ಫ್ಯಾನ್‌ ಮೊಗದಲ್ಲಿ ನಗು

ಹೊಸಬರಿಗೆ ಜೈ ಎಂದ ಪ್ರೇಕ್ಷಕ

Team Udayavani, Aug 30, 2019, 5:17 AM IST

f-28

ಕಳೆದ ವಾರ ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ‘ಫ್ಯಾನ್‌’ ಚಿತ್ರ ತೆರೆಗೆ ಬಂದಿದೆ. ಚಿತ್ರ ಬಿಡುಗಡೆಯಾದ ನಂತರ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿದ್ದು, ಚಿತ್ರ ತೆರೆಕಂಡ ಎಲ್ಲಾ ಕೇಂದ್ರಗಳಲ್ಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಾ ಎರಡನೇ ವಾರಕ್ಕೆ ಅಡಿಯಿಡುತ್ತಿದೆ. ಇದೇ ವೇಳೆ ತಮ್ಮ ಚೊಚ್ಚಲ ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಪ್ರತಿಕ್ರಿಯೆ ಕಂಡು ಖುಷಿಯಾಗಿರುವ ಚಿತ್ರತಂಡ, ತಮ್ಮ ಖುಷಿಯನ್ನು ಹಂಚಿಕೊಳ್ಳಲು ಮಾಧ್ಯಮಗಳ ಮುಂದೆ ಬಂದಿತ್ತು.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ದರ್ಶಿತ್‌ ಭಟ್, ‘ನಮ್ಮ ಮೊದಲ ಚಿತ್ರವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೋ, ಎನ್ನುವ ಆತಂಕ ಬಿಡುಗಡೆಗೂ ಮೊದಲು ಇತ್ತು. ಆದ್ರೆ ಚಿತ್ರ ಬಿಡುಗಡೆಯಾದ ನಂತರ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದಾಗ, ಆ ಆತಂಕ ಮಾಯವಾಗಿದೆ. ನನ್ನ ಪ್ರಕಾರ, ಚಿತ್ರಕ್ಕೆ ಇಬ್ಬರು ನಿರ್ಮಾಪಕರಿರುತ್ತಾರೆ. ಒಬ್ಬರು ನಿರ್ಮಾಣಕ್ಕೆ ಹಣ ಹಾಕುವವರು. ಇನ್ನೊಬ್ಬರು ನಿರ್ಮಾಣವಾದ ಚಿತ್ರವನ್ನು ಹಣ ಕೊಟ್ಟು ನೋಡುವವರು. ಒಬ್ಬರಿಗೆ ಸಿನಿಮಾಕ್ಕೆ ಹಾಕಿದ ಪೈಸಾ ವಸೂಲ್ ಆಗಬೇಕು ಮತ್ತೂಬ್ಬರಿಗೆ ಮನರಂಜನೆ ಕೊಟ್ಟು ಪೈಸಾ ವಸೂಲ್ ಸಿನಿಮಾ ಅನಿಸಬೇಕು. ಸದ್ಯ ‘ಫ್ಯಾನ್‌’ ಈ ಇಬ್ಬರೂ ನಿರ್ಮಾಪಕರಿಗೂ ಪೈಸಾ ವಸೂಲ್ ಸಿನಿಮಾ ಆಗುತ್ತಿದೆ. ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲೂ ಹೌಸ್‌ಫ‌ುಲ್ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಕರಾವಳಿ ಏರಿಯಾಗಳಲ್ಲಿ ಚಿತ್ರಕ್ಕೆ ತುಂಬಾ ಚೆನ್ನಾಗಿ ರೆಸ್ಪಾನ್ಸ್‌ ಸಿಗುತ್ತಿದೆ’ ಎಂದು ವಿವರಣೆ ನೀಡಿದರು.

ಇನ್ನು ನಾಯಕ ಆರ್ಯನ್‌, ಚಿತ್ರದಲ್ಲಿ ಜನಪ್ರಿಯ ಸೀರಿಯಲ್ ಒಂದರಲ್ಲಿ ಅಭಿನಯಿಸುತ್ತಿರುವ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯಕ್ಕೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆಯಂತೆ. ನಾಯಕಿ ಅದ್ವಿತಿ ಶೆಟ್ಟಿ ಉತ್ತರ ಕನ್ನಡದ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರಕ್ಕೂ ಎಲ್ಲರೂ ಸಾಕಷ್ಟು ಮೆಚ್ಚುಗೆ ಸೂಚಿಸುತ್ತಿದ್ದಾರಂತೆ. ಈ ಬಗ್ಗೆ ಮಾತನಾಡುವ ಅದ್ವಿತಿ ಶೆಟ್ಟಿ, ‘ಪೂರ್ಣ ಪ್ರಮಾಣದ ನಾಯಕಿಯಾಗಿ ಇದು ನನಗೆ ಮೊದಲನೇ ಚಿತ್ರ. ನಾಯಕಿಯಾಗಬೇಕು ಎನ್ನುವ ಹಲವು ವರ್ಷಗಳ ಕನಸು ಈ ಚಿತ್ರದಲ್ಲಿ ಈಡೇರಿದೆ. ಇನ್ನು ಚಿತ್ರಕ್ಕೂ ಕೂಡ ಎಲ್ಲಾ ಕಡೆಗಳಿಂದ ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದೆ. ನನ್ನ ಪಾತ್ರದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ನಮ್ಮ ಚಿತ್ರವನ್ನು ಕೆಲವರು ‘ಮುಂಗಾರು ಮಳೆ’ ಚಿತ್ರಕ್ಕೆ ಹೋಲಿಕೆ ಮಾಡಿ ಮಾತನಾಡುತ್ತಾರೆ’ ಎಂದು ತಮ್ಮ ಖುಷಿಯನ್ನು ಹಂಚಿಕೊಂಡರು.

‘ಫ್ಯಾನ್‌’ ಚಿತ್ರದಲ್ಲಿ ಆರ್ಯನ್‌ ಮತ್ತು ಅದ್ವಿತಿ ಶೆಟ್ಟಿ ಅವರೊಂದಿಗೆ ಮತ್ತೂಬ್ಬ ನಾಯಕಿಯಾಗಿ ಸಮೀಕ್ಷಾ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಮಂಡ್ಯ ರಮೇಶ್‌, ನವೀನ್‌ ಪಡೀಲ್, ರವಿಭಟ್, ವಿಜಯ್‌ ಕಾಶಿ, ಸ್ವಾತಿ, ವಿಟ್ಲ ಮಂಗೇಶ್‌ ಭಟ್, ಪ್ರಣತಿ ಆರ್‌.ಗಾಣಿಗ, ಪ್ರಸನ್ನ ಶೆಟ್ಟಿ, ಪೃಥ್ವಿ ಸಾಗರ್‌, ಗಣೇಶ್‌ ಕೊಡಾಣಿ, ಉದಯ್‌ ರಾಜು ಮೇಸ್ತಾ ಮೊದಲಾದವರು ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಒಟ್ಟಾರೆ ಹೊಸಬರ ‘ಫ್ಯಾನ್‌’ ಅನ್ನು ಕನ್ನಡ ಸಿನಿಮಾ ಫ್ಯಾನ್ಸ್‌ ನಿಧಾನವಾಗಿ ಮೆಚ್ಚಿಕೊಳ್ಳುತ್ತಿದ್ದು, ಚಿತ್ರತಂಡಕ್ಕೆ ಸಮಾಧಾನದ ನಿಟ್ಟುಸಿರು ಬಿಡುವಂತೆ ಮಾಡಿದೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.