ಭರವಸೆಯ ಮಾತುಗಳನ್ನಾಡುತ್ತಾರೆ ನಿರ್ದೇಶಕ ಪ್ರವೀಣ್‌ ರಾಮಕೃಷ್ಣ. “ಧೃತಿ ಪ್ರೊಡಕ್ಷನ್ಸ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಎವಿಡೆನ್ಸ್‌’ ಚಿತ್ರದಲ್ಲಿ ಮಾನಸ ಜೋಶಿ ಮತ್ತು ರೋಬೋ ಗಣೇಶ್‌ ಎರಡು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ರವಿ ಸುವರ್ಣ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಕಾರ್ತಿಕ್‌ ವೆಂಕಟೇಶ್‌ ಸಂಗೀತ ಸಂಯೋಜಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.