ಏಕ್‌ ಖ್ವಾಬ್‌ ನನಸಾಯಿತು


Team Udayavani, Sep 14, 2018, 6:00 AM IST

face-face-kannada-movie.jpg

ನಾನು ಮಾತು ಕಡಿಮೆ. ಕೆಲಸ ಜಾಸ್ತಿ ಮಾಡ್ತೀನಿ …ಮೈಕು ಕೈಗೆ ಸಿಗುತ್ತಿದ್ದಂತೆಯೇ, ಏನು ಮಾತನಾಡಬೇಕೆಂದು ಯೋಚಿಸಿದ ಸಂದೀಪ್‌, ಕೊನೆಗೆ ಮೇಲೆ ಹೇಳಿದ ಸಾಲು ಹೇಳಿದರು. ಸಭಾಂಗಣದಲ್ಲಿದವರೆಲ್ಲಾ ಚಪ್ಪಾಳೆ ಹೊಡೆದರು. ಆ ನಂತರ ಮತ್ತೆ ಮೌನ. ಮಾತುಗಳಿಗೆ ಮತ್ತೆ ತಡಕಾಡಿದ ಸಂದೀಪ್‌, “ನಾನು ಉಪ್ಪಿ ಸಾರ್‌ ಜೊತೆಗೆ ಐದು ವರ್ಷ ಕೆಲಸ ಮಾಡಿದ್ದೆ. ಕಥೆ ಮಾಡಿಕೊಂಡು ನಿರ್ಮಾ­ಪಕರನ್ನು ಹುಡುಕುತ್ತಿದ್ದೆ. ಆದರೆ, ನಾನು ಚಿತ್ರ ಮಾಡಬಹುದು ಎಂದು ಯಾರೂ ನಂಬಲಿಲ್ಲ. ಕೊನೆಗೆ ನಾವೇ ಮಾಡೋಣ ಅಂತ ಒಂದು ಲೋ ಬಜೆಟ್‌ ಚಿತ್ರ ಪ್ಲಾನ್‌ ಮಾಡಿದೆವು. ಕೊನೆಗೆ ಅದು ಡಬ್ಬಲ್‌ ಆಯಿತು’ ಎಂದರು.

ಕಳೆದ ವರ್ಷ “ಫೇಸ್‌ 2 ಫೇಸ್‌’ ಎಂಬ ಚಿತ್ರ ಶುರು ಮಾಡಿದ್ದ ಸಂದೀಪ್‌ ಜನಾರ್ಧನ್‌, ಇದೀಗ ಆ ಚಿತ್ರವನ್ನು ಮುಗಿಸಿದ್ದಾರೆ. ಮುಂದಿನ ತಿಂಗಳು ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ಅವರು ತೀರ್ಮಾನಿಸಿದ್ದು, ಅದಕ್ಕೂ ಮುನ್ನ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. “ಏಕ್‌ ಖ್ವಾಬ್‌’ ಎಂಬ ಮುಂಬೈನ ತಂಡವೊಂದು ಹಾಡುಗಳನ್ನು ಸಂಯೋಜಿಸಿದ್ದು, ಕಳೆದ ವಾರ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಟ್ಟಡದಲ್ಲಿ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಹಾಡುಗಳನ್ನು ಬಿಡುಗಡೆ ಮಾಡಿದ್ದು ಹಿರಿಯ ನಟ ಶಿವರಾಮಣ್ಣ.

“ಫೇಸ್‌ 2 ಫೇಸ್‌’ ಚಿತ್ರದಲ್ಲಿ ರೋಹಿತ್‌ ಭಾನುಪ್ರಕಾಶ್‌ ನಾಯಕನಾಗಿ ಕಾಣಿಸಿಕೊಂಡರೆ, ಪೂರ್ವಿ ಜೋಷಿ ಮತ್ತು ದಿವ್ಯ ಉರುಡುಗ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ರವಿ ಭಟ್‌, ವೀಣಾ ಸುಂದರ್‌, ಸುಚೀಂದ್ರ ಪ್ರಸಾದ್‌, ಯಮುನಾ ಶ್ರೀನಿಧಿ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇಷ್ಟಕ್ಕೂ ಈ ಚಿತ್ರದ ಕಥೆ ಏನು ಅಥವಾ ಎಳೆ ಏನು ಎಂದು ನಿರ್ದೇಶಕರು ಹೇಳಲಿಲ್ಲ. ತುಂಬಾ ನರ್ವಸ್‌ ಆಗಿರುವುದಾಗಿಯೂ, ಸಿನಿಮಾದಲ್ಲೇ ನೋಡಬೇಕೆಂದು ಅವರು ಹೇಳಿದರು.

ಕೊನೆಗೆ ಚಿತ್ರದ ತಿರುಳೇನಿರಬಹುದು ಎಂದು ಹೇಳಿದ್ದು ಸಂಕಲನಕಾರ ಶ್ರೀ. “ಚಿತ್ರದ ಟೈಟಲ್‌ ನೋಡಿದರೆ ಇದೇನು ಮುಖಾ­ಮುಖೀನಾ? ಮುಖ­ವಾಡನಾ? ಅಥವಾ ಸ್ಪ್ಲಿಟ್‌ ಪರ್ಸ­ನಾಲಿಟಿಯಾ? ಎಂದನಿಸ­ಬಹುದು. ಅದೇ ಚಿತ್ರದ ಸಸ್ಪೆನ್ಸ್‌. ಸಂದೀಪ್‌ ಮಾತು ಕಡಿಮೆ­ಯಾದರೂ, ಅವರಿಗೆ ಕ್ಲಾರಿಟಿ ಇದೆ. ತಮಗೇನು ಬೇಕು ಎನ್ನುವುದು ಗೊತ್ತಿದೆ. ಅವರೊಬ್ಬ ಹಠವಾದಿ. ತಮಗೆ ಬೇಕಾಗಿದ್ದು ಬರುವವರೆಗೂ ಬಿಡುವುದಿಲ್ಲ’ ಎಂದು ಹೇಳಿದರು.

ನಾಯಕ ರೋಹಿತ್‌, ಈ ಚಿತ್ರದಲ್ಲಿ ಉದಯೋನ್ಮುಖ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ನಿಜಜೀವನದ ಪಾತ್ರವನ್ನೇ ಈ ಚಿತ್ರದಲ್ಲೂ ನಿರ್ವಹಿಸುತ್ತಿರುವುದಾಗಿ ಅವರು ಹೇಳಿದರು. ಇನ್ನು ದಿವ್ಯ ಉರುಡುಗ ಮತ್ತು ಪೂರ್ವಿ ಜೋಷಿಗೆ ನಿರ್ದೇಶಕರು ಕಥೆ ಹೇಳಿದಾಗ, ಏನೂ ಅರ್ಥವಾಗಲಿಲ್ಲವಂತೆ. ಮತ್ತೆ ಮತ್ತೆ ಕೇಳಿದಾಗ ಇಷ್ಟವಾಗಿ, ನಟಿಸಲು ಒಪ್ಪಿಕೊಂಡರಂತೆ. ಛಾಯಾಗ್ರಾಹಕ ವಿಶ್ವಜಿತ್‌ ರಾವ್‌, ನಿರ್ಮಾಪಕಿ ಸುಮಿತ್ರ, ಯಮುನಾ ಶ್ರೀನಿಧಿ, ರವಿ ಭಟ್‌ ಮುಂತಾದವರು ಈ ಸಮಾರಂಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.